ಬೆಂಗಳೂರು: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ
ಅಲ್ಲದೆ ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.