‘ಗೃಹಲಕ್ಷ್ಮಿ’ ಯಿಂದ ಬದುಕಿಗೆ ಹೊಸ ಚೈತನ್ಯ ಮೂಡಿದೆ: ಮುಖ್ಯಮಂತ್ರಿಗಳ ಎದುರು ಗೃಹಲಕ್ಷ್ಮಿಯರ ಪ್ರಶಂಸೆ| Gruhalakshmi

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ (Gruhalakshmi) ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು

ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

ಬಿಜೆಪಿಯವರು ಸಂವಿಧಾನ ವಿರೋಧಿಗಳು

ಎಐಸಿಸಿ ಅಧಿವೇಶನದ ದಿನವೇ , ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು.

ಗೋಲ್ವಾಲ್ಕರ್, ಹೆಡಗೆ, ಸಾವರ್ಕರ್ ಯವರು ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ. ನಮ್ಮ ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜಕಾರಣಕ್ಕಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿರುವ ಬಗ್ಗೆ ಉತ್ತರಿಸಿ, ವಿರೋಧಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ , ಸರ್ಕಾರದ ತಪ್ಪು ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ , ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಸಿಬಿಐಗೆ ವಹಿಸಿ ಎಂದು ಹೇಳಲು ಬಿಜೆಪಿಗೆ ನೈತಿಕತೆ ಇಲ್ಲ

150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ ಎಂದು ಬಿಜೆಪಿಯ ವಿಜಯೇಂದ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2008 ರಿಂದ 2013ರವರೆಗೆ ಹಾಗೂ 2018 ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.

ರಾಜಕೀಯ

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಧನ್ಯವಾದ| Video

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ.

"ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಾಗ್ದಾಳಿ ನಡೆಸಿದರು.

[ccc_my_favorite_select_button post_id="115343"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!