ಮೈಸೂರು: ನಿಷೇಧಿತ ತಿಮಿಂಗಲ ವಾಂತಿ (ambergris) ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಸೋಮವಾರ ಮಧ್ಯಾಹ್ನ ದಾಳಿ ನಡೆಸಿರುವ ಬೆಂಗಳೂರು ಮತ್ತು ಮೈಸೂರು ವಿಭಾಗದ ಅರಣ್ಯ ಇಲಾಖೆ ಜಾಗೃತ ದಳದ ಅಧಿಕಾರಿಗಳ ತಂಡ 3 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಜೊತೆಗೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪಟ್ಟಣದ `ಪಡುವಲಪಟ್ಟಣ ರಸ್ತೆಯ ಶ್ರೀಬಡಗೂಡಮ್ಮದೇವಿ ದೇವಸ್ಥಾನದ ಪಕ್ಕದ ವಾಸಿ ವಿನಯ್ ಕುಮಾರ್ (31 ವರ್ಷ) ಆರೋಪಿ.
ಪಟ್ಟಣದ ಪಡುವಲಪಟ್ಟಣ ರಸ್ತೆಯಲ್ಲಿ ಮಿಲ್ ಪಾರ್ಲರ್ ನಡೆಸುತ್ತಿದ್ದ ವಿನಯ್ ಕುಮಾರ್ ಕಳೆದ ಮೂರು ತಿಂಗಳಿಂದ ಮಿಲ್ಕ್ ಪಾರ್ಲರ್ ಮುಚ್ಚಿದ್ದನು. ಆಗಿದ್ದಾಂಗ್ಲೆ ಕಾರಿನಲ್ಲಿ ಓಡಾಡುತ್ತಿದ್ದ ಈತನ ಚಲನವಲನ ತಿಳಿದುಕೊಳ್ಳಲು ಕಳೆದ 15 ದಿನಗಳಿಂದಲೇ ಅರಣ್ಯ ಇಲಾಖೆಯ ಜಾಗೃತ ದಳದ ಸಿಬ್ಬಂದಿ ಪಟ್ಟಣದಲ್ಲೇ ಬೀಡು ಬಿಟ್ಟಿದ್ದರು ಎನ್ನಲಾಗಿದೆ.
ಸೋಮವಾರ ಮಧ್ಯಾಹ್ನ ವಿನಯ್ಕುಮಾರ್ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಅರಣ್ಯ ಇಲಾಖೆ ಜಾಗೃತದಳದ ಅಧಿಕಾರಿಗಳ ತಂಡ 1 ಗಂಟೆಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿದರು.
ಈ ವೇಳೆ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 3 ಕೋಟಿ ಮೌಲ್ಯದ 3 ಕೆ.ಜಿ. ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಪತ್ತೆಯಾಗುತ್ತಿದ್ದಂತೆ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಯಾಗಿದೆ.