ISRO: ಅಂತರಿಕ್ಷದಲ್ಲಿ ಅಲಸಂದೆ ಮೊಳಕೆ..!; ಎಲೆಗಳ ನಿರೀಕ್ಷೆ

ನವದೆಹಲಿ: ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ ಸಸ್ಯಗಳ ಬೆಳವಣಿಗೆ ಹೇಗಿರುತ್ತದೆ ಎಂಬುದನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೈಗೊಂಡ ಪ್ರಯೋಗ ಮೊದಲ ಯತ್ನದಲ್ಲೇ ಯಶಸ್ವಿಯಾಗಿದೆ.

‘ಇಸ್ರೋ’ ಅಂತರಿಕ್ಷಕ್ಕೆ ಕಳುಹಿಸಿಕೊಟ್ಟಿದ್ದ 8 ಅಲಸಂದೆ ಬೀಜಗಳು ಮೊಳಕೆಯೊಡೆದಿವೆ.

‘ಬಾಹ್ಯಾಕಾಶದಲ್ಲಿ ಹೊಸ ಜೀವದ ಉಗಮವಾಗಿದೆ. ಹೊಸ ಬದುಕು ಚಿಗುರಿದೆ’ ಎಂದು ‘ಇಸ್ರೋ’ ತನ್ನ ಅಧಿಕೃತ ‘ಟ್ವಿಟರ್’ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡು ಸಂಭ್ರಮಿಸಿದೆ.

ಬಾಹ್ಯಾಕಾಶಕ್ಕೆ ಕಳುಹಿಸಿ ಕೊಡಲಾಗಿದ್ದ ಅಲಸಂದೆ ಬೀಜಗಳು ಬಾಹ್ಯಾಕಾಶ ಸೇರಿದ 4 ದಿನಗಳಲ್ಲೇ ಮೊಳಕೆ ಬಂದಿವೆ ಎಂದು ಇಸ್ರೋ ಹೇಳಿದೆ.

“ಬಾಹ್ಯಾಕಾಶದಲ್ಲಿ ಡಾಕಿಂಗ್‌ಗಾಗಿ ಜೋಡಿ ಉಪಗ್ರಹಗಳನ್ನು ಹೊತ್ತು ಮಂಗಳವಾರ ಉಡಾವಣೆಗೊಂಡ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನಲ್ಲಿಯೇ ಅಲಸಂದೆ ಬೀಜಗಳು ಸೇರಿದಂತೆ ಅಂತರಿಕ್ಷದಲ್ಲಿ ಸಸ್ಯಗಳ ಬೆಳವಣಿಗೆಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನೂ ಇರಿಸಲಾಗಿತ್ತು.

ಈ ಘಟಕ ಇನ್ನೂ 3-4 ದಿನ ಕಾರ್ಯನಿರ್ವಹಿಸಲಿದೆ. ಬಾಹ್ಯಾಕಾಶದಲ್ಲಿ ಸಸ್ಯ ಬೆಳವಣಿಗೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗುತ್ತದೆ’ ಎಂದು ಇಸ್ರೋ ಹೇಳಿದೆ.

ಡಿ.30ರ ರಾತ್ರಿಯಷ್ಟೇ ಪಿಎಸ್‌ಎಲ್‌ವಿ-ಸಿ60 ರಾಕೆಟ್ ಅವಳಿ ಉಪಗ್ರಹಗಳನ್ನು ಭೂಮಿಯಿಂದ 350 ಕಿಮೀ ಎತ್ತರದ ಆಕಾಶಕ್ಕೆ ಯಶಸ್ವಿಯಾಗಿ ಕೊಂಡೊಯ್ದು ತಲುಪಿಸಿದ ಉಡ್ಡಯನ ಕಾರ್ಯಾಚರಣೆಯ ಭಾಗವಾಗಿಯೇ ಈ ‘ಕ್ರಾಪ್ಸ್’ ಪ್ರಯೋಗ ವನ್ನೂ ನಡೆಸಲಾಗಿದೆ.

8 ಅಲಸಂದೆ ಬೀಜಗಳು, ಅವು ಮೊಳಕೆಯೊಡೆಯಲು ಬೇಕಾದ ಪರಿಕರಗಳು ಎಲ್ಲವನ್ನು ಒಳಗೊಂಡ ‘ಪಿಒಇಎಂ-4’ ಪ್ಲಾಟ್‌ಫಾರ್ಮ್ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನ 4ನೇ ಹಂತದಲ್ಲಿತ್ತು. ಇದಕ್ಕೂ ಮುನ್ನ ಚೀನಾ ದೇಶದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಜಲಚರಗಳನ್ನು ಬೆಳೆಸುವ ಪ್ರಯೋಗ ನಡೆಸಿ ಯಶಸ್ಸು ಕಂಡಿದೆ.

ಜೆಲ್ಲಿ ಫಿಶ್‌ ಗಳನ್ನು ಶೂನ್ಯ ಗುರುತ್ವಾಕರ್ಷಣ ವಲಯದಲ್ಲಿ ಬೆಳೆಸುತ್ತಿರುವ ಚೀನಾ, ಅಂತರಿಕ್ಷದಲ್ಲಿ ಮಾನವನಿಗೆ ಹೊರತಾದ ಜೀವಿಗಳ ಇರುವಿಕೆ ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!