Christmas 2024: ಇಂದು ಶಾಂತಿ, ಸೌಹಾರ್ದತೆ ಸಾರುವ ಕ್ರಿಸ್‌ಮಸ್​ ಹಬ್ಬ

Christmas 2024: ಇಂದು ವಿಶ್ವದಾದ್ಯಂತ ಕ್ರಿಸ್​ಮಸ್​​ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಎಲ್ಲೆಲ್ಲೂ ಕ್ರಿಸ್‌ಮಸ್‌ನ ಸಂಭ್ರಮ ಜೋರಾಗಿದೆ. ಪ್ರತಿವರ್ಷ ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಎಂದರೆ ಎಲ್ಲರೂ ಒಟ್ಟಾಗಿ ಸಂತೋಷ, ಖುಷಿಯ ಕ್ಷಣಗಳನ್ನು ಕಳೆಯುವುದು. ಕ್ರಿಸ್‌ಮಸ್‌ ಹಳೆಯ ವರ್ಷಕ್ಕೆ ಅಂತ್ಯ ಹಾಡಿ, ಹೊಸ ವರ್ಷವನ್ನು ಸ್ವಾಗತಿಸುವ ಸಮಯವೂ ಹೌದು.

ಡಿ.24 ರಂದು ರಾತ್ರಿ ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ಎಲ್ಲ ಚರ್ಚ್​ಗಳಲ್ಲಿ ಪವಿತ್ರ ದಿವ್ಯ ಬಲಿಪೂಜೆ, ಪ್ರಾರ್ಥನೆ ನಡೆಯಿತು. ವಿವಿಧ ಚರ್ಚ್​ಗಳ ಉಸ್ತುವಾರಿ ಹೊಂದಿರುವ ಆಯಾ ಪ್ರದೇಶಗಳ ಬಿಷಪ್​ಗಳು ಹಾಗೂ ಧರ್ಮಗುರುಗಳ ನೇತೃತ್ವದಲ್ಲಿ ಕ್ರಿಸ್​ಮಸ್​​​ ವಿಶೇಷ ಪೂಜೆಗಳು ನೆರವೇರಿದವು.

ಏಸುಕ್ರಿಸ್ತ ಹುಟ್ಟಿದ ದಿನವೇ ಕ್ರಿಸ್​ಮಸ್​ ಹಬ್ಬ. ಈ ದಿನವನ್ನು ಕ್ರಿಸ್ತ ಜಯಂತಿ ಎಂದೂ ಆಚರಿಸಲಾಗುತ್ತದೆ. ಜಗತ್ತಿನಾದ್ಯಂತ ಪ್ರತಿ ವರ್ಷ ಡಿಸೆಂಬರ್​ 25 ರಂದು ಈ ಹಬ್ಬ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಕ್ರೈಸ್ತ ಧರ್ಮದ ಪವಿತ್ರ ಗ್ರಂಥ ಬೈಬಲ್​ನ ಪ್ರಕಾರ ಯೇಸುಕ್ರಿಸ್ತ, ಮೇರಿ ಹಾಗೂ ಜೋಸೆಫರ ಮಗನಾಗಿ ಜೆರುಸಲೇಮ್​ ಪಟ್ಟಣದ ಬೆತ್ಲಹೆಮ್​​ ಎಂಬ ಊರಿನಲ್ಲಿ ಜನಿಸಿದರು. ರೋಮನ್​ ಜನಗಣತಿಯ ಪ್ರಕಾರ ಮೇರಿ ಹಾಗೂ ಜೋಸೆಫ್​ ದಂಪತಿ ತಮ್ಮ ಹೆಸರನ್ನು ನೋಂದಾಯಿಸಲು ಹೋಗುತ್ತಿದ್ದ ವೇಳೆ ಮೇರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಇದ್ದ ಗೋದಲಿಯೊಂದರಲ್ಲಿ ಆಶ್ರಯ ಪಡೆದು, ಯೇಸುಕ್ರಿಸ್ತನಿಗೆ ಜನ್ಮ ನೀಡಿದ್ದರು.

