ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬಸವರಾಜ ಬೊಮ್ಮಾಯಿ| 2A reservation

ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ (2A reservation) ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ ಕೊಟ್ಟಿಲ್ಲ, ನಾವು ಜಾರಿ ತಂದ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ರೈತ ವಿರೋಧಿ ಮತ್ತು ಜನ ವಿರೋಧಿ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಅದೇ ಹಿಂದುಳಿದ ವರ್ಗ ಹೆಚ್ಚಿನ ಮೀಸಲಾತಿ ಕೇಳುತ್ತಿರುವ ಸಂದರ್ಭದಲ್ಲಿ ಸಮಾಧಾನದಿಂದ ನ್ಯಾಯಸಮ್ಮತ ತೀರ್ಮಾನ ಮಾಡಬೇಕಿತ್ತು.

ಪಂಚಮಸಾಲಿ ಪೀಠದ ಸ್ವಾಮೀಜಿವರು ತಮ್ಮನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಈಗ ಪ್ರತಿಭಟನೆ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಬರುವಂತೆ ಮಾಡಿದ್ದು, ಕ್ಷಮಿಸಲಾರದಂತಹ ಅಪರಾಧ, ಇದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ. ಪೋಲಿಸ್ ಆಡಳಿತ, ದೌರ್ಜನ್ಯ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಓಲೈಕೆ ರಾಜಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಫಿಡವಿಟ್ ಬಗ್ಗೆ ಮಾತನಾಡಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನಾವೇ ಆದೇಶ ಮಾಡಿದ್ದೇವೆ.

ವೀರಶೈವ ಲಿಂಗಾಯತ ಸಮುದಾಯದ ಮೀಸಲಾತಿ 5% ರಿಂದ 7 ಕ್ಕೆ ಹೆಚ್ಚಿಸಿದ್ದೇವೆ. ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು 4%.ರಿಂದ 6% ಕ್ಕೆ ಹೆಚ್ಚಳ ಮಾಡಿದ್ದೇವೆ.

ನಾವೇ ಆದೇಶ ಮಾಡಿ, ನಾವೇ ಯಾಕೆ ತಡೆಯಾಜ್ಞೆ ತರುತ್ತೇವೆ. ಸಿದ್ದರಾಮಯ್ಯ ಅವರ ಬೆಂಬಲಿಗರೇ ಹಿನ್ನೆಲೆಯಲ್ಲಿ ನಿಂತು ಕೋರ್ಟ್ ಗೆ ಹೋದವರು. ಆಗ ನಾವು ಪೂರ್ಣ ವಾದ ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದೇವು. ಆಗ ಸುಪ್ರೀಂ ಕೋರ್ಟ್ ಇದನ್ನು ಸಂಪೂರ್ಣ ವಾದ ಆಲಿಸಿ ತೀರ್ಪು ಕೊಡುತ್ತೇವೆ‌.

ಅಲ್ಲಿಯವರೆಗೂ ರಾಜ್ಯ ಸರ್ಕಾರ ಈ ಆದೇಶ ಜಾರಿ ಮಾಡಬಾರದು ಅಂತ ಹೇಳಿತ್ತು. ನಾವು ಮುಂದಿನ ವಿಚಾರಣೆವರೆಗೂ ನಾವು ಈ ಆದೇಶ ಜಾರಿ ಮಾಡುವುದಿಲ್ಲ ಎಂದು ಹೇಳಿದ್ದೇವು. ಅದು ಬಿಟ್ಟು ನಾವು ಶಾಸ್ವತವಾಗಿ ನಮ್ಮ ಆದೇಶ ಹಿಂಪಡೆಯುತ್ತೇವೆ ಅಂತ ಹೇಳಿರಲಿಲ್ಲ.

ಇದೆಲ್ಲ ಗೊತ್ತಿದ್ದರೂ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಓದುತ್ತೇನೆ ಅಂತ ಹೇಳಿದ್ದಾರೆ‌. ಆದರೆ, ಸುಪ್ರೀಂ ಕೋರ್ಟ್ ಆದೇಶವನ್ನೇ ಮಾಡಿಲ್ಲ. 2023 ರ ಜೂನ್ ತಿಂಗಳಲ್ಲಿ ವಿಚಾರಣೆ ಮುಂದೂಡಿದ್ದರು.

ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಈ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ಸರ್ಕಾರದ ನಿಲುವು ಏನು ಅಂತ ಕೂಡ ಹೇಳುತ್ತಿಲ್ಲ ಎಂದು ಆರೋಪಿಸಿದರು.
ನಾವು ಮುಂದಿನ ವಿಚಾರಣೆವರೆಗೆ ಮಾತ್ರ ಅಂತ ಸ್ಪಷ್ಟವಾಗಿ ಹೇಳಿದ್ದೇವೆ. ಇವರು ಓಲೈಕೆ ರಾಜಕಾರಣ ಮಾಡಲು ಪಂಚಮಸಾಲಿ ಸಮುದಾಯದ ನ್ಯಾಯಯುತ ಬೇಡಿಕೆಗೆ ಅನ್ಯಾಯ ಮಾಡುತ್ತಿದೆ.

ಇದನ್ನು ಪ್ರತಿಪಕ್ಷಗಳು ಈಗಾಗಲೇ ಹೇಳಿವೆ. ಮುಖ್ಯಮಂತ್ರಿಗಳು ನಾವು ಸಲ್ಲಿಸಿದ್ದ ಅಫಿಡವಿಟನ್ನು ಪೂರ್ಣಪ್ರಮಾಣದಲ್ಲಿ ಸರಿಯಾದ ಅರ್ಥದಲ್ಲಿ ಓದಿದರೆ ಬಹಳ ಸ್ಪಷ್ಟವಾಗುತ್ತದೆ. ದಾರಿ ತಪ್ಪಿಸುವ ಕೆಲಸ ಆಗಬಾರದು ಎಂದು ಹೇಳಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!