ಹರಿತಲೇಖನಿ ದಿನಕ್ಕೊಂದು ಕಥೆ: ಪರಿವರ್ತನೆ| Daily Story

Daily Story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಈ ಅರಸ ಬಹಳ ಹೃದಯವಂತ; ಆದರೆ, ಅಷ್ಟೇ ಸೋಮಾರಿ. ತನ್ನ ‘ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡುವುದಿರಲಿ, ಸ್ವತಃ ಪ್ರಜೆಗಳನ್ನೂ ಸರಿಯಾಗಿ ಮಾತನಾಡಿಸುತ್ತಿರಲಿಲ್ಲ.

ಅರಸ ಮಾಡುತ್ತಿದ್ದುದು ಎರಡೇ ಕೆಲಸ. ಒಂದು ತಿನ್ನುವುದು, ಇನ್ನೊಂದು ಮಲಗುವುದು. ಬರ ಬರುತ್ತಾ ಅವನ ಆರೋಗ್ಯ ಹದಗೆಡತೊಡಗಿತು. ದೇಹದಲ್ಲಿ ಬೊಜ್ಜು ತುಂಬಿ ಅನಾರೋಗ್ಯ ಪೀಡಿತನಾದ. ಎದ್ದೇಳಲೂ ಆಗದಂತಹ ಪರಿಸ್ಥಿತಿ ಬಂತು.

ತನ್ನ ಮಂತ್ರಿಯನ್ನು ಕರೆದು ಅರಮನೆಗೇ ವೈದ್ಯರನ್ನು ಕರೆಯಲು ಆಜ್ಞೆ ಮಾಡಿದ. ಆದರೆ ಯಾವ ವೈದ್ಯರೂ ರಾಜನ ಬಳಿ ಬರಲಿಲ್ಲ. ಆಗ ಒಬ್ಬ ಪ್ರಜೆ ಬಂದು ರಾಜನ ಬಳಿ ಹೀಗೆ ಹೇಳಿದ:

‘ಪ್ರಭುಗಳೇ, ಇಲ್ಲೇ ಎರಡು ಕಿಲೋ ಮೀಟರ್ ದೂರದಲ್ಲಿ ಒಬ್ಬ ಸಾಧು ಇದ್ದಾನೆ. ಆತ ಬೊಜ್ಜಿನಿಂದ ಬರುವ ಕಾಯಿಲೆಗೆ ಒಳ್ಳೆಯ ಔಷಧಿ ಕೊಡುತ್ತಾನೆ. ಆತ ಕೊಡುವ ಮದ್ದಿನಿಂದ ಬೊಜ್ಜು ಕರಗಿ ಬೇಗನೆ ಕಾಯಿಲೆ ವಾಸಿಯಾಗುತ್ತದೆ’ ಎಂದ.

‘ಆ ಸಾಧು ಸಂತನನ್ನು ಅರಮನೆಗೆ ಬರಹೇಳು’ ಎಂದು ಆಜ್ಞೆ ಮಾಡಿದ ಮಹಾರಾಜ.

‘ಪ್ರಭುಗಳೇ, ಆ ಸಾಧು ಸಂತ ಅರಮನೆಗೆ ಬರಲಾರ; ತಾವೇ ಅಲ್ಲಿಗೆ ದಯಮಾಡಿಸಬೇಕು. ಅದೂ ಕೂಡ ಯಾವುದೇ ವಾಹನದಲ್ಲಿ ಹೋಗುವಂತಿಲ್ಲ; ಕಾಲ್ನಡಿಗೆಯಲ್ಲೇ ಹೋಗಬೇಕು. ಹಾಗಿದ್ದರೆ ಮಾತ್ರ. ಆತ ಚಿಕಿತ್ಸೆ ಕೊಡುತ್ತಾನೆ’ ಎಂದ.

ಕೊನೆಗೂ ರಾಜ ಹೇಗೋ ಪ್ರಯಾಸಪಟ್ಟು ನಡೆದುಕೊಂಡೇ ಸಾಧು ಸಂತನ ಆಶ್ರಮಕ್ಕೆ ಹೋದ. ಆದರೆ ಅಲ್ಲಿ ಆ ಸಾಧು ಸಂತ ಇರಲೇ ಇಲ್ಲ. ಮರುದಿನ ಪುನಃ ರಾಜ ನಡೆದುಕೊಂಡೇ ಚಿಕಿತ್ಸೆಗಾಗಿ ತೆರಳಿದ. ಮಾರನೆ ದಿನವೂ ಸಾಧುಸಂತ ಕಣ್ಮರೆ.

