Asha ಕಾರ್ಯಕರ್ತರಿಗೆ 10,000 ರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಆಶಾ (Asha) ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಪೋರ್ಟಲ್ ಸುಧಾರಣೆಗೆ ಸೂಚನೆ

ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಸರ್ಕಾರ ನಿಮ್ಮೊಂದಿಗಿದೆ

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ

ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದರು.

ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ.

ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.

ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ

ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ

ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ,ಡಾ.ಅಂಬೇಡ್ಕರ್ ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ.

ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ.

ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.

ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ನ್ನು ತಾನು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!