School timings starting tomorrow have changed!

ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ..!; Assembly Sessions

ಬೆಳಗಾವಿ: ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮಗೊಳಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೆ ತಿದ್ದುಪಡಿ ತರುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ (Assembly Sessions) ಅಂಗೀಕಾರ ದೊರೆತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ಎರಡನೆ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ ಎಂದರು.

ತೆರಿಗೆ ಪಾವತಿದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು.

ವಿಧೇಯಕ ಮಂಡಿಸಿ ಮಾತನಾಡಿದ ಕೃಷ್ಣ ಭೈರೇಗೌಡ ಅವರು, ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ.

ಕಳೆದ ನಾಲ್ಕೈದು ವರ್ಷಗಳ ಅನುಭವದಲ್ಲಿ ಎಲ್ಲೆಲ್ಲಿ ಕಾನೂನುಗಳ ಅಗತ್ಯ ಇದೆ ಅದನ್ನು ಅನುಭವದ ಆಧಾರದಲ್ಲಿ ಗುರುತಿಸಲಾಗಿದೆ. ಹಾಗೂ ಕೆಲವು ವಿಚಾರಗಳನ್ನು ವ್ಯಾಖ್ಯಾನ ಮಾಡುವಾಗ ಒಂದಕ್ಕೊಂದು ತದ್ವಿರುದ್ಧವಾಗಿದ್ದ ವಿಚಾರಗಳನ್ನು ಸರಳೀಕರಣಗೊಳಿಸುವ ಕೆಲಸ ಈ ತಿದ್ದುಪಡಿಯಲ್ಲಿ ಮಾಡಲಾಗಿದೆ ಎಂದರು.

ತಿದ್ದುಪಡಿಯಿಂದ ಖಜಾನೆಗೆ 15,000 ತೆರಿಗೆ ಸಂಗ್ರಹ

ಸರ್ಕಾರ ಹಾಗೂ ತೆರಿಗೆದಾರರ ನಡುವೆ 80,000 ಸಾವಿರ ವ್ಯಾಜ್ಯ ಪ್ರಕರಣಗಳು ವಿವಿಧ ಕಾರಣಗಳಿಗಾಗಿ ವಿಲೇವಾರಿಗೆ ಬಾಕಿ ಇರುವ ಕಾರಣದಿಂದ ರೂ.15,000 ಕೋಟಿ ತಕರಾರಿನಲ್ಲಿದೆ. ಈಗಿನ ತಿದ್ದುಪಡಿಯಿಂದ ಎಲ್ಲಾ ಪ್ರಕರಣಗಳೂ ಇತ್ಯರ್ಥವಾದರೆ ಖಜಾನೆಗೆ ರೂ.15,000 ಕೋಟಿ ಸಂಗ್ರಹವಾಗುವ ಸಾಧ್ಯತೆ ಇದೆ.

ಅಧಿಕಾರಿಗಳ ಹಾಗೂ ತೆರಿಗೆ ಪಾವತಿದಾರರ ನಡುವೆ ಒಪ್ಪಂದ ಆಗದ ಕಾರಣ ಸುಮಾರು 80,000 ವ್ಯಾಜ್ಯ ಪ್ರಕರಣ ನ್ಯಾಯಾಲಯಗಳಲ್ಲಿವೆ. ಕಾನೂನು ಪ್ರಕ್ರಿಯೆಯಲ್ಲಿರುವ ಕಾರಣ ಬರುತ್ತಿರುವ ತೆರಿಗೆ ಸಹ ನಿಂತುಹೋಗಿದೆ ಎಂದರು.

