Organic; ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ

ಬೆಂ.ಗ್ರಾ.ಜಿಲ್ಲೆ: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ (Organic) ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ.

ಸರ್ಕಾರವು ಕೂಡ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿಯ ಬೆಳೆ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ನಮಗೆ, ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದರು.

1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆಯ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆಯು ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯವೂ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

ರಾಗಿ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮಾಹಿತಿ

ಕೃಷಿ ಆಧಾರಿತ ಬೆಳೆ ರಾಗಿ. ಹೆಚ್ಚಿನ ರೈತರು ರಾಗಿ ಬೆಳೆಯುತ್ತಾರೆ. ಲಾಭದಾಯಕ ಬೆಳೆ ಅಲ್ಲದಿದ್ದರೂ ಅದಕ್ಕೆ ಬೆಂಬಲ ಬೆಲೆ ಹೆಚ್ಚಿಸಬೇಕು ಎಂಬ ಉದ್ದೇಶವಿತ್ತು. ಹೀಗಾಗಿ ರಾಗಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರದ ಮಂತ್ರಿಗಳಾದ ಪಿಯುಶ್ ಗೋಯಲ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ರಾಗಿ ಬೆಳೆ ಬೆಳೆಯಲು ಆಗುವಂತಹ ಕರ್ಚು ವೆಚ್ಚ, ಲಾಭ ನಷ್ಟದ ಬಗ್ಗೆ ತಿಳಿಸಲಾಯಿತು. ಇದಕ್ಕೆ ಕೇಂದ್ರ ಮಂತ್ರಿಗಳು ಸ್ಪಂದಿಸಿ ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಪಡಿಸಲು ಸಹಕಾರಿಯಾಯಿತು ಎಂದು ಸಚಿವರು ಹೇಳಿದರು.

ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಮಾತನಾಡಿ ಸರ್ಕಾರ ಹಾಗೂ ಕೃಷಿ ಇಲಾಖೆ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿಯನ್ನು ಮೂಡಿಸುತ್ತಿದೆ. ಭೂಮಿಯ ಆರೋಗ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯ. ಆದರಿಂದ ರಾಸಾಯನಿಕ ರಸಗೊಬ್ಬರ ಬಳಕೆ ನಿಲ್ಲಿಸಿ, ಸಾವಯವ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಸಾವಯವ ಬೆಳೆ ಬೆಳೆಯುವುದು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.

ಕೃಷಿ, ತೋಟಗಾರಿಕೆ, ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಆತ್ಮಶ್ರೇಷ್ಠ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾಲೂಕು ಪಂಚಾಯತ್ ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]