ಹರಿತಲೇಖನಿ ದಿನಕ್ಕೊಂದು ಕಥೆ: ಪರಿವರ್ತನೆ| Daily Story

Daily Story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಈ ಅರಸ ಬಹಳ ಹೃದಯವಂತ; ಆದರೆ, ಅಷ್ಟೇ ಸೋಮಾರಿ. ತನ್ನ ‘ರಾಜ್ಯಕ್ಕೆ ಒಳ್ಳೆಯ ಆಡಳಿತ ಕೊಡುವುದಿರಲಿ, ಸ್ವತಃ ಪ್ರಜೆಗಳನ್ನೂ ಸರಿಯಾಗಿ ಮಾತನಾಡಿಸುತ್ತಿರಲಿಲ್ಲ.

ಅರಸ ಮಾಡುತ್ತಿದ್ದುದು ಎರಡೇ ಕೆಲಸ. ಒಂದು ತಿನ್ನುವುದು, ಇನ್ನೊಂದು ಮಲಗುವುದು. ಬರ ಬರುತ್ತಾ ಅವನ ಆರೋಗ್ಯ ಹದಗೆಡತೊಡಗಿತು. ದೇಹದಲ್ಲಿ ಬೊಜ್ಜು ತುಂಬಿ ಅನಾರೋಗ್ಯ ಪೀಡಿತನಾದ. ಎದ್ದೇಳಲೂ ಆಗದಂತಹ ಪರಿಸ್ಥಿತಿ ಬಂತು.

ತನ್ನ ಮಂತ್ರಿಯನ್ನು ಕರೆದು ಅರಮನೆಗೇ ವೈದ್ಯರನ್ನು ಕರೆಯಲು ಆಜ್ಞೆ ಮಾಡಿದ. ಆದರೆ ಯಾವ ವೈದ್ಯರೂ ರಾಜನ ಬಳಿ ಬರಲಿಲ್ಲ. ಆಗ ಒಬ್ಬ ಪ್ರಜೆ ಬಂದು ರಾಜನ ಬಳಿ ಹೀಗೆ ಹೇಳಿದ:

‘ಪ್ರಭುಗಳೇ, ಇಲ್ಲೇ ಎರಡು ಕಿಲೋ ಮೀಟರ್ ದೂರದಲ್ಲಿ ಒಬ್ಬ ಸಾಧು ಇದ್ದಾನೆ. ಆತ ಬೊಜ್ಜಿನಿಂದ ಬರುವ ಕಾಯಿಲೆಗೆ ಒಳ್ಳೆಯ ಔಷಧಿ ಕೊಡುತ್ತಾನೆ. ಆತ ಕೊಡುವ ಮದ್ದಿನಿಂದ ಬೊಜ್ಜು ಕರಗಿ ಬೇಗನೆ ಕಾಯಿಲೆ ವಾಸಿಯಾಗುತ್ತದೆ’ ಎಂದ.

‘ಆ ಸಾಧು ಸಂತನನ್ನು ಅರಮನೆಗೆ ಬರಹೇಳು’ ಎಂದು ಆಜ್ಞೆ ಮಾಡಿದ ಮಹಾರಾಜ.

‘ಪ್ರಭುಗಳೇ, ಆ ಸಾಧು ಸಂತ ಅರಮನೆಗೆ ಬರಲಾರ; ತಾವೇ ಅಲ್ಲಿಗೆ ದಯಮಾಡಿಸಬೇಕು. ಅದೂ ಕೂಡ ಯಾವುದೇ ವಾಹನದಲ್ಲಿ ಹೋಗುವಂತಿಲ್ಲ; ಕಾಲ್ನಡಿಗೆಯಲ್ಲೇ ಹೋಗಬೇಕು. ಹಾಗಿದ್ದರೆ ಮಾತ್ರ. ಆತ ಚಿಕಿತ್ಸೆ ಕೊಡುತ್ತಾನೆ’ ಎಂದ.

ಕೊನೆಗೂ ರಾಜ ಹೇಗೋ ಪ್ರಯಾಸಪಟ್ಟು ನಡೆದುಕೊಂಡೇ ಸಾಧು ಸಂತನ ಆಶ್ರಮಕ್ಕೆ ಹೋದ. ಆದರೆ ಅಲ್ಲಿ ಆ ಸಾಧು ಸಂತ ಇರಲೇ ಇಲ್ಲ. ಮರುದಿನ ಪುನಃ ರಾಜ ನಡೆದುಕೊಂಡೇ ಚಿಕಿತ್ಸೆಗಾಗಿ ತೆರಳಿದ. ಮಾರನೆ ದಿನವೂ ಸಾಧುಸಂತ ಕಣ್ಮರೆ.

