Daily story: ಹರಿತಲೇಖನಿ ದಿನಕ್ಕೊಂದು ಕಥೆ: ಸಜ್ಜನರ ಸಹವಾಸ

Daily story: ಬಹಳ ವರ್ಷಗಳ ಹಿಂದೆ ಕಾಶಿಯ ರಾಜ ಬ್ರಹ್ಮದತ್ತನಾಗಿದ್ದ. ಆತ ತಾರುಣ್ಯ­ದಲ್ಲೇ ಪಟ್ಟಕ್ಕೇರಿದವನು. ಆತ ಧರ್ಮಜ್ಞ. ಅವನಿಗೆ ಸಕಲ ವಿದ್ಯೆಗಳೂ ಕರ­ತ­ಲಾಮಲಕವಾಗಿದ್ದವು.

ಆತನ. ಮಾತು, ನಡೆ ಅತ್ಯಂತ ನಯ. ಅವನ ಬಾಯಿಯಿಂದ ತಪ್ಪು ಮಾತುಗಳು ಬರುವುದೇ ಸಾಧ್ಯವಿರಲಿಲ್ಲ. ಅವನ ಕರುಣೆ, ನ್ಯಾಯಪರತೆ, ಜನಪ್ರೀತಿ ದಂತಕಥೆಗಳೇ ಆಗಿದ್ದವು.

ಅವನ ರಾಜ್ಯದಲ್ಲಿ ಕಳವು, ಅಪರಾಧಿಗಳೇ ಇರಲಿಲ್ಲ. ನ್ಯಾಯಾಧೀಶರಿಗೆ, ಶಿಸ್ತು­ಪಾಲನೆ ಮಾಡುವ ಸೈನಿಕರಿಗೆ ಯಾವ ಕೆಲಸವೂ ಇರಲಿಲ್ಲ. ಸಮಾಜದಲ್ಲಿ ಅತ್ಯಂತ ಶಾಂತಿ ಇತ್ತು.ಬ್ರಹ್ಮದತ್ತ ಇಷ್ಟಾದರೂ ತನ್ನಲ್ಲಿ ಯಾವುದಾದರೂ ದುರ್ಗುಣವಿದೆಯೇ ಎಂದು ಪರೀಕ್ಷಿಸಿ­ಕೊಳ್ಳುತ್ತಿದ್ದ. ಆಸ್ಥಾನದಲ್ಲಿ ಯಾರನ್ನು ಕೇಳಿದರೂ ಅವರು ಅವನಲ್ಲಿ ಒಂದು ಕೆಟ್ಟಗುಣವನ್ನೂ ಹೇಳಲಿಲ್ಲ. ಅವರು ಹೆದರಿಕೆಯಿಂದ ಹೇಳಿರಲಿ­ಕ್ಕಿಲ್ಲ­ವೆಂದುಕೊಂಡು ವೇಷ ಮರೆಸಿಕೊಂಡು ತನ್ನ ದೇಶದ ಹಳ್ಳಿಹಳ್ಳಿಗಳಲ್ಲಿ ಸಂಚರಿ­ಸಿದ.

ಅಲ್ಲಿಯೂ ಸಾಮಾನ್ಯರನ್ನು ಪ್ರಶ್ನಿಸಿದ. ಅವರಲ್ಲಿ ಒಬ್ಬರೂ ರಾಜನ ಒಂದು ದುರ್ಗುಣವನ್ನೂ ಹೇಳಲಿಲ್ಲ. ಬದಲಾಗಿ ಅವನನ್ನು ದೇವರೆಂದೇ ಭಾವಿಸುವು-ದಾಗಿ ಹೇಳಿದರು. ಬ್ರಹ್ಮದತ್ತ ಅಂದಿನ ಕಾಲದ ಮಹಾಜ್ಞಾನಿ ಎಂದು ಹೆಸರಾದ ವಿಷ್ಣುಗೋಪನನ್ನು ಕಂಡು ತನ್ನಲ್ಲಿ ಯಾವುದಾದರೂ ದೋಷವಿದ್ದರೆ ತಿಳಿಸಿ ಅದನ್ನು ಕಳೆದುಕೊಳ್ಳುವ ವಿಧಾನ­ವನ್ನು ಹೇಳಲು ಕೇಳಿಕೊಂಡ.

