ಕ್ವಿನ್ ಸಿಟಿ ಬೆನ್ನಲ್ಲೇ ರಾಜ್ಯದಲ್ಲಿ ಸ್ವಿಫ್ಟ್ ಸಿಟಿ ಹೊಂಗನಸು..!: ಎಂಬಿ ಪಾಟೀಲ ಕನಸಿನ ನಗರ ಹೇಗಿರುತ್ತೆ ಗೊತ್ತಾ..?| SWIFT city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT City- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ.

ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು; ಎಂ ಬಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!