ಕ್ವಿನ್ ಸಿಟಿ ಬೆನ್ನಲ್ಲೇ ರಾಜ್ಯದಲ್ಲಿ ಸ್ವಿಫ್ಟ್ ಸಿಟಿ ಹೊಂಗನಸು..!: ಎಂಬಿ ಪಾಟೀಲ ಕನಸಿನ ನಗರ ಹೇಗಿರುತ್ತೆ ಗೊತ್ತಾ..?| SWIFT city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT City- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ.

ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು; ಎಂ ಬಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

ರಾಜಕೀಯ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರ ಮೊದಲು ದೆತು ದೆತು ಅಂತಾರೆ, ಬಳಿಕ ದಿಲಾತು ದಿಲಾತು ಅಂತಾರೆ:

ಈ ಸರ್ಕಾರದಲ್ಲಿ ಹೆಂಗಿದೆ ಅಂದರೆ ಮೊದಲು ದೆತು ದೆತು ಅಂತಾರೆ, ದಿಲಾತು ದಿಲಾತು ಅಂತಾರೆ ನಂತರ ದೇನೆವಾಲಾಂಕೊ ದಿಕಾತು ಅಂತ ಹೇಳುತ್ತಾರೆ‌. ಉತ್ತರ ಕರ್ನಾಟಕ ಶಿಕ್ಷಣಕ್ಕೆ ಪ್ರಾಥಮಿಕ ಆದ್ಯತೆ ಕೊಡಬೇಕು: ಬಸವರಾಜ ಬೊಮ್ಮಾಯಿ (Basavaraj

[ccc_my_favorite_select_button post_id="117677"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!