ISRO: ಅಂತರಿಕ್ಷದಲ್ಲಿ ಅಲಸಂದೆ ಮೊಳಕೆ..!; ಎಲೆಗಳ ನಿರೀಕ್ಷೆ

ನವದೆಹಲಿ: ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ ಸಸ್ಯಗಳ ಬೆಳವಣಿಗೆ ಹೇಗಿರುತ್ತದೆ ಎಂಬುದನ್ನು ತಿಳಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೈಗೊಂಡ ಪ್ರಯೋಗ ಮೊದಲ ಯತ್ನದಲ್ಲೇ ಯಶಸ್ವಿಯಾಗಿದೆ.

‘ಇಸ್ರೋ’ ಅಂತರಿಕ್ಷಕ್ಕೆ ಕಳುಹಿಸಿಕೊಟ್ಟಿದ್ದ 8 ಅಲಸಂದೆ ಬೀಜಗಳು ಮೊಳಕೆಯೊಡೆದಿವೆ.

‘ಬಾಹ್ಯಾಕಾಶದಲ್ಲಿ ಹೊಸ ಜೀವದ ಉಗಮವಾಗಿದೆ. ಹೊಸ ಬದುಕು ಚಿಗುರಿದೆ’ ಎಂದು ‘ಇಸ್ರೋ’ ತನ್ನ ಅಧಿಕೃತ ‘ಟ್ವಿಟರ್’ ಖಾತೆಯಲ್ಲಿ ಶನಿವಾರ ಮಾಹಿತಿ ಹಂಚಿಕೊಂಡು ಸಂಭ್ರಮಿಸಿದೆ.

ಬಾಹ್ಯಾಕಾಶಕ್ಕೆ ಕಳುಹಿಸಿ ಕೊಡಲಾಗಿದ್ದ ಅಲಸಂದೆ ಬೀಜಗಳು ಬಾಹ್ಯಾಕಾಶ ಸೇರಿದ 4 ದಿನಗಳಲ್ಲೇ ಮೊಳಕೆ ಬಂದಿವೆ ಎಂದು ಇಸ್ರೋ ಹೇಳಿದೆ.

“ಬಾಹ್ಯಾಕಾಶದಲ್ಲಿ ಡಾಕಿಂಗ್‌ಗಾಗಿ ಜೋಡಿ ಉಪಗ್ರಹಗಳನ್ನು ಹೊತ್ತು ಮಂಗಳವಾರ ಉಡಾವಣೆಗೊಂಡ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನಲ್ಲಿಯೇ ಅಲಸಂದೆ ಬೀಜಗಳು ಸೇರಿದಂತೆ ಅಂತರಿಕ್ಷದಲ್ಲಿ ಸಸ್ಯಗಳ ಬೆಳವಣಿಗೆಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿಗಳನ್ನೂ ಇರಿಸಲಾಗಿತ್ತು.

ಈ ಘಟಕ ಇನ್ನೂ 3-4 ದಿನ ಕಾರ್ಯನಿರ್ವಹಿಸಲಿದೆ. ಬಾಹ್ಯಾಕಾಶದಲ್ಲಿ ಸಸ್ಯ ಬೆಳವಣಿಗೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಾಗುತ್ತದೆ’ ಎಂದು ಇಸ್ರೋ ಹೇಳಿದೆ.

ಡಿ.30ರ ರಾತ್ರಿಯಷ್ಟೇ ಪಿಎಸ್‌ಎಲ್‌ವಿ-ಸಿ60 ರಾಕೆಟ್ ಅವಳಿ ಉಪಗ್ರಹಗಳನ್ನು ಭೂಮಿಯಿಂದ 350 ಕಿಮೀ ಎತ್ತರದ ಆಕಾಶಕ್ಕೆ ಯಶಸ್ವಿಯಾಗಿ ಕೊಂಡೊಯ್ದು ತಲುಪಿಸಿದ ಉಡ್ಡಯನ ಕಾರ್ಯಾಚರಣೆಯ ಭಾಗವಾಗಿಯೇ ಈ ‘ಕ್ರಾಪ್ಸ್’ ಪ್ರಯೋಗ ವನ್ನೂ ನಡೆಸಲಾಗಿದೆ.

8 ಅಲಸಂದೆ ಬೀಜಗಳು, ಅವು ಮೊಳಕೆಯೊಡೆಯಲು ಬೇಕಾದ ಪರಿಕರಗಳು ಎಲ್ಲವನ್ನು ಒಳಗೊಂಡ ‘ಪಿಒಇಎಂ-4’ ಪ್ಲಾಟ್‌ಫಾರ್ಮ್ ಪಿಎಸ್‌ಎಲ್‌ವಿ-ಸಿ60 ರಾಕೆಟ್‌ನ 4ನೇ ಹಂತದಲ್ಲಿತ್ತು. ಇದಕ್ಕೂ ಮುನ್ನ ಚೀನಾ ದೇಶದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಜಲಚರಗಳನ್ನು ಬೆಳೆಸುವ ಪ್ರಯೋಗ ನಡೆಸಿ ಯಶಸ್ಸು ಕಂಡಿದೆ.

ಜೆಲ್ಲಿ ಫಿಶ್‌ ಗಳನ್ನು ಶೂನ್ಯ ಗುರುತ್ವಾಕರ್ಷಣ ವಲಯದಲ್ಲಿ ಬೆಳೆಸುತ್ತಿರುವ ಚೀನಾ, ಅಂತರಿಕ್ಷದಲ್ಲಿ ಮಾನವನಿಗೆ ಹೊರತಾದ ಜೀವಿಗಳ ಇರುವಿಕೆ ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದೆ.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!