ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.75ಲಕ್ಷ ಹಣ ಸಂಗ್ರಹವಾಗಿದೆ. Video ನೋಡಿ.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 75, 30, 068ರೂ. ಮೊತ್ತ ಸಂಗ್ರಹವಾಗಿದೆ.
ಇದರೊಂದಿಗೆ 76,500 ರೂ ಮೌಲ್ಯದ 02 ಕೆಜಿ 250 ಗ್ರಾಂ ಬೆಳ್ಳಿ, 18900 ರೂ ಮೌಲ್ಯದ 3 ಗ್ರಾ.600 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಾಹಶೀಲ್ದಾರ್ ರವರು ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಆರ್ ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ ನಂಜಪ್ಪ ಹಾಗೂ ದೇವಾಲಯದ ಸಿಬ್ಬಂದಿಗಳು ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಪೊಲೀಸ್ ಇಲಾಖೆ ಹಾಗೂ ದೇವಾಲಯಕ್ಕೆ ಬಂದ ಭಕ್ತಾದಿಗಳ ಸಮ್ಮುಖದಲ್ಲಿ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.
