ಹರಿತಲೇಖನಿ ದಿನಕ್ಕೊಂದು ಕಥೆ: ಪರಿವರ್ತನೆ| Daily Story

Daily Story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಈ ಅರಸ ಬಹಳ ಹೃದಯವಂತ; ಆದರೆ, ಅಷ್ಟೇ ಸೋಮಾರಿ. ತನ್ನ ‘ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡುವುದಿರಲಿ, ಸ್ವತಃ ಪ್ರಜೆಗಳನ್ನೂ ಸರಿಯಾಗಿ ಮಾತನಾಡಿಸುತ್ತಿರಲಿಲ್ಲ.

ಅರಸ ಮಾಡುತ್ತಿದ್ದುದು ಎರಡೇ ಕೆಲಸ. ಒಂದು ತಿನ್ನುವುದು, ಇನ್ನೊಂದು ಮಲಗುವುದು. ಬರ ಬರುತ್ತಾ ಅವನ ಆರೋಗ್ಯ ಹದಗೆಡತೊಡಗಿತು. ದೇಹದಲ್ಲಿ ಬೊಜ್ಜು ತುಂಬಿ ಅನಾರೋಗ್ಯ ಪೀಡಿತನಾದ. ಎದ್ದೇಳಲೂ ಆಗದಂತಹ ಪರಿಸ್ಥಿತಿ ಬಂತು.

ತನ್ನ ಮಂತ್ರಿಯನ್ನು ಕರೆದು ಅರಮನೆಗೇ ವೈದ್ಯರನ್ನು ಕರೆಯಲು ಆಜ್ಞೆ ಮಾಡಿದ. ಆದರೆ ಯಾವ ವೈದ್ಯರೂ ರಾಜನ ಬಳಿ ಬರಲಿಲ್ಲ. ಆಗ ಒಬ್ಬ ಪ್ರಜೆ ಬಂದು ರಾಜನ ಬಳಿ ಹೀಗೆ ಹೇಳಿದ:

‘ಪ್ರಭುಗಳೇ, ಇಲ್ಲೇ ಎರಡು ಕಿಲೋ ಮೀಟರ್ ದೂರದಲ್ಲಿ ಒಬ್ಬ ಸಾಧು ಇದ್ದಾನೆ. ಆತ ಬೊಜ್ಜಿನಿಂದ ಬರುವ ಕಾಯಿಲೆಗೆ ಒಳ್ಳೆಯ ಔಷಧಿ ಕೊಡುತ್ತಾನೆ. ಆತ ಕೊಡುವ ಮದ್ದಿನಿಂದ ಬೊಜ್ಜು ಕರಗಿ ಬೇಗನೆ ಕಾಯಿಲೆ ವಾಸಿಯಾಗುತ್ತದೆ’ ಎಂದ.

‘ಆ ಸಾಧು ಸಂತನನ್ನು ಅರಮನೆಗೆ ಬರಹೇಳು’ ಎಂದು ಆಜ್ಞೆ ಮಾಡಿದ ಮಹಾರಾಜ.

‘ಪ್ರಭುಗಳೇ, ಆ ಸಾಧು ಸಂತ ಅರಮನೆಗೆ ಬರಲಾರ; ತಾವೇ ಅಲ್ಲಿಗೆ ದಯಮಾಡಿಸಬೇಕು. ಅದೂ ಕೂಡ ಯಾವುದೇ ವಾಹನದಲ್ಲಿ ಹೋಗುವಂತಿಲ್ಲ; ಕಾಲ್ನಡಿಗೆಯಲ್ಲೇ ಹೋಗಬೇಕು. ಹಾಗಿದ್ದರೆ ಮಾತ್ರ. ಆತ ಚಿಕಿತ್ಸೆ ಕೊಡುತ್ತಾನೆ’ ಎಂದ.

ಕೊನೆಗೂ ರಾಜ ಹೇಗೋ ಪ್ರಯಾಸಪಟ್ಟು ನಡೆದುಕೊಂಡೇ ಸಾಧು ಸಂತನ ಆಶ್ರಮಕ್ಕೆ ಹೋದ. ಆದರೆ ಅಲ್ಲಿ ಆ ಸಾಧು ಸಂತ ಇರಲೇ ಇಲ್ಲ. ಮರುದಿನ ಪುನಃ ರಾಜ ನಡೆದುಕೊಂಡೇ ಚಿಕಿತ್ಸೆಗಾಗಿ ತೆರಳಿದ. ಮಾರನೆ ದಿನವೂ ಸಾಧುಸಂತ ಕಣ್ಮರೆ.

