ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಕಿಡಿ ನುಡಿ| Cmsiddaramaiah

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಹೋರಾಟಕ್ಕೆ ಬಿಜೆಪಿ ಬೆಂಬಲ

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]