ಯಹೂದ್ಯ ಧರ್ಮದ ಪ್ರಕಾರ ಪ್ರವಾದನೆಗಳನ್ನು ನೆರವೇರಿಸಲು ಡೇವಿಡ್‌ನ ವಂಶದಲ್ಲಿ ಮಿಸಿಹಾ ಅಥವಾ ಮೆಸ್ಸಾಯ ಎನ್ನುವ ಅರ್ಥದ ದೇವರ ದೂತ, ರಕ್ಷಕ ಬರುವನೆಂಬ ನಂಬಿಕೆಯಿತ್ತು. ಈ ದೇವರ ದೂತನೇ ಯೇಸುಕ್ರಿಸ್ತ ಎಂದು ಕ್ರೈಸ್ತರು ಭಾವಿಸುತ್ತಾರೆ.

ಗ್ರೀಕ್ ಲಿಪಿಯಲ್ಲಿ ಕ್ರಿಸ್ತನ ಮೊದಲ ಅಕ್ಷರವು ಇಂಗ್ಲಿಷಿನ ಎಕ್ಸ್​ನಂತೆ ತೋರುವುದರಿಂದ ಕೆಲವರು ಎಕ್ಸ್​ಮಸ್ ಎಂದು ಬರೆಯುತ್ತಿದ್ದರು. ಅದು ಮುಂದುವರೆದು ಕ್ರಿಸ್ಮಸ್ ಆಗಿದೆ ಎನ್ನಲಾಗಿದೆ.

ಕ್ರಿಸ್​ಮಸ್​​ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲೂ ಕ್ರಿಸ್​ಮಸ್​ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆಯಾಗಿದೆ. ಕ್ರಿಸ್​ಮಸ್​​ ವೃಕ್ಷಕ್ಕೆ ದೀಪಗಳು ಹಾಗೂ ಇತರ ವಸ್ತುಗಳಿಂದ ಅಲಂಕಾರ ಮಾಡಲಾಗುತ್ತದೆ.

ಅನೇಕ ಕಡೆಗಳಲ್ಲಿ ಮನೆಯ ಹೊರಗಡೆ ಕ್ರಿಸ್ತನ ಜನನ ಸಮಯದಲ್ಲಿ ಗೊಲ್ಲರಿಗೆ ಮಾರ್ಗದರ್ಶಿಯಾಗಿ ಗೋಚರಿಸಿದ ನಕ್ಷತ್ರದ ಆಕೃತಿಗಳನ್ನು, ನಕ್ಷತ್ರ ದೀಪಗಳನ್ನು ಕಟ್ಟುವುದು ಪಾರಂಪರಿಕೆಯಾಗಿ ಮುಂದುವರಿದುಕೊಂಡು ಬಂದಿದೆ. ಅದಷ್ಟೇ ಅಲ್ಲದೆ ಕ್ರಿಸ್​ಮಸ್​​ ಹಬ್ಬಕ್ಕೆ ಚರ್ಚ್​ಗಳು ಹಾಗೂ ಮನೆಗಳ ಮುಂದೆ ಗೋದಲಿಗಳ ನಿರ್ಮಾಣ ಮಾಡಲಾಗುತ್ತದೆ.

ಹಬ್ಬಕ್ಕೆ ಇನ್ನೇನು ಒಂದು ತಿಂಗಳ ಇರುವಾಗಲೇ ಇದರ ತಯಾರಿ ಪ್ರಾರಂಭವಾಗುತ್ತದೆ. ಇದರ ಜೊತೆಗೆ ಕ್ರಿಸ್ಮಸ್​ ಪ್ರಯುಕ್ತ ಡಿಸೆಂಬರ್​ ತಿಂಗಳ ಆರಂಭದಿಂದಲೇ ವೃತಾಚರಣೆ ಆರಂಭವಾಗುತ್ತದೆ.

ಡಿಸೆಂಬರ್​ ತಿಂಗಳ ಕೊನೆಯ ವಾರದಲ್ಲಿ ಮನೆ ಮನೆಗೆ ತೆರಳಿ ಕ್ರಿಸ್​ಮಸ್​​ ಸಂದೇಶ ಸಾರುವ ಕ್ಯಾರಲ್​ ಹಾಡುಗಳನ್ನು ಹಾಡಲಾಗುತ್ತದೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!