Daily story: ಹರಿತಲೇಖನಿ ದಿನಕ್ಕೊಂದು ಕಥೆ: ರಾಮನಿಲ್ಲದಿದ್ದರೆ..?

Daily story: ಒಂದು ಸಲ ಶ್ರೀರಾಮ ಮತ್ತು ಸೀತಾಮಾತೆಯನ್ನು ಭೇಟಿಯಾಗಲು ಹನುಮಂತನು ಬರುತ್ತಾನೆ ಮತ್ತು ಅವರಿಗೆ ಮನಸಾರೆ ನಮಸ್ಕಾರವನ್ನು ಮಾಡುತ್ತಾರೆ. ಆಗ ಸೀತಾದೇವಿಗೆ ಅನಿಸುತ್ತದೆ, ಹನುಮಂತನು ನನ್ನ ಸ್ವಾಮಿಯ ಭಕ್ತನಿದ್ದಾನೆ. ಅವನು ಯಾವಾಗಲೂ ಸೇವೆ ಮಾಡುತ್ತಿರುತ್ತಾನೆ, ಅವನಿಗೆ ಏನಾದರೂ ನೀಡಬೇಕು. ಹೀಗೆ ಅನಿಸಿದ ತಕ್ಷಣ ಸೀತಾದೇವಿಯು ತನ್ನ ಕೊರಳಿನಲ್ಲಿರುವ ಮುತ್ತಿನ ಹಾರವನ್ನು ಹನುಮಂತನಿಗೆ ನೀಡುತ್ತಾಳೆ ಮತ್ತು ನಾನು ಪ್ರಸನ್ನಳಾಗಿದ್ದೇನೆ ಎಂದು ಹೇಳುತ್ತಾಳೆ.

ಮಾಲೆಯನ್ನು ಪಡೆದ ಹನುಮಂತನು ಮುಂದೆ ಹೋಗಿ ಕೂತು ಪ್ರತಿಯೊಂದು ಮಣಿಯನ್ನು ದಾರದಿಂದ ತೆಗೆದು ನೋಡಿ ನೋಡಿ ಒಡೆಯುತ್ತಾನೆ. ಈ ರೀತಿ ಎಲ್ಲಾ ಮಣಿಗಳನ್ನು ಒಡೆದು ಹಾಕುತ್ತಾನೆ. ಇದನ್ನು ನೋಡಿದ ಸೀತಾದೇವಿಯು ಸಿಟ್ಟಿನಿಂದ ಕೇಳಿದಳು, “ನಾನು ಪ್ರೀತಿಯಿಂದ ನೀಡಿದ ಹಾರವನ್ನು ಯಾಕೆ ಹೀಗೆ ಮಾಡಿದೆ?”

ಹನುಮಂತನು ಹೇಳಿದನು, “ಈ ಮಾಲೆಯ ಯಾವ ಮಣಿಯಲ್ಲಿ ನನಗೆ ರಾಮನು ಕಾಣುತ್ತಾನೆಂದು ನೋಡುತ್ತಿದ್ದೆ. ಯಾವ ಮಣಿಯಲ್ಲಿ ರಾಮನು ಕಾಣಲಿಲ್ಲವೊ ಅದನ್ನು ನಾನು ಒಡೆದುಹಾಕಿದೆ”.

ಇದನ್ನು ಕೇಳಿದ ಸೀತಾಮಾತೆಗೆ ತಿಳಿಯಿತು, ಹಾರವನ್ನು ನಾನು ಕೊಡುತ್ತಿದ್ದೇನೆಂಬ ಭಾವದಲ್ಲಿ ಅವಳು ಹಾರವನ್ನು ನೀಡುವಾಗ ರಾಮನ ಸ್ಮರಣೆ ಮಾಡಿರಲಿಲ್ಲ. ಎಲ್ಲವನ್ನೂ ಶ್ರೀರಾಮನೇ ಮಾಡುವುದು.

ಸೀತಾದೇವಿಯು ಹನುಮಂತನ ಕ್ಷಮೆ ಕೇಳುತ್ತಾಳೆ ಮತ್ತು ಶ್ರೀರಾಮನ ಸ್ಮರಣೆ ಮಾಡುತ್ತಾ ಮತ್ತೊಂದು ಹಾರವನ್ನು ನೀಡುತ್ತಾಳೆ. ಅದನ್ನು ತಕ್ಷಣ ಹನುಮಂತನು ತನ್ನ ಕೊರಳಿಗೆ ಹಾಕಿಕೊಳ್ಳುತ್ತಾನೆ.

ಯಾವುದು ದೇವರ ಸ್ಮರಣೆ ಮಾಡಿಕೊಡುತ್ತದೆಯೊ ಅದು ಹನುಮಂತನಿಗೆ ಪ್ರಿಯವಾಗುತ್ತದೆ. ನಾವು ಕೂಡ ಪ್ರತಿಯೊಂದು ಕೃತಿಯನ್ನು ಕುಲದೇವರ ನಾಮಜಪದೊಂದಿಗೆ ಮತ್ತು ದೇವರಿಗೆ ಪ್ರಾರ್ಥನೆಯನ್ನು ಮಾಡಿ ಮಾಡಬೇಕು.

ಕೃಪೆ: ಹಿಂದೂ ಜಾಗೃತಿ. (ಸಾಮಾಜಿಕ ಜಾಲತಾಣ, ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!