K.J.George: ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಹೇಳಿದ್ದಾರೆ.

ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲೆಯ ಜನಪ್ರತಿನಿಧಿಗಳು, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳೊಂದಿಗಿನ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ (ಐಎ) ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಅಗತ್ಯ ವಿದ್ಯುತ್ ಪೂರೈಕೆಗೆ ಕ್ರಮ

ಇದಕ್ಕೂ ಮುನ್ನ ಪರಿಶೀಲನಾ ಸಭೆಯಲ್ಲಿ ಮತನಾಡಿದ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೃಷಿ ಚಟುವಟಿಕೆ ಜತೆಗೆ ಕೈಗಾರಿಕೆಗಳಿಗೂ ಸಮರ್ಪಕ ವಿದ್ಯುತ್ ಪೂರೈಸಬೇಕಾಗಿದ. ಹೀಗಾಗಿ ಸುಗಮ ವಿದ್ಯುತ್ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಫೀಡರ್ ಗಳು, ಟ್ರಾನ್ಸ್ ಫಾರ್ಮರ್ ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಫೀಡರ್ ಮಟ್ಟದ ಸೌರೀಕರಣದ ಮೂಲಕ ರೈತ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ಕುಸುಮ್- ಸಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅನುಷ್ಠಾನಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಈ ಫೀಡರ್ ಮಟ್ಟದ ಸೌರೀಕರಣ ಕಾಮಗಾರಿಯನ್ನು ಎಲ್ಲಾ ಕಡೆ ಏಕಕಾಲದಲ್ಲಿ ಕೈಗೊಂಡು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಎಂದು ಅನುಷ್ಟಾನ ಏಜನ್ಸಿಗಳಿಗೆ ಸಚಿವರು ಸೂಚನೆ ನೀಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.

ಟ್ರಾನ್ಸ್ ಫಾರ್ಮರ್ ಗಳಲ್ಲಿ ಸಮಸ್ಯೆ ಉದ್ಭವವಾದರೆ ತಕ್ಷಣ ಅದನ್ನು ಬದಲಾಯಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 213 ಟ್ರಾನ್ಸ್ ಫಾರ್ಮರ್ ಗಳು ಲಭ್ಯವಿದೆ. ಜತೆಗೆ ವಿದ್ಯುತ್ ಕಂಬಗಳು, ಕಂಡಕ್ಟರ್ ಗಳನ್ನು ಕೂಡ ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.

ನೆಲಮಂಗಲ ನಗರದಲ್ಲಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಅಳವಡಿಸಬೇಕು ಎಂಬ ಶಾಸಕ ಎನ್.ಶ್ರೀನಿವಾಸ್ ಅವರ ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೊಸಕೋಟೆ ತಾಲೂಕಿನಲ್ಲಿ ಕುಸುಮ್-ಸಿ ಯೋಜನೆಯಡಿ ಕೆರೆಗಳ ಅಂಗಳಗಳಲ್ಲಿ ನಡೆಯುತ್ತಿರುವ ಫೀಡರ್ ಸೌರೀಕರಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸೇಕು ಎಂಬ ಶಾಸಕ ಶರತ್ ಬಚ್ಚೇಗೌಡ ಅವರ ಮನವಿಗೆ ಪ್ರತಿಕ್ರಿಯಿಸಿ, ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಮಾಂತರ ಜಿಲ್ಲಾ ಉಸ್ತುವಾರಿಯೂ ಆಗಿರುವ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ಶರತ್ ಬಚ್ಚೇಗೌಡ, ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಬಯಪಾ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿಗಳ ಅನುಷ್ಟಾನ ಸಮಿತಿ ಅಧ್ಯಕ್ಷ ರಾಜಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!