ದೇಶದಲ್ಲಿ ಆರು ಜನರಿಗೆ HMPV ವೈರಸ್: ಮತ್ತೆ ಮಾಸ್ಕ್ ಸೇರಿ ಮಾರ್ಗಸೂಚಿ ವಿವರ ಇಲ್ಲಿದೆ

ನವದೆಹಲಿ: ದೇಶದಲ್ಲಿ ಚೀನಾದ ಮತ್ತೊಂದು ವೈರಸ್ (HMPV) ಕಾಟ ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಎರಡು, ಗುಜರಾತ್, ಪ.ಬಂಗಾಳದಲ್ಲಿ ತಲಾ 1, ತಮಿಳುನಾಡಿನಲ್ಲಿ 2 ಪ್ರಕರಣ ಸೇರಿದಂತೆ ದೇಶದಲ್ಲಿ ಒಟ್ಟು 6 ಪ್ರಕರಣಗಳು ದಾಖಲಾಗಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಇಬ್ಬರು ಮಕ್ಕಳಲ್ಲಿ ಸೋಂಕಿರುವುದು ಪತ್ತೆಯಾಗುತ್ತಿ ದ್ದಂತೆ ಸೋಮವಾರ ಆರೋಗ್ಯ ಇಲಾಖೆ ತುರ್ತು ಸಭೆ ನಡೆಸಿ ಯಾವ ರೀತಿಯಲ್ಲಿ ಕ್ರಮ ವಹಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಿದೆ.

ಇದರೊಂದಿಗೆ ಮಾರ್ಗಸೂಚಿ ಬಿಡುಗಡೆಗೊಳಿಸಿರುವ ಆರೋಗ್ಯ ಇಲಾಖೆ, ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಸಲಹೆ ನೀಡಿದೆ. ಮಾಸ್ಕ್ ಧಾರಣೆ ಸದ್ಯಕ್ಕೆ ಕಡ್ಡಾಯಗೊಳಿಸದಿದ್ದರೂ, ಮುಂದಿನ ದಿನಗಳಲ್ಲಿ ವಿಕೋಪಕ್ಕೆ ಹೋದರೆ ಕಡ್ಡಾಯಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೊಸ ವೈರಸ್ ಅಲ್ಲ, ಆತಂಕ ಬೇಡ: ಸಭೆಯ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಹೂಮನ್ ಮೆಟಾನ್ಯುಮೊ ವೈರಸ್ (ಎಚ್ ಎಂಪಿವಿ) ಇಬ್ಬರು ಮಕ್ಕಳಲ್ಲಿ ಪತ್ತೆಯಾ ಗಿದೆ. ಆದರೆ ಇದು ಹೊಸ ವೈರಸ್ ಅಲ್ಲ. ಇದರಿಂದ ಯಾವುದೇ ಪ್ರಾಣಾಪಾಯವಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಚ್‌ಎಂಪಿವಿ ಕುರಿತಾಗಿ ಸದ್ಯ ಕೇಂದ್ರದಿಂದಲೂ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಸೂಚನೆಗಳಿಲ್ಲ. ಆದರೆ ರಾಜ್ಯ ಸರಕಾರ ಈ ವಿಚಾರವಾಗಿ ಕೇಂದ್ರ ಸರಕಾರದೊಂದಿಗೆ ಸಂಪರ್ಕದಲ್ಲಿದ್ದು, ಐಸಿ ಎಂಆರ್ ಸೂಚನೆಗಳನ್ನು ಅನುಸರಿಸಲಾಗುವುದು.

ಇದು ದೇಶದಲ್ಲಿ ಪ್ರಥಮ ಪ್ರಕರಣ ಎಂದು ಹೇಳುವುದು ಸರಿಯಲ್ಲ. 2001ರಲ್ಲಿ ನೆದರ್‌ಲ್ಯಾಂಡ್‌ನಲ್ಲಿ ಮೊದಲಿಗೆ ಪತ್ತೆಯಾದ ಎಚ್‌ಎಂಪಿ ವೈರಸ್ ಭಾರತ ಸೇರಿ ಎಲ್ಲೆಡೆ ಇದೆ. ಇದರಿಂದ ಯಾವುದೇ ಅಪಾಯ ಇಲ್ಲ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿಲ್ಲ.

