ಹೈದರಾಬಾದ್: ತೆಲಂಗಾಣ ಪೊಲೀಸರು ಅಲ್ಲು ಅರ್ಜುನ್ ಅಭಿಮಾನಿಗಳ ವಿರುದ್ಧ ಪ್ರಕರಣ. (FIR) ದಾಖಲಿಸುತ್ತಿದ್ದಾರೆಂದು ವರದಿಯಾಗಿದೆ.
ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣಗಳತ್ತ ಗಮನಹರಿಸಿದ್ದು, ಅಲ್ಲು ಅರ್ಜುನ್ ಬಂಧನದ ನಂತರ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಕುರಿತು ಅನುಚಿತ, ಅವಹೇಳನಕಾರಿ ಪೋಸ್ಟ್ಗಳನ್ನು ಪೋಸ್ಟ್ ಮಾಡಿದ ಅಲ್ಲು ಅರ್ಜುನ್ ಅಭಿಮಾನಿಗಳ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಕೆಲ ದಿನಗಳ ಹಿಂದೆ ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ರನ್ನು ಬಂಧಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಈ ಬೆನ್ನಲ್ಲೇ ಸಿಎಂ ರೇವಂತ್ ರೆಡ್ಡಿ ವಿರುದ್ಧ ಅಲ್ಲು ಅರ್ಜುನ್ ಅಭಿಮಾನಿಗಳು ಕೆರಳಿದ್ದು, ಅನುಚಿತ ಪೋಸ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.
ಮಗು ಸ್ಥಿತಿ ಗಂಭೀರ: ಇನ್ನೂ ಕಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಗವಿನ ಸ್ಥೀತಿ ಕೂಡ ಭೀರವಾಗಿದೆ ಎಂದು ವರದಿಗಳು ತಿಳಿಸಿವೆ.