ಕ್ವಿನ್ ಸಿಟಿ ಬೆನ್ನಲ್ಲೇ ರಾಜ್ಯದಲ್ಲಿ ಸ್ವಿಫ್ಟ್ ಸಿಟಿ ಹೊಂಗನಸು..!: ಎಂಬಿ ಪಾಟೀಲ ಕನಸಿನ ನಗರ ಹೇಗಿರುತ್ತೆ ಗೊತ್ತಾ..?| SWIFT city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT City- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ.

ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು; ಎಂ ಬಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

ರಾಜಕೀಯ

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು. Cmsiddaramaiah

[ccc_my_favorite_select_button post_id="101371"]
ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿ ಅನಾವರಣ

ಸಂವಿಧಾನ‌ ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ‌ ನಡೆದಿದೆ. ಅದಕ್ಕೆ‌ ನಾವು ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು. Mahatma Gandhi

[ccc_my_favorite_select_button post_id="101384"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. Vinayakan

[ccc_my_favorite_select_button post_id="101390"]
FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

FROM DODDABALLAPURA RAILWAY POLICE: ರೈಲಿಗೆ ಸಿಲುಕಿ ಅಪರಿಚಿತ ವೃದ್ಧೆ ದುರ್ಮರಣ

ಮೃತರ ಚಹರೆ 5.2 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡನೆಯ ಮುಖ, ತಲೆಯಲ್ಲಿ ಸುಮಾರು ಒಂದು ಅಡಿ ಉದ್ದದ ಕಪ್ಪು- ಬಿಳಿ ಮಿಶ್ರಿತ ತಲೆ ಕೂದಲು ಇದ್ದು, Doddaballapura

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್

[ccc_my_favorite_select_button post_id="101076"]

Doddaballapura: ಭೀಕರ Accident.. 8 ವರ್ಷದ ಮಗು

[ccc_my_favorite_select_button post_id="101037"]

Doddaballapura Accident.. ಯುವ ಛಾಯಾಗ್ರಾಹಕ ಸಾವು, ಖಾಸಗಿ

[ccc_my_favorite_select_button post_id="101034"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!