Video: ಅಂಬೇಡ್ಕರ್ ಕುರಿತು ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ..!; ದೇಶಾದ್ಯಂತ ಆಕ್ರೋಶ.. ವಿಪಕ್ಷಗಳು ಕಿಡಿ| Amit Shah

ದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

video courtesy PTI

ಸದನದಲ್ಲಿ ಮಾತಾನಾಡುವ ವೇಳೆ ಅಮಿತ್ ಶಾ ಅವರು, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇಷ್ಟು ಸಲ ದೇವರ ನಾಮಸ್ಮರಣೆ ಮಾಡಿದ್ದರೆ ಏಳೇಳು ಜನ್ಮಕ್ಕೂ ಸ್ವರ್ಗಕ್ಕೆ ಹೋಗುತ್ತಿದ್ದರು ಎಂದು ಲೇವಡಿ ರೀತಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಈ ಕುರಿತ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಸಂಸದರು ಸಂಸತ್ತಿನ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಸಂಸತ್ತಿನ ಹೊರಗೆ ಸಂಸದರು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಡಿಎಂಕೆ, ಆರ್‌ಜೆಡಿ, ಎಡಪಕ್ಷಗಳು ಹಾಗೂ ಆಪ್ ಸೇರಿದಂತೆ ವಿವಿಧ ಪಕ್ಷಗಳು ಸಂಸದರು ಭಾಗವಹಿಸಿದ್ದರು.

ರಾಜ್ಯಸಭೆಯಲ್ಲಿ ಮಧ್ಯಾಹ್ನ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿತ್ತು.

ಪ್ರತಿಭಟನೆ ಬಳಿಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಅಮಿತ್ ರಾಜೀನಾಮೆ ಪಡೆಯುವಂತೆ ಮನವಿ ಮಾಡಿದರು.

ಟಿಎಂಸಿ ಹಕ್ಕುಚ್ಯುತಿ ನೋಟಿಸ್‌: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒಬ್ರಯಾನ್ ಅವರು ಹಕ್ಕು ಚ್ಯುತಿ ನೋಟಿಸ್‌ ನೀಡಿದ್ದಾರೆ.

ಅಮಿತ್ ಶಾ ಹೇಳಿಕೆ ಹಾಗೂ ಅವರು ಹೇಳಿದ ರೀತಿ ಎರಡೂ ಅವಮಾನಕಾರಿಯಾಗಿತ್ತು ಎಂದು ಬುಧವಾರ ಮಧ್ಯಾಹ್ನದ ಬಳಿಕ ನೀಡಿರುವ ಹಕ್ಕುಚ್ಯುತಿ ನೋಟಿಸ್‌ನಲ್ಲಿ ಹೇಳಲಾಗಿದೆ.

ದಿಢೀರ್ ಸುದ್ದಿಗೋಷ್ಠಿ: ಅಮಿತ್ ಶಾ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಅಮಿತ್ ಶಾ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಿರುಚುತ್ತಿದೆ ಎಂದು ದೂರಿದ್ದಾರೆ.

ಅಂಬೇಡ್ಕರ್ ಅವರಿಗೆ ಎಂದಿಗೂ ಅವಮಾನ ಮಾಡದ ಪಕ್ಷದಿಂದ ನಾನು ಬಂದಿದ್ದೇನೆ. ಸಮಾಜದಲ್ಲಿ ಗೊಂದಲ ಮೂಡಿಸಲು ಮತ್ತು ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಈ ಹಿಂದೆಯೂ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತಿರುಚಿತ್ತು ಎಂದು ಹೇಳಿದರು.

ಪ್ರಧಾನಿ ಮೋದಿ ಸಮರ್ಥನೆ: ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನಿ ಮೋದಿ, ಸಂವಿಧಾನ ಶಿಲ್ಪಿಯನ್ನು ಸದಾ ಅವಮಾನಿಸುತ್ತಲೇ ಇರುವ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಗೃಹ ಸಚಿವರು ಬಹಿರಂಗಪಡಿಸಿದ್ದಾರೆ.

ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ದಮೆ ಗೊಂಡಿದ್ದಾರೆ. ಅದಕ್ಕಾಗಿಯೇ ಈಗ ಡ್ರಾಮಾ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಕಿಡಿ: ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿ ರುವ ಸಂಸತ್‌ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದಿದ್ದೀರಿ. ಆದರೆ ವಾಸ್ತವವಾಗಿ ನಿಮ್ಮ ಪಕ್ಷದವರು ಮೋದಿ..ಮೋದಿ..ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ.

ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]