ಹರಿತಲೇಖನಿ ದಿನಕ್ಕೊಂದು ಕಥೆ: ಪರಿವರ್ತನೆ| Daily Story

Daily Story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಈ ಅರಸ ಬಹಳ ಹೃದಯವಂತ; ಆದರೆ, ಅಷ್ಟೇ ಸೋಮಾರಿ. ತನ್ನ ‘ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡುವುದಿರಲಿ, ಸ್ವತಃ ಪ್ರಜೆಗಳನ್ನೂ ಸರಿಯಾಗಿ ಮಾತನಾಡಿಸುತ್ತಿರಲಿಲ್ಲ.

ಅರಸ ಮಾಡುತ್ತಿದ್ದುದು ಎರಡೇ ಕೆಲಸ. ಒಂದು ತಿನ್ನುವುದು, ಇನ್ನೊಂದು ಮಲಗುವುದು. ಬರ ಬರುತ್ತಾ ಅವನ ಆರೋಗ್ಯ ಹದಗೆಡತೊಡಗಿತು. ದೇಹದಲ್ಲಿ ಬೊಜ್ಜು ತುಂಬಿ ಅನಾರೋಗ್ಯ ಪೀಡಿತನಾದ. ಎದ್ದೇಳಲೂ ಆಗದಂತಹ ಪರಿಸ್ಥಿತಿ ಬಂತು.

ತನ್ನ ಮಂತ್ರಿಯನ್ನು ಕರೆದು ಅರಮನೆಗೇ ವೈದ್ಯರನ್ನು ಕರೆಯಲು ಆಜ್ಞೆ ಮಾಡಿದ. ಆದರೆ ಯಾವ ವೈದ್ಯರೂ ರಾಜನ ಬಳಿ ಬರಲಿಲ್ಲ. ಆಗ ಒಬ್ಬ ಪ್ರಜೆ ಬಂದು ರಾಜನ ಬಳಿ ಹೀಗೆ ಹೇಳಿದ:

‘ಪ್ರಭುಗಳೇ, ಇಲ್ಲೇ ಎರಡು ಕಿಲೋ ಮೀಟರ್ ದೂರದಲ್ಲಿ ಒಬ್ಬ ಸಾಧು ಇದ್ದಾನೆ. ಆತ ಬೊಜ್ಜಿನಿಂದ ಬರುವ ಕಾಯಿಲೆಗೆ ಒಳ್ಳೆಯ ಔಷಧಿ ಕೊಡುತ್ತಾನೆ. ಆತ ಕೊಡುವ ಮದ್ದಿನಿಂದ ಬೊಜ್ಜು ಕರಗಿ ಬೇಗನೆ ಕಾಯಿಲೆ ವಾಸಿಯಾಗುತ್ತದೆ’ ಎಂದ.

‘ಆ ಸಾಧು ಸಂತನನ್ನು ಅರಮನೆಗೆ ಬರಹೇಳು’ ಎಂದು ಆಜ್ಞೆ ಮಾಡಿದ ಮಹಾರಾಜ.

‘ಪ್ರಭುಗಳೇ, ಆ ಸಾಧು ಸಂತ ಅರಮನೆಗೆ ಬರಲಾರ; ತಾವೇ ಅಲ್ಲಿಗೆ ದಯಮಾಡಿಸಬೇಕು. ಅದೂ ಕೂಡ ಯಾವುದೇ ವಾಹನದಲ್ಲಿ ಹೋಗುವಂತಿಲ್ಲ; ಕಾಲ್ನಡಿಗೆಯಲ್ಲೇ ಹೋಗಬೇಕು. ಹಾಗಿದ್ದರೆ ಮಾತ್ರ. ಆತ ಚಿಕಿತ್ಸೆ ಕೊಡುತ್ತಾನೆ’ ಎಂದ.

ಕೊನೆಗೂ ರಾಜ ಹೇಗೋ ಪ್ರಯಾಸಪಟ್ಟು ನಡೆದುಕೊಂಡೇ ಸಾಧು ಸಂತನ ಆಶ್ರಮಕ್ಕೆ ಹೋದ. ಆದರೆ ಅಲ್ಲಿ ಆ ಸಾಧು ಸಂತ ಇರಲೇ ಇಲ್ಲ. ಮರುದಿನ ಪುನಃ ರಾಜ ನಡೆದುಕೊಂಡೇ ಚಿಕಿತ್ಸೆಗಾಗಿ ತೆರಳಿದ. ಮಾರನೆ ದಿನವೂ ಸಾಧುಸಂತ ಕಣ್ಮರೆ.

