ಅಲ್ಲು ಅರ್ಜುನ್ ಬಂಧನಕ್ಕೆ ಕಾರಣ ಬಿಚ್ಚಿಟ್ಟ ಸಿಎಂ..!| Pushpa 2

ಹೈದರಾಬಾದ್: ಪುಷ್ಪ 2 (Pushpa 2) ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ‌ಗೆ ಇಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಅನಿವಾರ್ಯತೆ ಎದುರಾಗಿದ್ದು, ಅದೃಷ್ಟವಶಾತ್ ಹೈಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಗುಳಿಯಬೇಕಾಯಿತೆ ಹೊರತು, ಇಲ್ಲವಾದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಬೇಕಾಗಿತ್ತು.

ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಇಂದು ಬಂಧಿಸಲಾಗಿತ್ತು.

ಈ ವಿಷಯ ರಾಷ್ಟ್ರ ಮಟ್ಟದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ಬಣ ಪಡೆದುಕೊಂಡಿದೆ.

ವಿಪಕ್ಷಗಳ ಆಕ್ಷೇಪ: ಇನ್ನೂ ಅಲ್ಲು ಅರ್ಜುನ್ ಬಂಧಿಸಿರುವುದನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಬಿಆರ್​ಎಸ್ ಖಂಡಿಸಿದ್ದು, ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಪ್ರಖ್ಯಾತ ಸ್ಟಾರ್ ನಟನೊಬ್ಬನೊಂದಿಗೆ ಸರ್ಕಾರ ನಡೆದುಕೊಂಡಿರುವ ರೀತಿ ಸರಿಯಲ್ಲ ಎಂದು ಅವು ಹೇಳಿವೆ.

ಅಲ್ಲು ಅರ್ಜುನ್ ಅವರೊಂದಿಗೆ ಇನ್ನಷ್ಟು ಉತ್ತಮವಾಗಿ ವ್ಯವಹರಿಸಬಹುದಿತ್ತು ಎಂದು ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಹೇಳಿದ್ದರೆ, ಖ್ಯಾತ ನಟನನ್ನು ಸಾಮಾನ್ಯ ಕ್ರಿಮಿನಲ್​ಗಳಂತೆ ನಡೆಸಿಕೊಂಡಿರುವುದು ಸರಿಯಲ್ಲ ಎಂದು ಬಿಆರ್​ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಪ್ರತಿಕ್ರಿಯೆ: ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದ ವೇಳೆ ಅಲ್ಲು ಅರ್ಜುನ್ ಬಂಧನಕ್ಕೆ ಕಾರಣಗಳ ಬಗ್ಗೆ ಸಿಎಂ ರೇವಂತ್ ರೆಡ್ಡಿ ಉತ್ತರಿಸಿದ್ದಾರೆ.

ಡಿ.4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ‘ಪುಷ್ಪ-2 ಸಿನಿಮಾದ ಪ್ರಿಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಸಿನಿಮಾ ನೋಡಲು ಬಂದಿದ್ದು, ಸಿನಿಮಾ ನೋಡಿ ಹೊರಡದೆ, ಕಾರಿನ ಮೇಲೆ ಕೂತು ಅಭಿಮಾನಿಗಳನ್ನು ಪ್ರಚೋದಿಸಿದ್ದಾರೆ.

ಅಲ್ಲದೆ ಚಿತ್ರಮಂದಿರಕ್ಕೆ ಭೇಟಿಯ ಕುರಿತು ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿಲ್ಲ, ಸಿನಿಮಾ ನೋಡಲು ಬಂದವರು ಕಾರಲ್ಲಿ ಬಂದು ಸುಮ್ಮನೆ ಸಿನಿಮಾ ನೋಡಿ ತೆರಳಿದ್ದರೆ ಯಾವುದೇ ಸಮಸ್ಯೆ ಆಗ್ತಾ ಇರಲಿಲ್ಲ. ಚಿತ್ರಮಂದಿರಕ್ಕೆ ಬರುವ ವೇಳೆ ಏಕಾಏಕಿ ಕಾರಿನ ಮೇಲೆ ಕೂತು ಅಭಿಮಾನಿಗಳನ್ನು ಕೆರಳಿಸಿದ ಕಾರಣ, ಕಾಲ್ತುಳಿತ ಉಂಟಾಗಿ ಮಹಿಳೆ ಸಾವನಪ್ಪಿದ್ದಲ್ಲದೆ, ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದ.

ಇದರಿಂದಾಗಿ ಪೊಲೀಸರು ಕಾನೂನಿನ ಅನ್ವಯ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಅವರನ್ನು ಆರೋಪಿ 11 ಮಾಡಿ, ಬಂಧಿಸಿದ್ದಾರೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!