ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದ ಅಂಗವಾಗಿ ಭಾರಿ ದನಗಳ ಜಾತ್ರೆಗೆ (cattle fair) ಸಿದ್ದತೆ ನಡೆಯುತ್ತಿದ್ದು, ಡಿ.20ರಂದು ದನಗಳ ಜಾತ್ರೆ ಆರಂಭವಾಗಲಿದೆ.
ಜಾತ್ರೆಗೆ ಮಾರಾಟಕ್ಕೆ ಬರುವ ಹೋರಿಗಳಿಗೆ ಟೋಲ್ ಸುಂಕು ವಸೂಲಿಯಿಂದ ವಿನಾಯಿತಿ ನೀಡಬೇಕು ಎನ್ನುವ ಒತ್ತಾಯಗಳು ರೈತರಿಂದ ಕೇಳಿ ಬರುತ್ತಿವೆ.
ಪೆಂಡಾಲ್ಗಳು ಸಿದ್ದ: ರಾಸುಗಳನ್ನು ಆಕರ್ಷಣೀಯವಾಗಿಸಲು ಸಹಸ್ರಾರು ರೂ ಖರ್ಚು ಮಾಡಿ ಪೆಂಡಾಲ್ಗಳನ್ನು ಸಿದ್ದಡಿಸಲಾಗುತ್ತಿದೆ. ಪೆಂಡಾಲ್ಗಳ ಮುಂದೆ ಯಾವ ಊರಿನ ಹಗೂ ರಾಸುಗಳ ಮಾಲೀಕರ ವಿವರದ ಬೃಹತ್ ಪ್ಲೆಕ್ಸ್ಗಳನ್ನು ಸಹ ಹಾಕಲಾಗುತ್ತದೆ.
ಅಂತೆಯೇ ದನಗಳ ಜಾತ್ರೆಯಲ್ಲಿ ರೈತರು ಆಯಕಟ್ಟಿನ ಸ್ಥಳಗಳಲ್ಲಿ ತಾವು ಸಾಕಿರುವ ಹೋರಿಗಳನ್ನು ಕಟ್ಟಲು ಹೈಟೆಕ್ ಮಾದರಿಯಲ್ಲಿ ಪೆಂಡಾಲ್ಗಳ ನಿರ್ಮಾಣ ಪ್ರಾರಂಭಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾಗುತ್ತಿದ್ದಂತೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನಡೆಯುವ ಘಾಟಿಸುಬ್ರಹ್ಮಣ್ಯ ದನಗಳ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.
ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಾದ ತಮಿಳುನಾಡಿನ ಸೇಲಂ, ಹೊಸೂರು. ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ. ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.
ವಿವಿಧೆಡೆಗಳಿಂದ ದನಗಳ ಜಾತ್ರೆಗೆ ಬರುವ ರೈತರಿಗೆ ದೇವಾಲಯ ಆಡಳಿತ ಮಂಡಳಿ ವತಿಯಿಂದ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಾತ್ರೆಯಲ್ಲಿ ಅಮೃತ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರಲಿವೆ.
ಜ.5ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ
ಬ್ರಹ್ಮರಥೋತ್ಸವ ಹಾಗೂ ಜಾತ್ರೆ ಕುರಿತಂತೆ ಜಿಲ್ಲಾಕಾರಿಗಳ ಸಭೆ ನಡೆದಿದ್ದು, ಡಿ.20 ರಿಂದ 30 ವರೆಗೆ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಸುವಂತೆ ಜಿಲ್ಲಾಕಾರಿ ಸಂಬಂತ ಅಕಾರಿಗಳಿಗೆ ಸೂಚಿಸಿದ್ದಾರೆ.
ಟೋಲ್ ಸುಂಕ ಬೇಡ: ನಡೆದುಕೊಂಡು ಕರೆ ತರುವ ರಾಸುಗಳಿಗೆ ಟೋಲ್ ಸುಂಕದಿಂದ ವಿನಾಯಿತಿ ದೊರೆಯುತ್ತಿದೆ. ಆದರೆ ವಾಹನಗಳಲ್ಲಿ 50ಗಳವರೆಗೂ ಟೋಲ್ ಸುಂಕ ವಸೂಲಿ ಮಾಡಲಾಗುತ್ತದೆ. ಈ ಬಗ್ಗೆ ರೈತರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಅಂತರ ರಾಜ್ಯ ದನಗಳ ಜಾತ್ರೆಯಲ್ಲಿ ಪಾಲ್ಗೊಳ್ಳುವ ರಾಸುಗಳನ್ನು ಸಾಗಿಸುವ ವಾಹನಗಳಿಗೆ ಯಾವುದೇ ಸುಂಕ ವಿಸಬಾರದು ಹಾಗೂ ಗೌರಿಬಿದನೂರು ರಸ್ತೆಯಲ್ಲಿ ಬರುವ ಗುಂಜೂರು ಟೋಲ್ ಉಚಿತವಾಗಿ ಪ್ರವೇಶ ನೀಡಬೇಕು. ಜಾತ್ರೆಗೆ ಮಾರಾಟಕ್ಕೆ ಬರುವ ಹೋರಿಗಳಿಗೆ ಟೋಲ್ ಸುಂಕು ವಸೂಲಿಯಿಂದ ವಿನಾಯಿತಿ ನೀಡಬೇಕು’ ಎಂದು ತೂಬಗೆರೆ ಗ್ರಾಮದ ಯುವ ಮುಖಂಡ ಉದಯ ಆರಾಧ್ಯ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಜಾಗಕ್ಕೆ ವ್ಯವಸ್ಥೆ ಮಾಡಿ: ಜಾತ್ರೆಗೆ ಮಾರಾಟಕ್ಕೆ ಬರುವ ಒಂದು ಜೋಡಿ ಹೋರಿಗಳಿಗೆ ಹೋರಿಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆಯೇ ಕಡಿಮೆಯಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಜಾತ್ರೆಗೆ ಬರುವ ಹೋರಿಗಳ ಸಂಖ್ಯೆಯು ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ಟೋಲ್ ವಿನಾಯಿತಿ ನೀಡಬೇಕು.
ಖಾಸಗಿಯವರು ಜಾತ್ರೆ ನಡೆಯುವ ಸ್ಥಳಗಳಲ್ಲಿ ಕಾಂಪೌಂಡ್ ಮಾಡಿಕೊಂಡಿರುವುದರಿಂದ, ರಾಸುಗಳ ಪ್ರದರ್ಶನಕ್ಕೆ ಸೂಕ್ತ ಸ್ಥಳಾವಕಾಶದ ಕೊರತೆಯಾಗುತ್ತಿದೆ. ಆದ್ದರಿಂದ ತಾವುಗಳು ಕಾಂಪೌಂಡ್ ತೆರವುಗೊಳಿಸಬೇಕು ಎಂದು ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.