ಎಸ್‌ಎಂ ಕೃಷ್ಣ ಅಂತಿಮ ಯಾತ್ರೆಯಲ್ಲಿ ಜನಸಾಗರ..!; ದಾರಿಯುದ್ದಕ್ಕೂ ಪುಷ್ಪಾರ್ಚನೆ ಮೂಲಕ ಅಂತಿಮ ನಮನ| SM Krishna

ಬೆಂಗಳೂರು: ರಾಜ್ಯದ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಬೆಳಗಿನ ಜಾವ 2.30ಕ್ಕೆ ನಿಧನರಾಗಿದ್ದಾರೆ.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೃಷ್ಣ ಅವರು ಪತ್ನಿ ಪ್ರೇಮಾ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಎಡೆಬಿಡದೇ ಅನಾರೋಗ್ಯ ಕಾಡಿತ್ತು. ಇತ್ತೀ ಚಿನವರೆಗೂ ಆರೋಗ್ಯ ಕಾಪಾಡಿಕೊಂಡಿದ್ದ ಅವರಿಗೆ 2 ವರ್ಷಗಳಲ್ಲಿ ಅನಾರೋಗ್ಯ ಕಾಡಿತ್ತು. ವರ್ಷದ ಹಿಂದೆ ಅನಾರೋಗ್ಯಗೊಂಡಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಆಗಸ್ಟ್ ತಿಂಗಳಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.

ಅಕ್ಟೋಬರ್‌ನಲ್ಲಿ ಅಸ್ವಸ್ಥರಾದಾಗ ಅವರನ್ನು ತೀವ್ರ ನಿಗಾಘಟಕದಲ್ಲಿ ಇರಿಸ ಲಾಗಿತ್ತು. ಗುಣಮುಖರಾಗಿ ಮನೆಗೆ ಬಂದಿದ್ದರು. ಆದರೆ ಮಂಗಳವಾರ ನಸುಕಿನ ಜಾವ 2.30 ರ ಸುಮಾರಿಗೆ ಮಲಗಿದಲ್ಲಿಯೇ ಹೃದಯಾಘಾತದಿಂದ ಅಸುನೀಗಿದರು.

ಕುಟುಂಬದವರಿಗೆ ಅನುಮಾನ ಬಂದು ಅವರು ಮಾತನಾಡಿ ಸಲು ಯತ್ನಿಸಿದರು. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಆಸ್ಪತ್ರೆಗೆ ದಾಖಲಿಸಬೇಕು ಅಂದುಕೊಂಡರಾದರೂ ತಮ್ಮ ವೈದ್ಯರಿಗೆ ಕರೆ ಮಾಡಿದರು. ಅವರು ಬಂದು ಪರೀಕ್ಷಿಸಿದಾಗ ಎಸ್.ಎಂ.ಕೃಷ್ಣ ಉಸಿರು ನಿಲ್ಲಿಸಿದ್ದರು.

ಇಂದು ಬೆಳಗ್ಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತಿಮ ಯಾತ್ರೆಯ ವಾಹನ ಬೆಂಗಳೂರಿನಿಂದ ಸೋಮನಹಳ್ಳಿಗೆ ವಿಶೇಷ ವಾಹನದ ಮೂಲಕ ಹೊರಟಿದೆ. ಪ್ರತಿಯೊಂದು ಮುಖ್ಯಸ್ಥಳಗಳಲ್ಲಿಯೂ ಸಹ ಅವರ ಅಭಿಮಾನಿಗಳು, ರಾಜಕೀಯ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ.

ವಾಹನವು ಸದಾಶಿವನಗರದಿಂದ ಹೊರಟು ಚಾಲುಕ್ಯ ವೃತ್ಯ, ಟೌನ್ ಹಾಲ್ ಮಾರ್ಗವಾಗಿ ಮೈಸೂರು ರಸ್ತೆಗೆ ತಲುಪಿ, ಬಳಿಕ ಅಲ್ಲಿಂದ ಕೆಂಗೇರಿ, ಬಿಡದಿ, ರಾಮನಗರ ದ ಮೂಲಕ ಹಾದು ಚನ್ನಪಟ್ಟಣದಿಂದ ಮದ್ದೂರಿಗೆ ತಲುಪಲಿದೆ

ಮಾರ್ಗದುದ್ದಕ್ಕೂ ರಸ್ತೆಯ ಬದಿಯಲ್ಲಿ ಗುಂಪುಗೂಡಿ ನಿಂತಿರುವ ಸಾರ್ವಜನಿಕರು, ಅಭಿಮಾನಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಎಸ್‌ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಎಸ್‌.ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ಸಹಸ್ರಾರು ಮಂದಿ ಆಗಮಿಸುತ್ತಿದ್ದು ಅವರೆಲ್ಲರ ಅನುಕೂಲಕ್ಕಾಗಿ ಯಥೋಚಿತ ವ್ಯವಸ್ಥೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾರ್ಗಾದ್ಯಂತ ಆಯೋಜಿಸಲಾಗಿದೆ. ರಾಜಕೀಯ ಗಣ್ಯರು, ಸಿನಿಮಾನಟರು, ಉದ್ಯಮಿಗಳೂ ಸೇರಿದಂತೆ ವಿವಿಧ ವಲಯಗಳ ಗಣ್ಯವ್ಯಕ್ತಿಗಳು ಎಸ್.ಎಂ. ಕೃಷ್ಣ ಅವರ ಅಂತಿಮ ದರ್ಶನಕ್ಕೆ ತಂಡೋಪತಂಡವಾಗಿ ಧಾವಿಸುತ್ತಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!