Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]