ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬಸವರಾಜ ಬೊಮ್ಮಾಯಿ| 2A reservation

ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ (2A reservation) ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ ಕೊಟ್ಟಿಲ್ಲ, ನಾವು ಜಾರಿ ತಂದ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ರೈತ ವಿರೋಧಿ ಮತ್ತು ಜನ ವಿರೋಧಿ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಅದೇ ಹಿಂದುಳಿದ ವರ್ಗ ಹೆಚ್ಚಿನ ಮೀಸಲಾತಿ ಕೇಳುತ್ತಿರುವ ಸಂದರ್ಭದಲ್ಲಿ ಸಮಾಧಾನದಿಂದ ನ್ಯಾಯಸಮ್ಮತ ತೀರ್ಮಾನ ಮಾಡಬೇಕಿತ್ತು.

ಪಂಚಮಸಾಲಿ ಪೀಠದ ಸ್ವಾಮೀಜಿವರು ತಮ್ಮನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಈಗ ಪ್ರತಿಭಟನೆ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಬರುವಂತೆ ಮಾಡಿದ್ದು, ಕ್ಷಮಿಸಲಾರದಂತಹ ಅಪರಾಧ, ಇದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ. ಪೋಲಿಸ್ ಆಡಳಿತ, ದೌರ್ಜನ್ಯ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಓಲೈಕೆ ರಾಜಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಫಿಡವಿಟ್ ಬಗ್ಗೆ ಮಾತನಾಡಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನಾವೇ ಆದೇಶ ಮಾಡಿದ್ದೇವೆ.

ವೀರಶೈವ ಲಿಂಗಾಯತ ಸಮುದಾಯದ ಮೀಸಲಾತಿ 5% ರಿಂದ 7 ಕ್ಕೆ ಹೆಚ್ಚಿಸಿದ್ದೇವೆ. ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು 4%.ರಿಂದ 6% ಕ್ಕೆ ಹೆಚ್ಚಳ ಮಾಡಿದ್ದೇವೆ.

ನಾವೇ ಆದೇಶ ಮಾಡಿ, ನಾವೇ ಯಾಕೆ ತಡೆಯಾಜ್ಞೆ ತರುತ್ತೇವೆ. ಸಿದ್ದರಾಮಯ್ಯ ಅವರ ಬೆಂಬಲಿಗರೇ ಹಿನ್ನೆಲೆಯಲ್ಲಿ ನಿಂತು ಕೋರ್ಟ್ ಗೆ ಹೋದವರು. ಆಗ ನಾವು ಪೂರ್ಣ ವಾದ ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದೇವು. ಆಗ ಸುಪ್ರೀಂ ಕೋರ್ಟ್ ಇದನ್ನು ಸಂಪೂರ್ಣ ವಾದ ಆಲಿಸಿ ತೀರ್ಪು ಕೊಡುತ್ತೇವೆ‌.

ಅಲ್ಲಿಯವರೆಗೂ ರಾಜ್ಯ ಸರ್ಕಾರ ಈ ಆದೇಶ ಜಾರಿ ಮಾಡಬಾರದು ಅಂತ ಹೇಳಿತ್ತು. ನಾವು ಮುಂದಿನ ವಿಚಾರಣೆವರೆಗೂ ನಾವು ಈ ಆದೇಶ ಜಾರಿ ಮಾಡುವುದಿಲ್ಲ ಎಂದು ಹೇಳಿದ್ದೇವು. ಅದು ಬಿಟ್ಟು ನಾವು ಶಾಸ್ವತವಾಗಿ ನಮ್ಮ ಆದೇಶ ಹಿಂಪಡೆಯುತ್ತೇವೆ ಅಂತ ಹೇಳಿರಲಿಲ್ಲ.

ಇದೆಲ್ಲ ಗೊತ್ತಿದ್ದರೂ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಓದುತ್ತೇನೆ ಅಂತ ಹೇಳಿದ್ದಾರೆ‌. ಆದರೆ, ಸುಪ್ರೀಂ ಕೋರ್ಟ್ ಆದೇಶವನ್ನೇ ಮಾಡಿಲ್ಲ. 2023 ರ ಜೂನ್ ತಿಂಗಳಲ್ಲಿ ವಿಚಾರಣೆ ಮುಂದೂಡಿದ್ದರು.

ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಈ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ಸರ್ಕಾರದ ನಿಲುವು ಏನು ಅಂತ ಕೂಡ ಹೇಳುತ್ತಿಲ್ಲ ಎಂದು ಆರೋಪಿಸಿದರು.
ನಾವು ಮುಂದಿನ ವಿಚಾರಣೆವರೆಗೆ ಮಾತ್ರ ಅಂತ ಸ್ಪಷ್ಟವಾಗಿ ಹೇಳಿದ್ದೇವೆ. ಇವರು ಓಲೈಕೆ ರಾಜಕಾರಣ ಮಾಡಲು ಪಂಚಮಸಾಲಿ ಸಮುದಾಯದ ನ್ಯಾಯಯುತ ಬೇಡಿಕೆಗೆ ಅನ್ಯಾಯ ಮಾಡುತ್ತಿದೆ.

ಇದನ್ನು ಪ್ರತಿಪಕ್ಷಗಳು ಈಗಾಗಲೇ ಹೇಳಿವೆ. ಮುಖ್ಯಮಂತ್ರಿಗಳು ನಾವು ಸಲ್ಲಿಸಿದ್ದ ಅಫಿಡವಿಟನ್ನು ಪೂರ್ಣಪ್ರಮಾಣದಲ್ಲಿ ಸರಿಯಾದ ಅರ್ಥದಲ್ಲಿ ಓದಿದರೆ ಬಹಳ ಸ್ಪಷ್ಟವಾಗುತ್ತದೆ. ದಾರಿ ತಪ್ಪಿಸುವ ಕೆಲಸ ಆಗಬಾರದು ಎಂದು ಹೇಳಿದರು.

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]