Cmsiddaramaiah ಸಿಎಂ ಸಮ್ಮುಖದಲ್ಲಿ ಆರು ನಕ್ಸಲರು ಶರಣು; ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ.. ಬಿಜೆಪಿ ಶಾಸಕ ಆಕ್ಷೇಪ.!

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆ ಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ (Cmsiddaramaiah) ಮುಂದೆ ಬುಧವಾರ ಶರಣಾಗತರಾದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಜಯಣ್ಣ ಅರೋಲಿ, ಕೆ.ವಸಂತ ಟಿ.ಎನ್ ಹಾಗೂ ಜೀಶ್ ಶರಣಾಗಿದ್ದಾರೆ.

ಶರಣಾಗತರಾದ ನಕ್ಸಲರ ವಿರುದ್ಧ ಇರುವ ಘೋರ ಅಪರಾಧಗಳ ಕಾನೂನು ಪ್ರಕ್ರಿಯೆ ನ್ಯಾಯಾಲಯದಲ್ಲಿ ಮುಂದುವರಿಯುತ್ತವೆ. ರಾಜ್ಯ ಸರಕಾರವು ಸರಿಯಾದ ಕಾರ್ಯ ವಿಧಾನಗಳ ಮೂಲಕ ಶರಣಾದ ನಕ್ಸಲರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಂಪಡೆಯಲು ಪರಿಗಣಿಸಬಹುದು.

Cmsiddaramaiah ಸಿಎಂ ಸಮ್ಮುಖದಲ್ಲಿ ಆರು ನಕ್ಸಲರು ಶರಣು; ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ.. ಬಿಜೆಪಿ ಶಾಸಕ ಆಕ್ಷೇಪ.!

ಶರಣಾದ ನಕ್ಸಲರಿಗೆ ಉಚಿತ ಕಾನೂನು ಸಹಕಾರ ನೀಡಲು ವಕೀಲರನ್ನು ಒದಗಿಸಬಹುದು. ಅಲ್ಲದೆ ತ್ವರಿತ ವಿಚಾರಣೆ ಗಾಗಿ ತ್ವರಿತಗತಿ ನ್ಯಾಯಾಲಯ ರಚನೆ ಮಾಡಲು ಸರಕಾರಕ್ಕೆ ಅವಕಾಶ ಇದೆ.

ಬಿಜೆಪಿ ಶಾಸಕ ಆಕ್ಷೇಪ

ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ.

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ? ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಇಲ್ಲೇನಾಗುತ್ತಿದೆ ?

ನಕ್ಸಲ್ ವಿಕ್ರಮ್ ಗೌಡರನ್ನು ಎನ್ ಕೌಂಟರ್ ಮಾಡಿದ ಪೊಲೀಸರ ದಿಟ್ಟ ಕ್ರಮಕ್ಕೆ ಸಿದ್ದರಾಮಯ್ಯ ಇಂದು ಪ್ರಾಯಶ್ಚಿತ್ತ ಮಾಡಿಕೊಂಡಿದ್ದಾರೆ. ಮತ್ತು ಪೊಲೀಸ್’ರನ್ನ ಅಣಕಿಸುವ ರೀತಿ ಸಿ.ಎಂ ನಡೆದುಕೊಂಡಿದ್ದಾರೆ.

ಇಲ್ಲಿ ಯಾರ ಶರಣಾಗತಿ?ಸರ್ಕಾರದ ಮುಂದೆ ನಕ್ಸಲರಶರಣಾಗತಿಯೋ?ಅಥವಾ ಬುದ್ದಿಜೀವಗಳ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ನಕ್ಸಲರಿಗೆಶರಣಾದರೊ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.

ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.

ಶರಣಾಗಿರುವ ನಕ್ಸಲರು. ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಯಾಕೆ ಬೆಚ್ಚಿ ಬಿದ್ದಿಲ್ಲ?; ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.

ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ.

ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ತಿರುಗೇಟು ನೀಡಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!