“ಈ ಹಿಂದೆ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್ ಪದ್ಧತಿ) ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಂದಿನ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ವ್ಯಾಟ್ ಬಗೆಗಿನ ವ್ಯಾಜ್ಯಗಳ ಇತ್ಯರ್ಥಕ್ಕೆ ಒನ್ ಟೈಮ್ ಸೆಟಲ್ಮೆಂಟ್‌ಗೆ ಅವಕಾಶ ಕೊಟ್ಟಿದ್ದರು. ಪ್ರಸ್ತುತ ಇದೇ ಮಾದರಿಯನ್ನು ಮುಂದುವರೆಸಲು ನಿರ್ಧರಿಸಿ, 80,000 ಪ್ರಕರಣಗಳಿಗೆ ಒನ್‌ಟೈಮ್ ಸೆಟಲ್‌ಮೆಂಟ್ ಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಈಗಲೇ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡರೆ ಬಡ್ಡಿ ಹಾಗೂ ದಂಡ ಹೊರತುಪಡಿಸಿ ಮೂಲ ಹಣ ಪಾವತಿ ಮಾಡಿದರೆ ಸಾಕು. ಈ ಸೆಟಲ್‌ಮೆಂಟ್‌ಗೆ ಅವಕಾಶ ನೀಡಿದರೆ, ಹಲವರು ಇತ್ಯರ್ಥಕ್ಕೆ ಮುಂದೆ ಬರಬಹುದು. ಇದರಿಂದ ಸರ್ಕಾರದ ಖಜಾನೆಗೆ ಹಣ ಹರಿದುಬರಲಿದೆ ಎಂದರು.

ತೆರಿಗೆದಾರರು ಜಿಎಸ್‌ಟಿ ನ್ಯಾಯಾಧೀಕರಣದಲ್ಲಿ ಪ್ರಕರಣ ದಾಖಲಿಸುವಾಗ ಭದ್ರತಾ ಠೇವಣಿ ರೂಪದಲ್ಲಿ ರೂ.50 ಕೋಟಿ ಹಣ ಠೇವಣಿ ಇಡಬೇಕು. ತೆರಿಗೆದಾರರ ಪಾಲಿಗೆ ಇದು ದೊಡ್ಡ ಹೊರೆ. ಹೀಗಾಗಿ ಈ ಪ್ರಮಾಣವನ್ನು ರೂ.20 ಕೋಟಿಗೆ ಇಳಿಸಬೇಕು ಎಂದು ಹಲವು ವ್ಯವಹಾರಸ್ಥರು ಕೇಳಿಕೊಂಡಿದ್ದರು.

ಅದರಂತೆ ಇದೀಗ ಭದ್ರತಾ ಠೇವಣಿ ಹಣವನ್ನು ರೂ.20 ಕೋಟಿ ರೂಪಾಯಿಗೆ ಉಳಿಸಲಾಗಿದೆ. ಇಲ್ಲದಿದ್ದರೆ, ತೆರಿಗೆದಾರರು ಸುಪ್ರೀಂ ಕೋರ್ಟ್ಗೆ ಹೋಗ್ತಾರೆ. ಇದರಿಂದ ಸರ್ಕಾರಕ್ಕೂ ನಷ್ಟ, ತೆರಿಗೆದಾರರಿಗೂ ಕಷ್ಟ” ಎಂದು ವಿವರಿಸಿದ ಅವರು, ಈ ಕಾನೂನುಗಳನ್ನು ಸರಳೀಕರಿಸುವ ಸಂಬಂಧ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಹುತೇಕ ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ಅ.01 ರಿಂದಲೇ ಜಾರಿ ಮಾಡಲೂ ಸಹ ರಾಜ್ಯಗಳೂ ಸಮ್ಮತಿಸಿವೆ. ಕರ್ನಾಟಕದಲ್ಲಿ ಅದಕ್ಕೂ ಮೊದಲೇ ಜಾರಿಗೆ ತರಲಾಗಿದೆ.

ಸಚಿವ ಸಂಪುಟದ ಅನುಮತಿ ಪಡೆದು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಸುಗ್ರೀವಾಜ್ಷೆ ಮೂಲಕ ಈ ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಪ್ರಸ್ತುತ ಸದನದಲ್ಲಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ತಿಳಿಸಿದರು.

ಮದ್ಯ ಮಾಡಲು ಉಪಯೋಗವಾಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ತಕರಾರು ಈ ಹಿಂದಿನಿಂದಲೂ ಇತ್ತು. ಆದರೆ, ಇದೀಗ ಸ್ಪಿರಿಟ್ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ವಿವರಿಸಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!