Organic; ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ

ಬೆಂ.ಗ್ರಾ.ಜಿಲ್ಲೆ: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ (Organic) ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ.

ಸರ್ಕಾರವು ಕೂಡ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿಯ ಬೆಳೆ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ನಮಗೆ, ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದರು.

1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆಯ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆಯು ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯವೂ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

ರಾಗಿ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರಕ್ಕೆ ಮಾಹಿತಿ

ಕೃಷಿ ಆಧಾರಿತ ಬೆಳೆ ರಾಗಿ. ಹೆಚ್ಚಿನ ರೈತರು ರಾಗಿ ಬೆಳೆಯುತ್ತಾರೆ. ಲಾಭದಾಯಕ ಬೆಳೆ ಅಲ್ಲದಿದ್ದರೂ ಅದಕ್ಕೆ ಬೆಂಬಲ ಬೆಲೆ ಹೆಚ್ಚಿಸಬೇಕು ಎಂಬ ಉದ್ದೇಶವಿತ್ತು. ಹೀಗಾಗಿ ರಾಗಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಕೇಂದ್ರದ ಮಂತ್ರಿಗಳಾದ ಪಿಯುಶ್ ಗೋಯಲ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ರಾಗಿ ಬೆಳೆ ಬೆಳೆಯಲು ಆಗುವಂತಹ ಕರ್ಚು ವೆಚ್ಚ, ಲಾಭ ನಷ್ಟದ ಬಗ್ಗೆ ತಿಳಿಸಲಾಯಿತು. ಇದಕ್ಕೆ ಕೇಂದ್ರ ಮಂತ್ರಿಗಳು ಸ್ಪಂದಿಸಿ ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಪಡಿಸಲು ಸಹಕಾರಿಯಾಯಿತು ಎಂದು ಸಚಿವರು ಹೇಳಿದರು.

ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಮಾತನಾಡಿ ಸರ್ಕಾರ ಹಾಗೂ ಕೃಷಿ ಇಲಾಖೆ ಸಾವಯವ ಪದ್ದತಿಯಲ್ಲಿ ಬೆಳೆ ಬೆಳೆಯಲು ಸಾಕಷ್ಟು ಜಾಗೃತಿಯನ್ನು ಮೂಡಿಸುತ್ತಿದೆ. ಭೂಮಿಯ ಆರೋಗ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯ. ಆದರಿಂದ ರಾಸಾಯನಿಕ ರಸಗೊಬ್ಬರ ಬಳಕೆ ನಿಲ್ಲಿಸಿ, ಸಾವಯವ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಸಾವಯವ ಬೆಳೆ ಬೆಳೆಯುವುದು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.

ಕೃಷಿ, ತೋಟಗಾರಿಕೆ, ರೇಷ್ಮೆ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಆತ್ಮಶ್ರೇಷ್ಠ ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Organic; ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ

ಮೇಳದಲ್ಲಿ ರೈತರಿಗೆ ಅವಶ್ಯವಿರುವ ಬೇಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕೃಷಿ ಇಲಾಖೆ ವತಿಯಿಂದ ನೀಡಲಾಯಿತು, ವಿವಿಧ ತಳಿಯ ಕೃಷಿ ಉತ್ಪನ್ನಗಳು, ಪರಿಕರಗಳು, ಯಂತ್ರೋಪಕರಣಗಳ ವಸ್ತು ಪ್ರದರ್ಶನ ಏರ್ಪಡಿಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಡಾ. ಕಲಾವತಿ, ಉಪ ನಿರ್ದೇಶಕಿ ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾಲೂಕು ಪಂಚಾಯತ್ ಇಒ ಶ್ರೀನಾಥ್ ಗೌಡ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್, ಜನಪ್ರತಿನಿಧಿಗಳು, ಮುಖಂಡರು ಸೇರಿದಂತೆ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]