ಅಲ್ಲು ಅರ್ಜುನ್ ಬಂಧನಕ್ಕೆ ಕಾರಣ ಬಿಚ್ಚಿಟ್ಟ ಸಿಎಂ..!| Pushpa 2

ಹೈದರಾಬಾದ್: ಪುಷ್ಪ 2 (Pushpa 2) ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ‌ಗೆ ಇಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಅನಿವಾರ್ಯತೆ ಎದುರಾಗಿದ್ದು, ಅದೃಷ್ಟವಶಾತ್ ಹೈಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಗುಳಿಯಬೇಕಾಯಿತೆ ಹೊರತು, ಇಲ್ಲವಾದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಬೇಕಾಗಿತ್ತು.

ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಇಂದು ಬಂಧಿಸಲಾಗಿತ್ತು.

ಈ ವಿಷಯ ರಾಷ್ಟ್ರ ಮಟ್ಟದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ಬಣ ಪಡೆದುಕೊಂಡಿದೆ.

ವಿಪಕ್ಷಗಳ ಆಕ್ಷೇಪ: ಇನ್ನೂ ಅಲ್ಲು ಅರ್ಜುನ್ ಬಂಧಿಸಿರುವುದನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಬಿಆರ್​ಎಸ್ ಖಂಡಿಸಿದ್ದು, ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಪ್ರಖ್ಯಾತ ಸ್ಟಾರ್ ನಟನೊಬ್ಬನೊಂದಿಗೆ ಸರ್ಕಾರ ನಡೆದುಕೊಂಡಿರುವ ರೀತಿ ಸರಿಯಲ್ಲ ಎಂದು ಅವು ಹೇಳಿವೆ.

ಅಲ್ಲು ಅರ್ಜುನ್ ಅವರೊಂದಿಗೆ ಇನ್ನಷ್ಟು ಉತ್ತಮವಾಗಿ ವ್ಯವಹರಿಸಬಹುದಿತ್ತು ಎಂದು ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಹೇಳಿದ್ದರೆ, ಖ್ಯಾತ ನಟನನ್ನು ಸಾಮಾನ್ಯ ಕ್ರಿಮಿನಲ್​ಗಳಂತೆ ನಡೆಸಿಕೊಂಡಿರುವುದು ಸರಿಯಲ್ಲ ಎಂದು ಬಿಆರ್​ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಪ್ರತಿಕ್ರಿಯೆ: ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದ ವೇಳೆ ಅಲ್ಲು ಅರ್ಜುನ್ ಬಂಧನಕ್ಕೆ ಕಾರಣಗಳ ಬಗ್ಗೆ ಸಿಎಂ ರೇವಂತ್ ರೆಡ್ಡಿ ಉತ್ತರಿಸಿದ್ದಾರೆ.

ಡಿ.4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ-2 ಸಿನಿಮಾದ ಪ್ರಿಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಸಿನಿಮಾ ನೋಡಲು ಬಂದಿದ್ದು, ಸಿನಿಮಾ ನೋಡಿ ಹೊರಡದೆ, ಕಾರಿನ ಮೇಲೆ ಕೂತು ಅಭಿಮಾನಿಗಳನ್ನು ಪ್ರಚೋದಿಸಿದ್ದಾರೆ.

ಅಲ್ಲದೆ ಚಿತ್ರಮಂದಿರಕ್ಕೆ ಭೇಟಿಯ ಕುರಿತು ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿಲ್ಲ, ಸಿನಿಮಾ ನೋಡಲು ಬಂದವರು ಕಾರಲ್ಲಿ ಬಂದು ಸುಮ್ಮನೆ ಸಿನಿಮಾ ನೋಡಿ ತೆರಳಿದ್ದರೆ ಯಾವುದೇ ಸಮಸ್ಯೆ ಆಗ್ತಾ ಇರಲಿಲ್ಲ. ಚಿತ್ರಮಂದಿರಕ್ಕೆ ಬರುವ ವೇಳೆ ಏಕಾಏಕಿ ಕಾರಿನ ಮೇಲೆ ಕೂತು ಅಭಿಮಾನಿಗಳನ್ನು ಕೆರಳಿಸಿದ ಕಾರಣ, ಕಾಲ್ತುಳಿತ ಉಂಟಾಗಿ ಮಹಿಳೆ ಸಾವನಪ್ಪಿದ್ದಲ್ಲದೆ, ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದ.

ಇದರಿಂದಾಗಿ ಪೊಲೀಸರು ಕಾನೂನಿನ ಅನ್ವಯ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಅವರನ್ನು ಆರೋಪಿ 11 ಮಾಡಿ, ಬಂಧಿಸಿದ್ದಾರೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!