ದೊಡ್ಡಬಳ್ಳಾಪುರ: ಮಾಜಿ ಶಾಸಕ, ಕೇಂದ್ರದ ಮಾಜಿ ಸಚಿವ ಆರ್.ಎಲ್ ಜಾಲಪ್ಪರ ಪುತ್ರ ಜೆ.ನರಸಿಂಹಸ್ವಾಮಿ (J Narasimha swamy) ಅವರು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಮೃತರು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಅಂತ್ಯ ಇಂದು 12 ಗಂಟೆ ಪಾರ್ಥೀವ ಶರೀರ ತೂಬಗೆರೆಗೆ ಬರಲಿದ್ದು, ಬಳಿಕ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅನಾರೋಗ್ಯದ ಕಾರಣ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನರಸಿಂಹಸ್ವಾಮಿ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ನರಸಿಂಹಸ್ವಾಮಿ ಅವರ ಅಗಲಿಕೆಗೆ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಹಿರಿಯ ಮುಖಂಡ ಹರೀಶ್ ಗೌಡ, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಹೆಚ್ಎಸ್ ಅಶ್ವಥ್ ನಾರಾಯಣ ಕುಮಾರ್, ನಗರಸಭೆ ಸದಸ್ಯ ಹೆಚ್.ಎಸ್.ಶಿವಶಂಕರ್, ಹಮಾಮ್ ವೆಂಕಟೇಶ್ ಸಂತಾಪ ಸೂಚಿಸಿದ್ದಾರೆ.