Farmers Day |ದೊಡ್ಡರಾಯಪ್ಪನಹಳ್ಳಿಯಲ್ಲಿ ರೈತ ದಿನಾಚರಣೆ: ಪ್ರಗತಿ ಪರ ರೈತರಿಗೆ ಸನ್ಮಾನ

ದೊಡ್ಡಬಳ್ಳಾಪುರ Farmers Day: ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಮಾರ್ಗದರ್ಶನದ ಕೊರತೆಯಿಂದ ಕೃಷಿಯಲ್ಲಿ ಯಶಸ್ಸು ಕಾಣಲಾಗುತ್ತಿಲ್ಲ. ಈ ದಿಸೆಯಲ್ಲಿ ರೈತರು ಸರ್ಕಾರದಿಂದ ಸಿಗುವ ಸೌಲಭ್ಯ ಬಳಸಿಕೊಂಡು ಉತ್ತಮ ಕೃಷಿಯನ್ನು ಮಾಡಿ ಹೆಚ್ಚು ಆದಾಯ ಗಳಿಸಬೇಕು ಎಂದು ಮೆಳೇಕೋಟೆ ಗ್ರಾಪಂ ಅಧ್ಯಕ್ಷ ಬಿ.ಎನ್.ಶ್ರೀನಿವಾಸ ಮೂರ್ತಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಿಂದ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕೃಷಿಯೊಂದಿಗೆ ರೈತರು ಕೃಷಿಯ ಉಪಕಸುಬುಗಳಾದ ಹೈನುಗಾ ರಿಕೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ತಂತ್ರಜ್ಞಾನ ಅಳವಡಿಸಿಕೊಳ್ಳಿ: ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ಭಾರತದೇಶದ ಐದನೇ ಪ್ರಧಾನ ಮಂತ್ರಿಯಾದ ದಿ.ಚೌಧರಿ ಚರಣ್ ಸಿಂಗ್ ರವರು ರೈತಾಪಿ ವರ್ಗದವರಿಗೆ ನೀಡಿದ ಕೊಡುಗೆಯ ಸ್ಮರಣಾರ್ಥ ಅವರ ಜನ್ಮ ದಿನವನ್ನು ರೈತ ದಿನಾಚರಣೆಯೆಂದು ಆಚರಿಸಲಾಗುತ್ತಿದೆ.

ಇಂದಿನ ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗೆ ಅನುಗುಣವಾದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬೇಕು. ರೈತರು ಬೆಳೆದ ಬೆಳೆಗಳ ಆದಾಯದ ಪಾಲು ಕೇವಲ ಶೇ.30ರಿಂದ 37ರಷ್ಟು ಮಾತ್ರ ರೈತರಿಗೆ ದೊರೆಯುತ್ತಿದೆ. ಉಳಿದ ಶೇ.63-70ರಷ್ಟು ಇತರೆ ದಲ್ಲಾಳಿಗಳು, ಮಧ್ಯವರ್ತಿಗಳು ಮತ್ತು ನೇರ ಮಾರಾಟಗಾರರ ಪಾಲಾಗುತ್ತಿದೆ. ಈ ಪೋಲನ್ನು ತಪ್ಪಿಸುವ ಸಲುವಾಗಿ ರೈತ ಉತ್ಪಾದಕ ಕಂಪೆನಿಗಳ ಮೂಲಕ ಮಾರಾಟ ವ್ಯವಸ್ಥೆ ಕಲ್ಪಿಸಿಕೊಂಡು ಮಧ್ಯವರ್ತಿ ಮತ್ತು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ವೆಂಕಟೇಗೌಡ, ಕೃಷಿವಿಶ್ವವಿದ್ಯಾನಿಲಯದಿಂದ ಹೊಸದಾಗಿ ಬಿಡುಗಡೆ ಮಾಡಿದ ನೂತನ ತಳಿಗಳ ಬಗ್ಗೆ ಮಾಹಿತಿ ನೀಡಿ, ದತ್ತು ಗ್ರಾಮದ ಪ್ರಾಯೋಜನೆ ಯಡಿಯಲ್ಲಿ ಪರಿಚಯಿಸಲಾದ ಹೊಸ ತಳಿ, ಬೆಳೆಗಳು ಮತ್ತು ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಕೃಷಿ ವಿಜ್ಞಾನ ಕೇಂದ್ರವು ಕೈಗೊಳ್ಳುವ ಚಟುವಟಿಕೆಗಳಲ್ಲಿ ಭಾಗವಹಿಸಲು ತಿಳಿಸಿದರು.

ಮಣ್ಣು ನೀರು ಪರೀಕ್ಷೆ ಮಾಡಿಸಿ: ಪ್ರಮು ಖರಾದ ಡಾ.ವೀರನಾಗಪ್ಪ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಣ್ಣು ಮತ್ತು ನೀರು ಪರೀಕ್ಷೆಯನ್ನು ಮಾಡಿಸಿಕೊಂಡು, ಪರೀಕ್ಷಾ ಆಧಾರದ ಮೇಲೆ ಪೋಷಕಾಂಶಗಳನ್ನು ನೀಡಿ, ಬೇಸಾಯದ ಖರ್ಚನ್ನು ಕಡಿಮೆ ಮಾಡಿಕೊಂಡು ಹೆಚ್ಚು ಆದಾಯಗಳಿಸಬೇಕು ಎಂದು ಕೋರಿದರು.

ಸನ್ಮಾನ: ಜಿಲ್ಲೆಯ ನಾಲ್ಕು ಪ್ರಗತಿ ಪರ ರೈತರಾದ ಎಂ.ಸಿ.ರಾಜಣ್ಣ (ಮಾರಹಳ್ಳಿ). ಅನಿಲ್(ಕಾಚಹಳ್ಳಿ), ಮಹೇಶ್ (ಶ್ರವಣೂರು) ಮತ್ತು ಶೋಭಾ ಕುಮಾರಿ (ಗಂಟೆಗಾನಹಳ್ಳಿ) ಅವರನ್ನು ಸನ್ಮಾನಿಸಲಾಯಿತು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]