ಮೂರನೆ ದಿನ, ನಾಲ್ಕನೆ ದಿನ… ಹೀಗೆ ಒಂದು ತಿಂಗಳು ಪೂರ್ತಿ ಎರಡೆರಡು ಕಿಲೋ ಮೀಟರ್ ನಡೆದುಕೊಂಡೇ ಆಶ್ರಮಕ್ಕೆ ಹೋಗಿ ಬಂದ ಆ ಮಹಾರಾಜ. ಒಂದು ತಿಂಗಳು ಕಳೆದು ಮತ್ತೊಂದು ದಿನ ಮಹಾರಾಜ ಆಶ್ರಮಕ್ಕೆ ಬಂದಾಗ ಸಾಧು ಸಂತ ಪ್ರತ್ಯಕ್ಷನಾದ.

ಅಷ್ಟು ಹೊತ್ತಿಗೆ ಮಹಾರಾಜನ ಬೊಜ್ಜು ಕರಗಿ ತೂಕವೂ ಬಹಳಷ್ಟು ಇಳಿದು ಹೋಗಿತ್ತು. ಅರಸನ ಆರೋಗ್ಯ ಸಾಕಷ್ಟು ಸುಧಾರಿಸತೊಡಗಿತ್ತು.

ಕೊನೆಯ ದಿನ ಮಹಾರಾಜನನ್ನು ಪರೀಕ್ಷೆ ಮಾಡಿದ ಸಾಧು ಸಂತ, ‘ಪ್ರಭು… ನೀವು ಬರೀ ತಿಂದು ಮಲಗಿದರೆ ಇದೇ ರೀತಿ ತೂಕ ಏರಿ ಬೊಜ್ಜು ತುಂಬಿ ಆರೋಗ್ಯ ಹದಗೆಡುತ್ತದೆ. ಅದಕ್ಕಾಗಿ ದಿನ ನಿತ್ಯ ಐದೈದು ಕಿಲೋಮೀಟರ್ ನಡೆಯಬೇಕು.
ನೀವು ಬೊಜ್ಜು ಕರಗಿಸಿಕೊಳ್ಳಬೇಕು ಎಂದೇ ನಾನು ಒಂದು ತಿಂಗಳು ನೀವು ಬರುವ ಹೊತ್ತಿನಲ್ಲಿ ಮರೆಯಲ್ಲಿ ಇರುತ್ತಿದ್ದೆ. ಆದರೆ ನಿಮ್ಮ ದೈಹಿಕ ಸ್ಥಿತಿಯನ್ನು ಗಮನಿಸುತ್ತಲೇ ಇದ್ದೆ. ಈಗ ನೀವು ಆರಾಮವಾಗಿದ್ದೀರಿ. ಪ್ರತಿನಿತ್ಯ ಬರೀ ತಿಂದು ಮಲಗುವುದನ್ನು ಬಿಟ್ಟು ರಾಜ್ಯದ ಜನರ ಹಿತಾಸಕ್ತಿ ಗಮನಿಸಿ. ಆರೋಗ್ಯದ ಕಡೆ ನಿಗಾ ವಹಿಸಿ, ನಡಿಗೆಯನ್ನು ಸತತವಾಗಿ ಮಾಡಿ. ನೀವು ದೀರ್ಘಕಾಲ ಬಾಳುವಿರಿ..’ ಎಂದು ಸಲಹೆ ಕೊಟ್ಟ.

ರಾಜ ಸೋಮಾರಿತನ ಬಿಟ್ಟ. ಸಾಧುಸಂತನ ಮಾತನ್ನು ಚಾಚೂ ತಪ್ಪದೆ ಪಾಲಿಸತೊಡಗಿದ. ಬೇಗ ಆರೋಗ್ಯವಂತನಾದ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಒಂದೇ ತಿಂಗಳಲ್ಲಿ ಸಾಕಷ್ಟು ಮನ ಪರಿವರ್ತನೆ ಮಾಡಿಕೊಂಡ. ಪ್ರಜೆಗಳ ಕಷ್ಟ ಸುಖ ವಿಚಾರಿಸತೊಡಗಿದ. ಉತ್ತಮ ಆಡಳಿತ ನೀಡಿದ. ಪ್ರಜೆಗಳೆಲ್ಲರಿಗೂ ಖುಷಿ, ಸಮಾಧಾನವಾಯಿತು.p

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]