ಮೂರನೆ ದಿನ, ನಾಲ್ಕನೆ ದಿನ… ಹೀಗೆ ಒಂದು ತಿಂಗಳು ಪೂರ್ತಿ ಎರಡೆರಡು ಕಿಲೋ ಮೀಟರ್ ನಡೆದುಕೊಂಡೇ ಆಶ್ರಮಕ್ಕೆ ಹೋಗಿ ಬಂದ ಆ ಮಹಾರಾಜ. ಒಂದು ತಿಂಗಳು ಕಳೆದು ಮತ್ತೊಂದು ದಿನ ಮಹಾರಾಜ ಆಶ್ರಮಕ್ಕೆ ಬಂದಾಗ ಸಾಧು ಸಂತ ಪ್ರತ್ಯಕ್ಷನಾದ.

ಅಷ್ಟು ಹೊತ್ತಿಗೆ ಮಹಾರಾಜನ ಬೊಜ್ಜು ಕರಗಿ ತೂಕವೂ ಬಹಳಷ್ಟು ಇಳಿದು ಹೋಗಿತ್ತು. ಅರಸನ ಆರೋಗ್ಯ ಸಾಕಷ್ಟು ಸುಧಾರಿಸತೊಡಗಿತ್ತು.

ಕೊನೆಯ ದಿನ ಮಹಾರಾಜನನ್ನು ಪರೀಕ್ಷೆ ಮಾಡಿದ ಸಾಧು ಸಂತ, ‘ಪ್ರಭು… ನೀವು ಬರೀ ತಿಂದು ಮಲಗಿದರೆ ಇದೇ ರೀತಿ ತೂಕ ಏರಿ ಬೊಜ್ಜು ತುಂಬಿ ಆರೋಗ್ಯ ಹದಗೆಡುತ್ತದೆ. ಅದಕ್ಕಾಗಿ ದಿನ ನಿತ್ಯ ಐದೈದು ಕಿಲೋಮೀಟರ್ ನಡೆಯಬೇಕು.
ನೀವು ಬೊಜ್ಜು ಕರಗಿಸಿಕೊಳ್ಳಬೇಕು ಎಂದೇ ನಾನು ಒಂದು ತಿಂಗಳು ನೀವು ಬರುವ ಹೊತ್ತಿನಲ್ಲಿ ಮರೆಯಲ್ಲಿ ಇರುತ್ತಿದ್ದೆ. ಆದರೆ ನಿಮ್ಮ ದೈಹಿಕ ಸ್ಥಿತಿಯನ್ನು ಗಮನಿಸುತ್ತಲೇ ಇದ್ದೆ. ಈಗ ನೀವು ಆರಾಮವಾಗಿದ್ದೀರಿ. ಪ್ರತಿನಿತ್ಯ ಬರೀ ತಿಂದು ಮಲಗುವುದನ್ನು ಬಿಟ್ಟು ರಾಜ್ಯದ ಜನರ ಹಿತಾಸಕ್ತಿ ಗಮನಿಸಿ. ಆರೋಗ್ಯದ ಕಡೆ ನಿಗಾ ವಹಿಸಿ, ನಡಿಗೆಯನ್ನು ಸತತವಾಗಿ ಮಾಡಿ. ನೀವು ದೀರ್ಘಕಾಲ ಬಾಳುವಿರಿ..’ ಎಂದು ಸಲಹೆ ಕೊಟ್ಟ.

ರಾಜ ಸೋಮಾರಿತನ ಬಿಟ್ಟ. ಸಾಧುಸಂತನ ಮಾತನ್ನು ಚಾಚೂ ತಪ್ಪದೆ ಪಾಲಿಸತೊಡಗಿದ. ಬೇಗ ಆರೋಗ್ಯವಂತನಾದ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ಒಂದೇ ತಿಂಗಳಲ್ಲಿ ಸಾಕಷ್ಟು ಮನ ಪರಿವರ್ತನೆ ಮಾಡಿಕೊಂಡ. ಪ್ರಜೆಗಳ ಕಷ್ಟ ಸುಖ ವಿಚಾರಿಸತೊಡಗಿದ. ಉತ್ತಮ ಆಡಳಿತ ನೀಡಿದ. ಪ್ರಜೆಗಳೆಲ್ಲರಿಗೂ ಖುಷಿ, ಸಮಾಧಾನವಾಯಿತು.p

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ ಎಂದು ವಿಜಯಲಕ್ಷ್ಮಿ ದರ್ಶನ್ ಕಿಡಿ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117208"]
error: Content is protected !!