ಕಾಣೆಯಾಗಿವೆ ದೊಡ್ಡಬಳ್ಳಾಪುರದ ಎರಡು 108 ಆಂಬುಲೆನ್ಸ್..! ಹುಡುಕೋರ್ ಯಾರು..?| 108 ambulance

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ 108 ಆಂಬುಲೆನ್ಸ್ (108 ambulance) ಸಮಸ್ಯೆ ಮತ್ತೆ ಮಿತಿಮೀರಿದ್ದು, ಕೇವಲ ಮೂರು ಆಂಬುಲೆನ್ಸ್ ಇಡೀ ತಾಲೂಕಿನ ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇತ್ತೀಚೆಗಷ್ಟೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವ ತುರ್ತು ಸಮಯದಲ್ಲಿ 108 ಆಂಬುಲೆನ್ಸ್ ಸಿಗದೆ ಸಾವನಪ್ಪಿರುವ ಪ್ರಕರಣ ತಾಲೂಕಿನಲ್ಲಿ 108 ಆಂಬುಲೆನ್ಸ್ ಸಮಸ್ಯೆ ಎಷ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿತ್ತು.

ಈ ಕುರಿತು ಕನ್ನಡ ಪರ ಸಂಘಟನೆಗಳು ಅಧಿಕಾರಿಗಳು, ಜನಪ್ರತಿನಿದಿಗಳ ಗಮನಕ್ಕೂ ತಂದಿದ್ದರು. ನಂತರ ಏಕಾಏಕಿ ಕಾಣೆಯಾಗಿದ್ದ ಅಂಬುಲೆನ್ಸ್ ರಸ್ತೆಗಿಳಿದವು. ಆದರೆ ಕೇವಲ ಒಂದು ವಾರದ ನಂತರ ಎರಡು ಆಂಬುಲೆನ್ಸ್ ಕಾಣೆಯಾಗಿದ್ದು, ಹಲವು ತಿಂಗಳು ಕಳೆದರು ಪತ್ತೆಯಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನ ನಗರ, ಘಾಟಿ ಮಧುರೆ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಒಟ್ಟು ಐದು 108 ಅಂಬುಲೆನ್ಸ್ ಕಾರ್ಯ ನಿರ್ವಹಿಸಬೇಕಿದೆ. ಆದರೆ ಪ್ರಸ್ತುತ ಕಾರ್ಯನಿರ್ವವಹಿಸುತ್ತಿರುವುದು ಮೂರು ಆಂಬುಲೆನ್ಸ್ ಮಾತ್ರ.

ನಿರ್ಲಕ್ಷ್ಯ; 108 ಆಂಬುಲೆನ್ಸ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ತುರ್ತು ಸಂದರ್ಭದಲ್ಲಿ ವರದಾನವಾಗಿದ್ದ ಯೋಜನೆ ಸಂಪೂರ್ಣವಾಗಿ ಹಳ್ಳಹಿಡಿಯುತ್ತಿದೆ ಎಂದು ಪದೇ ಪದೇ ಮಾಧ್ಯಮಗಳು, ಸಂಘ ಸಂಸ್ಥೆಗಳು ದನಿ ಎತ್ತಬೇಕಿದೆ.

ಪ್ರಸ್ತುತ ದೊಡ್ಡಬೆಳವಂಗಲ, ಎಸ್‌ಎಸ್ ಘಾಟಿ 108 ಅಂಬುಲೆನ್ಸ್ ದುರಸ್ತಿಗೆ ತೆರಳಿ ಹಲವು ತಿಂಗಳು ಕಳೆದರು ಪತ್ತೆಯಿಲ್ಲವಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದಾಗ ಪ್ರತ್ಯಕ್ಷವಾಗಿ ಮತ್ತೆ ಕಣ್ಮರೆಯಾಗುತ್ತವೆ.

ಆಗಸ್ಟ್ 09 ರಂದು ಟಿಬಿ ವೃತ್ತದ ಬಳಿ ಮೊಗಚಿ ಬಿದ್ದ ವೇಳೆ ಗ್ಯಾರೆಜ್ ಸೇರಿದ ಘಾಟಿ ಸುಬ್ರಮಣ್ಯ ವ್ಯಾಪ್ತಿಯ ಅಂಬುಲೆನ್ಸ್ 5 ತಿಂಗಳುಗಳು ಕಳೆದರು ಇದುವರೆಗೂ ಪತ್ತೆ ಇಲ್ಲ ಎಂದರೆ ಇದರ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಎಷ್ಟಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಉಳಿದಿರುವ ದೊಡ್ಡಬಳ್ಳಾಪುರ ನಗರ ಮಧುರೆ, ಸಾಸಲು ವ್ಯಾಪ್ತಿಗೆ ಸೇರಿದ 108 ಅಂಬುಲೆನ್ಸ್ಗಳು ಇಡೀ ತಾಲೂಕು ಅಲ್ಲದೆ ಅಕ್ಕಪಕ್ಕದ ತಾಲೂಕಿಗೂ ಸೇವೆ ನೀಡಬೇಕಾದ ಅನಿವಾರ್ಯತೆಯಲ್ಲಿವೆ‌

ತಾಲೂಕಿನಲ್ಲಿ ಖಾಸಗಿ ಆಂಬುಲೆನ್ಸ್ ಹೆಚ್ಚಾಗಿದ್ದು, ಕೆಲವರ ಲಾಭಿಯಿಂದಾಗಿ 108 ಆಂಬುಲೆನ್ಸ್ ವ್ಯವಸ್ಥೆ ಹಾಳಾಗುತ್ತಿದೆ ಎಂಬ ಆರೋಪ ಕೂಡ ವ್ಯಾಪಕವಾಗಿದೆ.

ಶಡ್ಯಂತ್ರದ ಶಂಕೆ: ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ಆದರೆ ಸರ್ಕಾರಿ ಆಸ್ಪತ್ರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಹಿನ್ನಡೆಯಾಗುತ್ತದೆ. ಅದೇ ಖಾಸಗಿ ಆಂಬುಲೆನ್ಸ್ ಆದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭ ಎಂಬ ದುರುದ್ದೇಶದಿಂದ 108 ಆಂಬುಲೆನ್ಸ್ ವ್ಯವಸ್ಥೆ ಹಾಳುಗೆಡವಲು ಕೆಲ ಪ್ರಭಾವಿಗಳು ಈ ರೀತಿ ಶಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣ್ಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಆರೋಪಿಸಿದ್ದಾರೆ.

ಇದೇ ಕಾರಣಕ್ಕೆ 108 ಆಂಬುಲೆನ್ಸ್ ಸೌಲಭ್ಯ ಸಮರ್ಪಕವಾಗಿ ದೊರಕುವಂತಾಗಲು ಯಾರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ವ್ಯಾಪಕವಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!