ಶಾಲಾ ಪ್ರವಾಸಕ್ಕೆ ತೆರಳಿದ್ದ 4 ವಿದ್ಯಾರ್ಥಿನಿಯರು ನೀರುಪಾಲು.!| ಸ್ಥಳಕ್ಕೆ ಪೋಷಕರು| school trip

ಭಟ್ಕಳ: ಕೋಲಾರ ಜಿಲ್ಲೆಯ ಕೊತ್ತೂರಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ (school trip) ಬಂದಿದ್ದ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ನಾಲ್ವರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ.

ಒಟ್ಟು 7 ಜನರು ಸಮುದ್ರಕ್ಕೆ ತೆರಳಿದ್ದು ಇವರು ಅಲೆಗೆ ಸಿಲುಕಿದಾಗ ಮೂವರನ್ನು ಸ್ಥಳೀಯರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಉಳಿದಂತೆ ಓರ್ವಳ ಶವ ಪತ್ತೆಯಾಗಿದ್ದು, ಇನ್ನೂ ಮೂವರಿಗಾಗಿ ಹುಡುಕಾಟ ನಡೆದಿದೆ.

ಮಂಗಳವಾರ ಸಂಜೆ ಕೋಲಾರದ ಮುಳಬಾಗಿಲಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದರು. ಸಂಜೆ ಸಮುದ್ರದಂಚಿನಲ್ಲಿ ಆಟವಾಡುತ್ತಿರುವಾಗ ಓರ್ವ ವಿದ್ಯಾರ್ಥಿನಿ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದು ಇನ್ನೂ ಮೂವರು ಪತ್ತೆಯಾಗಿಲ್ಲ ಎನ್ನಲಾಗಿದೆ.

ಸಮುದ್ರದ ಅಲೆ ಹೊಡೆತಕ್ಕೆ ಆಳ ಸಮುದ್ರದಲ್ಲಿ ಕಣ್ಮರೆಯಾಗಿದ್ದು ಮುರುಡೇಶ್ವರ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದಲ್ಲಿ ಕರಾವಳಿ ಪೊಲೀಸ್ ಪಡೆ ಹುಡುಕಾಟ ಆರಂಭಿಸಿದೆ.

ಸಹಾಯಕ ಆಯುಕ್ತ ಡಾ.ನಯನಾ ಎನ್. ಹಾಗೂ ತಹಶೀಲ್ದಾರ್ ಅಶೋಕ ಭಟ್ಟ ಮುರ್ಡೇಶ್ವರದ ಆ‌ರ್. ಎನ್.ಎಸ್. ಆಸತ್ರೆಗೆ ಭೇಟಿ ನೀಡಿ ತೀವ್ರ ಅಸ್ವಸ್ಥಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ, ಉಳಿದವರಿಗೆಲ್ಲ ವಸತಿ ಸೇರಿ ಅಗತ್ಯ ವ್ಯವಸ್ಥೆ ಕಲ್ಪಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಸಮೃದ್ದಿ ಮಂಜುನಾಥ್, ಮುಳಬಾಗಿಲು ತಾಲ್ಲೂಕು, ಕೊತ್ತೂರು(ಬಾಲಸಂದ್ರ) ಮೊರಾರ್ಜಿ ದೇಸಾಯಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸದದಲ್ಲಿ ಮುರುಡೇಶ್ವರ ಸಮುದ್ರದ ಬಳಿ 4 ಮಕ್ಕಳು ಸಮುದ್ರದ ನೀರಿನಲ್ಲಿ ಅನಾಹುತವಾಗಿರುವ ಸುದ್ಧಿ ತಿಳಿದುಬಂದಿದೆ ಸ್ಥಳೀಯ ಸಂಭಂದಿಸಿದ ಅಧಿಕಾರಿಗಳೊಂದಿಗೆ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದು ಪೋಷಕರು ಯಾವುದೇ ರೀತಿಯ ಗೊಂದಲಕ್ಕೊಳಗಾಗದೇ ಧೈರ್ಯದಿಂದಿರಲು ಪ್ರಾರ್ಥಿಸುತ್ತೇನೆ..

ಪೋಲೀಸ್ ಇಲಾಖೆಯವರೊಂದಿಗೆ ಸಂಪರ್ಕಿಸಿ ಸಂಪೂರ್ಣ ಮಾಹಿತಿ ಪಡೆಯಲಾಯಿತು ನಾಪತ್ತೆಯಾಗಿರುವ 3 ಮಕ್ಕಳಿಗಾಗಿ ಶೋಧ ಕಾರ್ಯನಡೆಯುತ್ತಿದ್ದೆ.

ಸ್ಥಳದಲ್ಲಿಯೇ ನಮ್ಮ ಹಳೆಯ SP ರವರು ಈಗಿನ ಕಾರವಾರದ ಪೋಲೀಸ್ ವರಿಷ್ಠಾಧಿಕಾರಿಗಳು ಶ್ರೀ ನಾರಾಯಣ್ ಸರ್ ರವರು ಸಹ ಸ್ಥಳದಲ್ಲಿದ್ದು ಶೋಧ ಕಾರ್ಯವನ್ನು ಪರಿವೇಕ್ಷಿಸುತ್ತಿದ್ದಾರೆ.

ಒಟ್ಟು 3 ಮಕ್ಕಳು ಗಾಯಾಳುಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು 1ಮಗು ಪ್ರಾಣಕಳೆದುಕೊಂಡಿರುವುದು ತಿಳಿದು ನೋವಾಗಿದೆ..

ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಪೋಷಕರು ಧೈರ್ಯದಿಂದಿರಲೂ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಮುರುಡೇಶ್ವರದಲ್ಲಿ ನಡೆದ ಘಟನೆ ತುಂಬ ಮನಸ್ಸಿಗೆ ಘಾಸಿಯಾಗಿದ್ದು ಪೋಷಕರಿಗೆ ಮುಳಬಾಗಿಲಿನಿಂದ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಖುದ್ಧ ಸ್ಥಳಕ್ಕೆ ಭೇಟಿ ಮಾಡಲಿದ್ದೇನೆ. ಸಂಪೂರ್ಣ ಸಹಕಾರ ನೀಡುವಂತೆ ಈಗಾಗಲೇ ಅಧಿಕಾರಿಗಳಲ್ಲಿ ಕೋರಲಾಗಿದೆ.

ನೋವಿನ ಸಮಯದಲ್ಲಿ ತಾಳ್ಮೆ ಮತ್ತು ಧೈರ್ಯ ಅತಿಮುಖ್ಯವಾಗುತ್ತೆ. ಪೋಷಕರಲ್ಲಿ ವಿನಮ್ರದಿಂದ ಮನವಿ ಮಾಡುತ್ತೇನೆ ನಾನು ನಿಮ್ಮೊಂದಿಗಿರುತ್ತೇನೆ ಧೈರ್ಯದಿಂದಿರಿ ಎಂದು ಮನವಿ ಮಾಡಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!