ಮೂರನೆ ದಿನ, ನಾಲ್ಕನೆ ದಿನ… ಹೀಗೆ ಒಂದು ತಿಂಗಳು ಪೂರ್ತಿ ಎರಡೆರಡು ಕಿಲೋ ಮೀಟರ್ ನಡೆದುಕೊಂಡೇ ಆಶ್ರಮಕ್ಕೆ ಹೋಗಿ ಬಂದ ಆ ಮಹಾರಾಜ. ಒಂದು ತಿಂಗಳು ಕಳೆದು ಮತ್ತೊಂದು ದಿನ ಮಹಾರಾಜ ಆಶ್ರಮಕ್ಕೆ ಬಂದಾಗ ಸಾಧು ಸಂತ ಪ್ರತ್ಯಕ್ಷನಾದ.

ಅಷ್ಟು ಹೊತ್ತಿಗೆ ಮಹಾರಾಜನ ಬೊಜ್ಜು ಕರಗಿ ತೂಕವೂ ಬಹಳಷ್ಟು ಇಳಿದು ಹೋಗಿತ್ತು. ಅರಸನ ಆರೋಗ್ಯ ಸಾಕಷ್ಟು ಸುಧಾರಿಸತೊಡಗಿತ್ತು.

ಕೊನೆಯ ದಿನ ಮಹಾರಾಜನನ್ನು ಪರೀಕ್ಷೆ ಮಾಡಿದ ಸಾಧು ಸಂತ, ‘ಪ್ರಭು… ನೀವು ಬರೀ ತಿಂದು ಮಲಗಿದರೆ ಇದೇ ರೀತಿ ತೂಕ ಏರಿ ಬೊಜ್ಜು ತುಂಬಿ ಆರೋಗ್ಯ ಹದಗೆಡುತ್ತದೆ. ಅದಕ್ಕಾಗಿ ದಿನ ನಿತ್ಯ ಐದೈದು ಕಿಲೋಮೀಟರ್ ನಡೆಯಬೇಕು.
ನೀವು ಬೊಜ್ಜು ಕರಗಿಸಿಕೊಳ್ಳಬೇಕು ಎಂದೇ ನಾನು ಒಂದು ತಿಂಗಳು ನೀವು ಬರುವ ಹೊತ್ತಿನಲ್ಲಿ ಮರೆಯಲ್ಲಿ ಇರುತ್ತಿದ್ದೆ. ಆದರೆ ನಿಮ್ಮ ದೈಹಿಕ ಸ್ಥಿತಿಯನ್ನು ಗಮನಿಸುತ್ತಲೇ ಇದ್ದೆ. ಈಗ ನೀವು ಆರಾಮವಾಗಿದ್ದೀರಿ. ಪ್ರತಿನಿತ್ಯ ಬರೀ ತಿಂದು ಮಲಗುವುದನ್ನು ಬಿಟ್ಟು ರಾಜ್ಯದ ಜನರ ಹಿತಾಸಕ್ತಿ ಗಮನಿಸಿ. ಆರೋಗ್ಯದ ಕಡೆ ನಿಗಾ ವಹಿಸಿ, ನಡಿಗೆಯನ್ನು ಸತತವಾಗಿ ಮಾಡಿ. ನೀವು ದೀರ್ಘಕಾಲ ಬಾಳುವಿರಿ..’ ಎಂದು ಸಲಹೆ ಕೊಟ್ಟ.

ರಾಜ ಸೋಮಾರಿತನ ಬಿಟ್ಟ. ಸಾಧುಸಂತನ ಮಾತನ್ನು ಚಾಚೂ ತಪ್ಪದೆ ಪಾಲಿಸತೊಡಗಿದ. ಬೇಗ ಆರೋಗ್ಯವಂತನಾದ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಒಂದೇ ತಿಂಗಳಲ್ಲಿ ಸಾಕಷ್ಟು ಮನ ಪರಿವರ್ತನೆ ಮಾಡಿಕೊಂಡ. ಪ್ರಜೆಗಳ ಕಷ್ಟ ಸುಖ ವಿಚಾರಿಸತೊಡಗಿದ. ಉತ್ತಮ ಆಡಳಿತ ನೀಡಿದ. ಪ್ರಜೆಗಳೆಲ್ಲರಿಗೂ ಖುಷಿ, ಸಮಾಧಾನವಾಯಿತು.p

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!