ಕ್ವಿನ್ ಸಿಟಿ ಬೆನ್ನಲ್ಲೇ ರಾಜ್ಯದಲ್ಲಿ ಸ್ವಿಫ್ಟ್ ಸಿಟಿ ಹೊಂಗನಸು..!: ಎಂಬಿ ಪಾಟೀಲ ಕನಸಿನ ನಗರ ಹೇಗಿರುತ್ತೆ ಗೊತ್ತಾ..?| SWIFT city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT City- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ.

ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು; ಎಂ ಬಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!