ಇದು ಮಾರಣಾಂತಿಕ ವೈರಸ್ ಅಲ್ಲ. ಹಾಗಾಗಿ ವೈರಾಣು ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಬದಲಿಗೆ ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಸೇರಿ ಶೀತ ಸಂಬಂಧಿ ಸಮಸ್ಯೆ ಇರುವವರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಸಾಮಾನ್ಯವಾಗಿ ಐಎಲ್‌ಐ ಪ್ರಕರಣಗಳಲ್ಲಿ ಶೇ.1ರಷ್ಟು ಎಚ್ ಎಂಪಿವಿ ಕಂಡು ಬರುತ್ತದೆ. ಇಂಥಹುದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಕ್ಕಳನ್ನು ಹೆಚ್ಚಿನ ಪರೀಕ್ಷೆಗೆ ಒಳಪಡಿಸಿದಾಗ ಎಚ್‌ಎಂಪಿ ವೈರಾಣು ಪತ್ತೆಯಾಗಿದೆ. ಇಬ್ಬರು ಮಕ್ಕಳಲ್ಲಿ ಮೂರು ತಿಂಗಳ ಮಗು ಸಂಪೂರ್ಣ ಗುಣಮುಖವಾಗಿ ಡಿಸೆಂಬರ್‌ನಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.

ಎಂಟು ತಿಂಗಳ ಮಗು ಬಹುತೇಕ ಗುಣ ಹೊಂದಿದ್ದು, ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಲಿದೆ. ಹಾಗಾಗಿ ಹೆಚ್ಚಿನ ಪರೀಕ್ಷೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.

ಮಾರ್ಗಸೂಚಿಯಲ್ಲಿ ವಿವರ

ಏನು ಮಾಡಬೇಕು?

  • ಮಾಸ್ಕ್ ಧರಿಸಿ, ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಅಥವಾ ಟಿಮ್ಯೂ ಪೇಪರ್ ಬಳಕೆ ಮಾಡಿ
  • ಪದೇ ಪದೆ ಕೈಯನ್ನು ಸೋಪ್‌ನಿಂದ ಅಥವಾ ಆಲ್ನೋಹಾಲ್ ಸ್ಯಾನಿಟೈಸರ್‌ನಿಂದ ತೊಳೆಯಿರಿ
  • ನಿಮಗೆ ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದರೆ ಜನನಿಬಿಡ ಪ್ರದೇಶದಿಂದ ದೂರವಿರಿ
  • ನಿಮಗೆ ಹುಷಾರಿಲ್ಲದಿದ್ದರೆ ಮನೆಯಲ್ಲಿ ಇರಿ ಮತ್ತು ಇತರರೊಂದಿಗೆ ಸೀಮಿತ ಸಂಪರ್ಕ ಸಾಧಿಸಿ
  • ಸಾಧ್ಯವಾದಷ್ಟು ನೀರು ಮತ್ತು ಪೋಷಕಾಂಶಯುಕ್ತ ಆಹಾರ ಸೇವಿಸಿ

ಇದನ್ನು ಮಾಡಬೇಡಿ

  • ಒಮ್ಮೆ ಬಳಸಿದ ಕರವಸ್ತ್ರ ಮತ್ತು ಟಿಮ್ಯೂ ಮರುಬಳಕೆ ಬೇಡ
  • ಅನಾರೋಗ್ಯಕ್ಕೆ ಒಳಗಾದ ನಿಮ್ಮ ಹತ್ತಿರದವರ ಟವೆಲ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಬೇಡ
  • ಪದೇ ಪದೆ ಕಣ್ಣು, ಮೂಗು ಮತ್ತು ಬಾಯಿ ಮುಟ್ಟಿಕೊಳ್ಳಬೇಡಿ
  • ಸಾರ್ವಜನಿಕ ಸ್ಥಳದಲ್ಲಿ ಉಗಿಯಬೇಡಿ
  • ವೈದ್ಯರ ಸಂಪರ್ಕಕ್ಕೆ ಒಳಗಾಗದೇ ಸ್ವಯಂ ಚಿಕಿತ್ಸೆ ಬೇಡ (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!