ಮೂರನೆ ದಿನ, ನಾಲ್ಕನೆ ದಿನ… ಹೀಗೆ ಒಂದು ತಿಂಗಳು ಪೂರ್ತಿ ಎರಡೆರಡು ಕಿಲೋ ಮೀಟರ್ ನಡೆದುಕೊಂಡೇ ಆಶ್ರಮಕ್ಕೆ ಹೋಗಿ ಬಂದ ಆ ಮಹಾರಾಜ. ಒಂದು ತಿಂಗಳು ಕಳೆದು ಮತ್ತೊಂದು ದಿನ ಮಹಾರಾಜ ಆಶ್ರಮಕ್ಕೆ ಬಂದಾಗ ಸಾಧು ಸಂತ ಪ್ರತ್ಯಕ್ಷನಾದ.

ಅಷ್ಟು ಹೊತ್ತಿಗೆ ಮಹಾರಾಜನ ಬೊಜ್ಜು ಕರಗಿ ತೂಕವೂ ಬಹಳಷ್ಟು ಇಳಿದು ಹೋಗಿತ್ತು. ಅರಸನ ಆರೋಗ್ಯ ಸಾಕಷ್ಟು ಸುಧಾರಿಸತೊಡಗಿತ್ತು.

ಕೊನೆಯ ದಿನ ಮಹಾರಾಜನನ್ನು ಪರೀಕ್ಷೆ ಮಾಡಿದ ಸಾಧು ಸಂತ, ‘ಪ್ರಭು… ನೀವು ಬರೀ ತಿಂದು ಮಲಗಿದರೆ ಇದೇ ರೀತಿ ತೂಕ ಏರಿ ಬೊಜ್ಜು ತುಂಬಿ ಆರೋಗ್ಯ ಹದಗೆಡುತ್ತದೆ. ಅದಕ್ಕಾಗಿ ದಿನ ನಿತ್ಯ ಐದೈದು ಕಿಲೋಮೀಟರ್ ನಡೆಯಬೇಕು.
ನೀವು ಬೊಜ್ಜು ಕರಗಿಸಿಕೊಳ್ಳಬೇಕು ಎಂದೇ ನಾನು ಒಂದು ತಿಂಗಳು ನೀವು ಬರುವ ಹೊತ್ತಿನಲ್ಲಿ ಮರೆಯಲ್ಲಿ ಇರುತ್ತಿದ್ದೆ. ಆದರೆ ನಿಮ್ಮ ದೈಹಿಕ ಸ್ಥಿತಿಯನ್ನು ಗಮನಿಸುತ್ತಲೇ ಇದ್ದೆ. ಈಗ ನೀವು ಆರಾಮವಾಗಿದ್ದೀರಿ. ಪ್ರತಿನಿತ್ಯ ಬರೀ ತಿಂದು ಮಲಗುವುದನ್ನು ಬಿಟ್ಟು ರಾಜ್ಯದ ಜನರ ಹಿತಾಸಕ್ತಿ ಗಮನಿಸಿ. ಆರೋಗ್ಯದ ಕಡೆ ನಿಗಾ ವಹಿಸಿ, ನಡಿಗೆಯನ್ನು ಸತತವಾಗಿ ಮಾಡಿ. ನೀವು ದೀರ್ಘಕಾಲ ಬಾಳುವಿರಿ..’ ಎಂದು ಸಲಹೆ ಕೊಟ್ಟ.

ರಾಜ ಸೋಮಾರಿತನ ಬಿಟ್ಟ. ಸಾಧುಸಂತನ ಮಾತನ್ನು ಚಾಚೂ ತಪ್ಪದೆ ಪಾಲಿಸತೊಡಗಿದ. ಬೇಗ ಆರೋಗ್ಯವಂತನಾದ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಒಂದೇ ತಿಂಗಳಲ್ಲಿ ಸಾಕಷ್ಟು ಮನ ಪರಿವರ್ತನೆ ಮಾಡಿಕೊಂಡ. ಪ್ರಜೆಗಳ ಕಷ್ಟ ಸುಖ ವಿಚಾರಿಸತೊಡಗಿದ. ಉತ್ತಮ ಆಡಳಿತ ನೀಡಿದ. ಪ್ರಜೆಗಳೆಲ್ಲರಿಗೂ ಖುಷಿ, ಸಮಾಧಾನವಾಯಿತು.p

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!