ಇದೇ ರೀತಿಯ ಪರಿಸ್ಥಿತಿ ಕೋಸಲ ದೇಶದ ರಾಜನಾದ ಮಲಿಕಸಿಂಹನಿಗೂ ಬಂದಿತ್ತು. ಅವನನ್ನು ಜನ ದೇವರೆಂದೇ ನಂಬುತ್ತಿದ್ದರು. ಅವನ ರಾಜ್ಯದಲ್ಲೂ ಒಂದೇ ಒಂದು ಕಳವು, ಅನ್ಯಾಯದ ಪ್ರಸಂಗ­­ಗಳು ನಡೆಯುತ್ತಿರಲಿಲ್ಲ. ಅವನೂ ಕೂಡ ವಿಷ್ಣುಗೋಪನನ್ನು ಕಂಡು ತನ್ನ ದುರ್ಗುಣಗಳನ್ನು ಕಂಡು ಹಿಡಿಯಲು ಬೇಡಿಕೊಂಡಿದ್ದ. ವಿಷ್ಣು­ಗೋಪ ಇಬ್ಬರೂ ರಾಜರ ವಿವರಗಳನ್ನೆಲ್ಲ ತರಿಸಿಕೊಂಡ. ಆಶ್ಚರ್ಯವೆಂದರೆ ಇಬ್ಬರೂ ಒಂದೇ ವಯಸ್ಸಿನವರು. ಅವರ ರಾಜ್ಯದ ವಿಸ್ತಾರ, ಐಶ್ವರ್ಯ, ಸೈನ್ಯದ ಶಕ್ತಿ, ಅವರು ಪಡೆದ ಯಶಸ್ಸು ಎಲ್ಲವೂ ಸಮನಾಗಿಯೇ ಇದ್ದವು. ಎರಡೂ ದೇಶದ ಜನರು ತಮ್ಮ ತಮ್ಮ ರಾಜನಲ್ಲಿ ಒಂದೇ ಒಂದು ತಪ್ಪನ್ನು ಕಂಡುಹಿಡಿ­ಯಲು ಅಸಮರ್ಥ­ರಾಗಿದ್ದರು. ಇಬ್ಬ­ರಲ್ಲಿ ಯಾರು ಹೆಚ್ಚು ಒಳ್ಳೆಯವರು ಎಂಬು­ದನ್ನು ಗುರುತಿಸುವುದು ಹೇಗೆ ಎಂಬುದು ವಿಷ್ಣುಗೋಪನಿಗೆ ಸವಾಲಾ­ಯಿತು.

ಆಗ ಒಂದು ದಿನ ಯೋಚನೆ ಮಾಡಿ ಇಬ್ಬರೂ ರಾಜರ ರಥಗಳನ್ನು ಒಂದೆಡೆಗೆ ಕಳುಹಿಸುವಂತೆ ಸೂಚನೆ ನೀಡಿದ. ರಾಜರ ಸಾರಥಿಗಳು ತಮ್ಮ ರಥಗಳನ್ನು ತೆಗೆದುಕೊಂಡು ತಿಳಿಸಿದ ಸ್ಥಳಕ್ಕೆ ಹೊರಟರು. ಅವರಿಬ್ಬರ ರಥಗಳೂ ಒಂದು ಇಕ್ಕಟ್ಟಾದ ಸೇತುವೆಯ ಮೇಲೆ ಬರುವಂತೆ ವಿಷ್ಣುಗೋಪ ನೋಡಿ­ಕೊಂಡ. ಸೇತುವೆಯ ಮಧ್ಯದಲ್ಲಿ ಎರಡೂ ರಥಗಳು ಮುಖಾಮುಖಿ­ಯಾಗಿ ನಿಂತವು. ಈಗ ಯಾವು­ದಾದರೂ ಒಂದು ರಥ ಹಿಂದೆ ಹೋಗದೇ ಗತಿಯಲ್ಲ..! ಆದರೆ ಹಿಂದೆ ಹೋಗು­ವವರು ಯಾರು? ವಿಷ್ಣುಗೋಪ ಇಬ್ಬರೂ ಸಾರಥಿಗಳ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ. ಸ್ವಲ್ಪ ಸಮಯದ ಮೇಲೆ ಬ್ರಹ್ಮದತ್ತನ ಸಾರಥಿ ರಥವನ್ನು ಹಿಂದೆ ತೆಗೆದುಕೊಂಡು ಹೋದ.

