ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ರಿಲೀಫ್..!| CT Ravi

ಬೆಂಗಳೂರು: ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧಿತರಾಗಿರುವ ಎಂಎಲ್‌ಸಿ ಸಿಟಿ ರವಿ (CT Ravi) ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಪ್ರಕರಣ ರದ್ದುಗೊಳಿಸಬೇಕು ಹಾಗೂ ಕೇಸ್ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿರುವ ಕುರಿತು ಹೈಕೋರ್ಟ್‌ ನ್ಯಾಎಂ.ಜಿ ಉಮಾ ಅವರ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಸಿತು.

ಸಿಟಿ ರವಿ ಅವರ ಪರವಾಗಿ ವಾದಿಸಿರುವ ಹಿರಿಯ ವಕೀಲ ಸಂದೇಶ್ ಚೌಟ ಅವರು, ರವಿ ಅವರನ್ನು ಬಂಧಿಸಿರುವುದೇ ಅಕ್ರಮವಾಗಿದೆ. ನಮ್ಮ ಕಕ್ಷಿದಾರರಿಗೆ ಬಂಧನದ ಕುರಿತು ಯಾವುದೇ ನೋಟಿಸ್‌ ಸಹ ನೀಡಿಲ್ಲ. ತಕ್ಷಣ ಸಿಟಿ ರವಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಕೋರಿದರು.

ಸರ್ಕಾರದ ಪರ ಪ್ರತಿವಾದಿಸಿದ ಎಸ್‌ಪಿಪಿ ಬಿ.ಎ. ಬೆಳ್ಳಿಯಪ್ಪ ಅವರು, ರವಿ ಅವರ ಜಾಮೀನು ಅರ್ಜಿ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ. ಈ ಅರ್ಜಿಯನ್ನು ಪರಿಗಣಿಸಬಾರದು. ಬಂಧನ ಅಕ್ರಮವಾಗಿದ್ದರೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಬಹುದು.

ಸಿಟಿ ರವಿ ಅವರು ಟ್ರಾನ್ಸಿಟ್ ರಿಮ್ಯಾಂಡ್‌ನಲ್ಲಿದ್ದಾರೆ. ಅವರು ಕೆಲ ಆಕ್ಷೇಪಾರ್ಹ ಪದಗಳನ್ನು ಆಡಿದ್ದಾರೆ. ಪೊಲೀಸ್ ಕಷ್ಟಡಿಯಲ್ಲಿ ರವಿ ಅವರು ಸ್ವತಂತ್ರ ಹೋರಾಟಗಾರರಂತೆ ನಡೆದುಕೊಂಡಿದ್ದಾರೆ. ಪೊಲೀಸರ ವಿಚಾರಣೆಗೆ ಸಹಕರಿಸಿಲ್ಲ ಎಂದು ಪೀಠದ ಗಮನಕ್ಕೆ ತಂದರು.

ಇದೇ ವೇಳೆ ಸಿಟಿ ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿಯ ಬಗ್ಗೆ ಪ್ರಶ್ನಿಸಿರುವ ಪೀಠವು, ಗಂಭೀರ ಅಪರಾಧ ಪ್ರಕರಣಗಳಲ್ಲೂ ಪೊಲೀಸರು ವರ್ಷಗಟ್ಟಲೇ ಆರೋಪಿಗಳನ್ನು ಬಂಧಿಸಲ್ಲ. ಹೀಗಿರುವಾಗ ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿ, ಅವರು ಗಾಯಗೊಂಡಿರುವ ಘಟನೆ ಬಗ್ಗೆ ಪೀಠ ಕೇಳಿದೆ.

ಅಲ್ಲದೇ ದೂರುದಾರರು ಮತ್ತು ಅರ್ಜಿದಾರರು ಇಬ್ಬರೂ ಜನಪ್ರತಿನಿಧಿಗಲಾಗಿದ್ದು, ದುರದೃಷ್ಟಕರ ಬೆಳವಣಿಗೆ ಎಂದರೆ ಅವರಿಬ್ಬರೂ ನಮ್ಮ ನಾಯಕರು. ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿರಬೇಕು ಎಂದೂ ಪೀಠ ಒತ್ತಿ ಹೇಳಿದೆ ಎಂದು ವರದಿಯಾಗಿದೆ.

ಸದ್ಯ ಹೈಕೋರ್ಟ್ ತೀರ್ಪಿನಿಂದ ರವಿ ಅವರು ಬೆಂಗಳೂರಿಗೆ ಬರುತ್ತಿರುವಾಗಲೇ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!