ಚಿಕ್ಕಬಳ್ಳಾಪುರ: ಎಲೆಕ್ಟ್ರಿಕ್ ಸ್ಕೂಟಿ ಮೂಲಕ ಮನೆಗೆ ಹೊರಟಿದ್ದ ಕೇಂದ್ರಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿಮಾನಿ, ಜೆಡಿಎಸ್ (JDS) ಮುಖಂಡನನ್ನ ರಸ್ತೆ ಮಧ್ಯದಲ್ಲೆ ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಗ್ರಾಮದ 50 ವರ್ಷದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್, ವಾಚ್ ವೆಂಕಟೇಶ್ ಎಂಬಾತನನ್ನ ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಅಂದಹಾಗೆ ಎಂದಿನಂತೆ ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್ ನಿಂದ ಮನೆಗೆ ತೆರಳುತ್ತಿದ್ದು. ಈ ವೇಳೆ ಪ್ಲಾನ್ ಮಾಡಿ ಕೊಲೆ ಮಾಡಲಾಗಿದೆ.
ಮನೆಯತ್ತ ಸ್ಕೂಟಿ ಮೂಲಕ ಹೊರಟವನಿಗೆ ಅಡ್ಡ ಬಂದು ಲಾಂಗ್ ನಿಂದ ಬಲವಾಗಿ ಬೀಸಲಾಗಿದೆ. ಪರಿಣಾಮ ಎಡಗೈ ತೋಳಿನ ಭಾಗ ಕಟ್ ಆಗಿ ಗಾಡಿ ಸಮೇತ ವೆಂಕಟೇಶ್ ನೆಲಕ್ಕೆ ಬಿದ್ದಿದ್ದಾನೆ.
ಕೂಡಲೇ ಮನಸ್ಸೋ ಇಚ್ಛೆ ಮುಖಕ್ಕೆ ಲಾಂಗ್ ನಿಂದ ಕೊಚ್ಚಲಾಗಿದೆ. ಹೊಟ್ಟೆಯ ಭಾಗಕ್ಕೆ ಬಲವಾಗಿ ಬೀಸಲಾಗಿದೆ. ಪರಿಣಾಮ ವೆಂಕಟೇಶ್ ಸ್ಥಳದಲ್ಲೇ ಬರ್ಬರವಾಗಿ ಹತ್ಯೇಗೀಡಾಗಿದ್ದಾನೆ.
ಇನ್ನೂ 8 ಗಂಟೆ 56 ನಿಮಿಷಕ್ಕೆ ಮಗನಿಗೆ ಕರೆ ಮಾಡಿ ಮನೆಗೆ ಬರುತ್ತಿದ್ದು ಮುದ್ದೆ ಮಾಡುವಂತೆ ತಿಳಿಸಿದ್ದನಂತೆ. ಆದ್ರೆ ಅಷ್ಟರಲ್ಲೇ ದಾರಿ ಮಧ್ಯೆ ಕೊಚ್ಚಿ ಕೊಲೆ ಮಾಡಲಾಗಿದ್ದು, ದಾರಿ ಹೋಕರು ನೋಡಿ ಮಗನಿಗೆ ಪೋನ್ ಮಾಡಿ ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನೂ ಶ್ವಾನದಳ ಸೇರಿದಂತೆ ಸೋಕೋ ತಂಡ ಭೇಟಿ ನೀಡಿ ಹತ್ಯೆಯ ಕ್ರೈ ಸೀನ್ ಪರಿಶೀಲನೆ ನಡೆಸಿದೆ.
ಮೃತನ ಮಗ ಪೊಲೀಸರ ಬಳಿ ತಮ್ಮ ತಂದೆ ತಮ್ಮೂರಿನ ರಸ್ತೆಯಲ್ಲಿರುವ ಬಾರ್ ಬಳಿ ಕೆಲ ಅಕ್ಕ ಪಕ್ಕದ ಗ್ರಾಮದ ಯುವಕರು ಕುಡಿದು ನ್ಯೂಸೆನ್ಸ್ ಮಾಡ್ತಿದ್ದು. ಮೂರು ದಿನಗಳ ಹಿಂದೆ ಬೈದು ಬುದ್ದಿವಾದ ಹೇಳಿದ್ರಂತೆ. ಹಾಗಾಗಿ ಆ ಹುಡುಗರೇ ಮರ್ಡರ್ ಮಾಡಿರಬಹುದಾ ಅಂತ ಅನುಮಾನ ವ್ಯಕ್ತಪಡಿಸಿದ್ದಾನೆ.