Organic; ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ

ಬೆಂ.ಗ್ರಾ.ಜಿಲ್ಲೆ: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ (Organic) ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ.

ಸರ್ಕಾರವು ಕೂಡ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿಯ ಬೆಳೆ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ನಮಗೆ, ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದರು.

1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆಯ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆಯು ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯವೂ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

ರಾಗಿ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮಾಹಿತಿ

ಕೃಷಿ ಆಧಾರಿತ ಬೆಳೆ ರಾಗಿ. ಹೆಚ್ಚಿನ ರೈತರು ರಾಗಿ ಬೆಳೆಯುತ್ತಾರೆ. ಲಾಭದಾಯಕ ಬೆಳೆ ಅಲ್ಲದಿದ್ದರೂ ಅದಕ್ಕೆ ಬೆಂಬಲ ಬೆಲೆ ಹೆಚ್ಚಿಸಬೇಕು ಎಂಬ ಉದ್ದೇಶವಿತ್ತು. ಹೀಗಾಗಿ ರಾಗಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರದ ಮಂತ್ರಿಗಳಾದ ಪಿಯುಶ್ ಗೋಯಲ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ರಾಗಿ ಬೆಳೆ ಬೆಳೆಯಲು ಆಗುವಂತಹ ಕರ್ಚು ವೆಚ್ಚ, ಲಾಭ ನಷ್ಟದ ಬಗ್ಗೆ ತಿಳಿಸಲಾಯಿತು. ಇದಕ್ಕೆ ಕೇಂದ್ರ ಮಂತ್ರಿಗಳು ಸ್ಪಂದಿಸಿ ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಪಡಿಸಲು ಸಹಕಾರಿಯಾಯಿತು ಎಂದು ಸಚಿವರು ಹೇಳಿದರು.

ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಮಾತನಾಡಿ ಸರ್ಕಾರ ಹಾಗೂ ಕೃಷಿ ಇಲಾಖೆ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿಯನ್ನು ಮೂಡಿಸುತ್ತಿದೆ. ಭೂಮಿಯ ಆರೋಗ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯ. ಆದರಿಂದ ರಾಸಾಯನಿಕ ರಸಗೊಬ್ಬರ ಬಳಕೆ ನಿಲ್ಲಿಸಿ, ಸಾವಯವ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಸಾವಯವ ಬೆಳೆ ಬೆಳೆಯುವುದು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.

ಕೃಷಿ, ತೋಟಗಾರಿಕೆ, ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಆತ್ಮಶ್ರೇಷ್ಠ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾಲೂಕು ಪಂಚಾಯತ್ ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!