50 ಗ್ರಾಪಂ, ಪಪಂ ಮೇಲ್ದರ್ಜೆಗೆ‌: ಸಚಿವ ಬಿ.ಎಸ್.ಸುರೇಶ್| BS Suresh

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ (BS Suresh) ಹೇಳಿದರು.

ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದ ವೇಳೆ ಅವರು ಸದನಕ್ಕೆ ಮಾಹಿತಿ ನೀಡಿದರು.

20,000 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಇದರೊಂದಿಗೆ ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ರಚನೆಗೆ ಮನವಿ

ಕುಮುಟ ಕ್ಷೇತ್ರದ ಶಾಸಕ ದಿನಕರ್ ಕೇಶವ್ ಶೆಟ್ಟಿಯವರು ಧಾರ್ಮಿಕ ಶ್ರದ್ಧಾ ಕ್ಷೇತ್ರವಾದ ಗೋಕರ್ಣ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಅಥವಾ ಪುರಸಭೆಯನ್ನಾಗಿ ಮೇಲ್ದರ್ಜೆ ಏರಿಸುವಂತೆ ಕೋರಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರಲ್ಲಿ ಕೋರಿದರು.

ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕರುಗಳಾದ ವಿಜಯೇಂದ್ರ, ಡಾ.ಅಶ್ವತ್ ನಾರಾಯಣ, ಸುನೀಲ್ ಕುಮಾರ್, ಭೈರತಿ ಬಸವರಾಜ್ ಅವರು ಗೋಕರ್ಣ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಸರ್ಕಾರ ಕೂಡಲೇ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಬೇಕು. ಲಕ್ಷಾಂತರ ಪ್ರವಾಸಿಗರು ಗೋಕರ್ಣಕ್ಕೆ ಆಗಮಿಸುತ್ತಾರೆ. ಆದ್ದರಿಂದ ಸರ್ಕಾರ ಸ್ವಚ್ಛತೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕಾಣೆಯಾಗಿವೆ ದೊಡ್ಡಬಳ್ಳಾಪುರದ ಎರಡು 108 ಆಂಬುಲೆನ್ಸ್..! ಹುಡುಕೋರ್ ಯಾರು..?| 108 ambulance

ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. 2011 ರ ಜನಗಣತಿಯಂತೆ ಗೋಕರ್ಣದಲ್ಲಿ 13,539 ಜನಸಂಖ್ಯೆ ಇದೆ. ವಿಸ್ತೀರ್ಣ 33.1 ಚದರ ಕಿ.ಮೀ. ಇದ್ದು, ಜನಸಾಂದ್ರತೆ ಪ್ರತೀ ಚದರ ಕಿ.ಮೀ.ಗೆ 409 ಇದೆ.

2015ರಲ್ಲಿ ಸಚಿವ ಸಂಪುಟ ಸಭೆಯಲ್ಲಿ 2011ರ ಜನಗಣತಿಯಲ್ಲಿ 15,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪಂಚಾಯಿತಿಗಳನ್ನು ಮಾತ್ರ ಮೇಲ್ದರ್ಜೆಗೆ ಏರಿಸಲು ಪರಿಗಣಿಸಲು ನಿರ್ಧರಿಸಲಾಗಿದೆ.

ಆದಾಗ್ಯೂ ಗೋಕರ್ಣದ ಪ್ರಕರಣವನ್ನು ವಿಶೇಷ ಎಂದು ಪರಿಗಣಿಸಿ, ಶಾಸಕರು, ಅಧಿಕಾರಿಗಳೊಂದಗೆ ಸಭೆ ನಡೆಸಿ ಸಕಾರಾತ್ಮವಾಗಿ ಕ್ರಮ ಕೈಗೊಳ್ಳುವುದಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.

ಇದೇ ವೇಳೆ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಹಾಗೂ ಕಮಲ್‌ನಗರವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ರಹೀಂ ಖಾನ್ ಅವರಲ್ಲಿ ಮನವಿ ಮಾಡಿದರು.

ರಾಜಕೀಯ

ನಾಳೆ ದೊಡ್ಡಬಳ್ಳಾಪುರದಲ್ಲಿ JDS ಸಾಮಾಜಿಕ ಜಾಲತಾಣ ಕಾರ್ಯಾಗಾರ

ನಾಳೆ ದೊಡ್ಡಬಳ್ಳಾಪುರದಲ್ಲಿ JDS ಸಾಮಾಜಿಕ ಜಾಲತಾಣ ಕಾರ್ಯಾಗಾರ

ದೊಡ್ಡಬಳ್ಳಾಪುರ: ನಗರದ ಜೆಡಿಎಸ್ (JDS) ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ಕಾರ್ಯಾಗಾರವನ್ನು ನಾಳೆ (ನ.28) ರಂದು ಆಯೋಜಿಸಲಾಗಿದೆ.

[ccc_my_favorite_select_button post_id="116768"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರ ರಂಗಪ ಸರ್ಕಲ್ ಬಳಿಯ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ (Shirdi Sai Baba temple) ಬುಧವಾರ ರಾತ್ರಿ ಹುಂಡಿ ಕಳ್ಳತನವಾಗಿದೆ.

[ccc_my_favorite_select_button post_id="116765"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!