ಬೆಳಗಾವಿ: 2A ಮೀಸಲಾತಿಗಾಗಿ (2A Reservation) ಆಗ್ರಹಿಸಿ ಇಂದು ಸಾವಿರಾರು ಜನ ಪಂಚಮಸಾಲಿ ಹೋರಾಟಗಾರರು ಸುವರ್ಣ ಸೌಧ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ.
ಪ್ರತಿಭಟನೆ ವೇಳೆ ಸರ್ಕಾರ ನಮ್ಮ ಸಮುದಾಯದ ಆಗ್ರಹವನ್ನು ನಿರ್ಲಕ್ಷಿಸಿದೆ ಎಂದು ಆಕ್ರೋಶಗೊಂಡ ಹೋರಾಟಗಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಅವರನ್ನು ತಡೆಯಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹೀಗಾಗಿ ಪ್ರತಿಭಟನಾಕಾರರನ್ನು ನಿಭಾಯಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಇನ್ನು ರಾಜ್ಯದ ಬೇರೆ ಜಿಲ್ಲೆಗಳಿಂದ ಬೆಳಗಾವಿಯ ಕಡೆಗೆ ಬರುತ್ತಿದ್ದ ಹೋರಾಟಗಾರರನ್ನು ಕೂಡ ಪೊಲೀಸರು ತಡೆಹಿಡಿದಿದ್ದು ನೂರಾರು ಜನರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳೆಗ್ಗೆ ವಿರೋಧ ಪಕ್ಷದ ನಾಯಕ ಬಿವೈ ವಿಜಯೇಂದ್ರ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರಿಗೆ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಹೋರಾಟ ತೀವ್ರ ಸ್ವರೂಪ ಪಡೆದಿದೆ.