ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ Nikhil kumaraswamy

ದೊಡ್ಡಬಳ್ಳಾಪುರ: ಇತ್ತೀಚಿಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡರಾದ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಸಮಯದಲ್ಲಿ ಪೇ ಸಿಎಂ ಎಂಬ ಕ್ಯಾಂಪೇನ್ ಶುರು ಮಾಡಿದ್ರು, ಬಹಳ ಗಂಟಾಘೋಷವಾಗಿ ಇಡೀ ರಾಜ್ಯಕ್ಕೆ ಮನ ಮುಟ್ಟುವ ಕ್ಯಾಂಪೇನ್ ಮಾಡಿದ್ದರು. ಭ್ರಷ್ಟಾಚಾರವನ್ನ ಸಂಪೂರ್ಣವಾಗಿ ಹೋಗಲಾಡಿಸುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಶಪಥ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡ್ತಿದೆ

ಕರ್ನಾಟಕವನ್ನು ಅನೇಕ ನಾಯಕರು, ಪಕ್ಷಗಳು ಆಳ್ವಿಕೆ ಮಾಡಿವೆ.ಆದರೆ ಈ ರೀತಿ ಒಂದೂವರೆ ವರ್ಷದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರಕಾರ ಪ್ರತಿನಿತ್ಯ ಹಗರಣದಲ್ಲಿ ಮುಳುಗಿದೆ‌,ರಾಜ್ಯದಲ್ಲಿ ನೇರವಾಗಿ ಸಿಎಂ ಅವರು ಸಿಲುಕಿರುವುದು ನೋಡಿದ್ದೀರಿ. ಅನೇಕ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ದುರ್ಬಳಕೆ ಮಾಡಿದ್ದಾರೆ‌, ಆ ಹಣವನ್ನ ಪಕ್ಕದ ರಾಜ್ಯಗಳ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ.ಇಂಥ ಕೀಳು ಮಟ್ಟದ ಸರಕಾರವನ್ನು ಇದೇ ಮೊದಲ ಬಾರಿಗೆ ನೋಡಿರುವುದು ಎಂದು ನಿಖಿಲ್ ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆ ಪೆನ್ ಡ್ರೈವ್ ಪ್ರಶ್ನೆ ವಿಚಾರಕ್ಕೆ ಮಾತನಾಡಿದ ಅವರು, ಬೇರೆ ಪೆನ್ ಡ್ರೈವ್ ನ್ನು ಯಾವ ಒಬ್ಬ ಮಹಾನುಭಾವ ಬಿಡುಗಡೆ ಮಾಡಿದ ಎಂದು ಎಲ್ಲರಿಗೂ ಗೊತ್ತಿದೆ‌. ಹೆಣ್ಣು ಮಕ್ಕಳ ಮಾನವನ್ನ ಸಾರ್ವಜನಿಕವಾಗಿ ಕಳೆಯುವಂತ ಪ್ರಯತ್ನ ಆಗಿದೆ.
ಕನಿಷ್ಠ ಪಕ್ಷ ಹೆಣ್ಣು ಮಕ್ಕಳ ಬ್ಲರ್ ಮಾಡಿ ಬಿಡುಗಡೆ ಮಾಡಬೇಕು ಎಂಬ ಪರಿಜ್ಞಾನ ಇಲ್ಲದೇ ಮಾಡಿದ್ದಾರೆ‌. ಮುಂದಿನ ದಿನಗಳಲ್ಲಿ ಅವರಿಗೆ ಜನನೇ ಪಾಠ ಕಲಿಸುತ್ತಾರೆ‌ ಎಂದರು.

ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕೆಂದು HDK ನಿದ್ದೆಗೆಡುತ್ತಿದ್ದಾರೆ

ನಿಖಿಲ್ ಸೋಲಿನ ವಿಚಾರಕ್ಕೆ ಕುಮಾರಸ್ವಾಮಿ ಹತಾಶೆಯಾಗಿದ್ದಾರೆ ಎಂ.ಬಿ ಪಾಟೀಲ್ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಕುಮಾರಸ್ವಾಮಿಯವರು ಕೇಂದ್ರದ ಸಚಿವರಾಗಿ ಇತ್ತೀಚಿಗೆ ಪಾರ್ಲಿಮೆಂಟ್ ಸೆಷನ್ ನಲ್ಲಿ ಬಹಳ ಕ್ರಿಯಾಶೀಲರಾಗಿ ಕೆಲಸ‌ ಮಾಡುತ್ತಿದ್ದಾರೆ.ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬೇಕು, ಉದ್ಯೋಗ, ಕೈಗಾರಿಕೆ ತರಬೇಕು ಎಂದು ನಿದ್ದೆಗೆಡುತ್ತಿದ್ದಾರೆ‌ ನಿಖಿಲ್ ಕುಮಾರಸ್ವಾಮಿ ಸೋಲಿಗಲ್ಲ ನಿದ್ದೆಗೆಡುತ್ತಿರುವುದು ಎಂದು ತಿಳಿಸಿದರು.

ಸಂಘಟನೆಗೆ ಒತ್ತು

ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಮುಖಂಡರ ಸಹಕಾರದಿ‌ದ ದೊಡ್ಡಬಳ್ಳಾಪುರ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಮುಖಂಡರ ಸಹಕಾರದಿಂದ ಪಕ್ಷ ಸಂಘಟನೆ ಮಾಡಲಾಗುವು ಎಂದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!