ಬೆಂಗಳೂರು: ಹಲವು ವರ್ಷಗಳ ಕಾಲ ಮನೆಯ ಸದಸ್ಯರಂತೆ ನೋಡಿಕೊಳ್ಳುವ ಸಾಕುಪ್ರಾಣಿಗಳು ಸಾವನ್ನಪ್ಪಿದಾಗ ಅವುಗಳ ಅಂತ್ಯಸಂಸ್ಕಾರಕ್ಕೆ (pet cremation) ಬೆಂಗಳೂರು ಮಹಾನಗರದಲ್ಲಿ ಪ್ರತ್ಯೇಕ ವ್ಯವಸ್ಥೆಯಾಗಿ ನಾಲೈದು ಕಡೆಗಳಲ್ಲಿ ಚಿತಾಗಾರ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.
ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಾಣಿದಯೆ ಮತ್ತು ನಮ್ಮ ಸಂಸ್ಕೃತಿಯ ದೃಷ್ಟಿಯಿಂದ ಗೌರವಯುತ ಅಂತ್ಯಸಂಸ್ಕಾರ ಸಾಕು ಪ್ರಾಣಿಗಳಿಗೆ ಅಗತ್ಯವಿದೆ.
ಹಾಗಾಗಿ ಈ ಬಗ್ಗೆ ಬಿಬಿಎಂಪಿ ಹಾಗೂ ಪಶುಪಾಲನಾ ಇಲಾಖೆ ಸಮನ್ವಯದೊಂದಿಗೆ ಬೆಂಗಳೂರಿನ ನಾಲೈದು ಸ್ಥಳಗಳಲ್ಲಿ ಪ್ರತ್ಯೇಕ ಚಿತಾಗಾರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.