ಮಲಿಕಸಿಂಹನ ಸಾರಥಿ ಸಂತೋಷದಿಂದ ರಥ ಓಡಿಸಿಕೊಂಡು ನಡೆದ. ನಂತರ ವಿಷ್ಣುಗೋಪ ಇಬ್ಬರೂ ರಾಜರನ್ನು ಒಟ್ಟಿಗೇ ಕರೆದು ಹೇಳಿದ, ‘ನೀವಿಬ್ಬರೂ ಒಳ್ಳೆಯ ರಾಜರೇ, ಅಸಾಮಾನ್ಯ ಗುಣಗಳನ್ನು ಹೊಂದಿದ್ದೀರಿ. ಆದರೆ, ಮಲಿಕಸಿಂಹನಿಗೆ ಇನ್ನೂ ಸ್ವಲ್ಪ ದರ್ಪ, ಅಹಂಕಾರವಿದೆ. ಅದು ಕರಗಬೇಕು. ಯಾಕೆಂದರೆ ನಿಮ್ಮ ಸಾರಥಿ ಆ ದರ್ಪ­ವನ್ನು ತೋರಿಸಿದ. ಆದರೆ ಬ್ರಹ್ಮದತ್ತನ ಸಾರಥಿ ನಗು ಮುಖದಿಂದ ರಥವನ್ನು ಹಿಂದೆ ತೆಗೆದ. ಯಜಮಾನನ ದರ್ಪ ಸೇವಕನಿಗೂ ತಟ್ಟುತ್ತದೆ’ ಮಲಿಕಸಿಂಹ ಈ ಮಾತು ಒಪ್ಪಿದ ಹಾಗೂ ಇನ್ನೂ ವಿನಯಶೀಲನಾಗಲು ಪ್ರಯತ್ನಿಸಿ ಯಶಸ್ವಿ­ಯಾದ.

ಯಜ-ಮಾನನ ಗುಣ, ದುರ್ಗುಣಗಳು ಅವನ ಹಿಂಬಾಲಕರಿಗೂ ಅಂಟಿಕೊಳ್ಳುತ್ತವೆ. ಮೌಲ್ಯಗಳು ಮೇಲಿ­ನಿಂದ ಕೆಳಕ್ಕೆ ಇಳಿಯುತ್ತವೆ. ಯಜಮಾನ ಹೇಗಿದ್ದಾನೆ ಎಂದು ತಿಳಿಯಲು ಅವನನ್ನೇ ನೋಡಬೇಕಿಲ್ಲ, ಅವನೊಂದಿಗೇ ಇರುವ ಸಹಚರರನ್ನು ಗಮನಿಸಿದರೆ ಸಾಕು. ಸಜ್ಜನ­ನಾದ ಯಜಮಾನ ತನ್ನೊಂದಿಗೆ ಇರುವವರನ್ನೂ ಸಜ್ಜನರನ್ನಾಗಿ ಮಾಡು­ತ್ತಾನೆ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!