ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಯಲ್ಲಿದ್ದ ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ (Suspicious Death) ಮೃತಪಟ್ಟಿರುವ ಘಟನೆ ತಾಲೂಕಿನ ಗುಂತಪನಹಳ್ಳಿ ಗ್ರಾಮದ ಬಳಿ ನಡೆದಿದೆ.
ನಗರದ ಬಾಪೂಜಿನಗರದ ನಿವಾಸಿ ಅನುಷಾ ಅನುಮಾನಾಸ್ಪದವಾಗಿ ಮೃತಪಟ್ಟ ಗರ್ಭಿಣಿ. ಈ ಹಿಂದೆ ಪ್ರಿಯಕರ ಪವನ್, ವಿವಾಹಿತ ಪ್ರಿಯತಮೆ ಅನುಷಾಳನ್ನು ಕೊಲ್ಲಲು ಪ್ರಯತ್ನಿಸಿದ್ದನಂತೆ. ಗರ್ಭಿಣಿ ಅನುಷಾಗೆ ಮೊದಲು ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದ. ವಿಷ ಕುಡಿದರೂ ಸಹ ಅನುಷಾ ಬದುಕಿದ್ದಳು. ಆದರೆ, ಇದೀಗ ಅನುಷಾ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅನುಷಾಳನ್ನು ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಎಂಟು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಸಹ ಇದೆ. ಆದರೆ ಗಂಡನಿಗೆ ಪಾರ್ಶವಾಯು ಆದ ನಂತರ ಗಂಡನನ್ನು ತೊರೆದು ತವರು ಮನೆಸೇರಿದ್ದಳು.
ಕೂಲಿ ಮಾಡುತ್ತಿದ್ದ ಆಕೆಗೆ ಗುಂತಪನಹಳ್ಳಿಯ ಪವನ್ ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ತನ್ನನ್ನ ಮದುವೆಯಾಗುವಂತೆ ಅನುಷಾ ಒತ್ತಾಯಿಸುತ್ತಿದ್ದಳು. ಅಲ್ಲದೆ ಪವನ್ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.
ಬೇರೆ ಜಾತಿ, ಎರಡನೇ ಮದುವೆ ಅಂತ ಪವನ್ ಮನೆಯವರು ಇಬ್ಬರಿಗೂ ಬೈದು ಮದುವೆಗೆ ನಿರಾಕರಿಸಿದ್ದರು. 15 ದಿನಗಳ ಹಿಂದೆ ಸಹ ಪವನ್ ಊಟದಲ್ಲಿ ವಿಷ ಬೆರೆಸಿ ಅನುಷಾಳನ್ನು ಕೊಲೆ ಮಾಡಲು ಯತ್ನಿಸಿದ್ದನೆಂದು ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ಆಸ್ಪತ್ರೆಗೆ ದಾಖಲಾಗಿದ್ದ ಆಕೆ ಹೊರಬಂದ ಬಳಿಕೆ ಮತ್ತೆ ಪವನ್ಜತೆಗಿದ್ದಳು. ಆದರೆ ಶನಿವಾರ ರಾತ್ರಿ ಗುಂತಪನಹಳ್ಳಿ ಗ್ರಾಮದ ಬಳಿ ಹೊಂಗೆ ಮರದಡಿ ಇಬ್ಬರೂ ಮದ್ಯಪಾನಮಾಡಿ ಮಲಗಿದ್ದರಂತೆ. ಬೆಳಗ್ಗೆ ಎದ್ದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ ಎಂದು ಪವನ್ಪೊಲೀಸರಿಗೆ ಮಾಹಿತಿನೀಡಿದ್ದಾನೆ.
ಇನ್ನೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪವನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.