los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಲಾಸ್‌ಎಂಜಲೀಸ್‌ ?(los angeles fire): ಅಮೆರಿಕ ಈವರೆಗೂ ಕಂಡುಕೇಳರಿಯದಂತಹ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಲಾಸ್‌ ಏಂಜಲೀಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾ ಭಾಗದಲ್ಲಿ ಕಳೆದ 4 ದಿನಗಳಿಂದ ಹಬ್ಬುತ್ತಲೇ ಇರುವ ಕಾಡ್ಡಿಚ್ಚು, ಈವರೆಗೆ 11 ಜೀವಗಳನ್ನು ಬಲಿತೆಗೆದುಕೊಂಡಿದೆ.

ಲಾಸ್‌ಎಂಜಲೀಸ್ ರಾಜ್ಯವೊಂದರಲ್ಲಿ 12 ಸಾವಿರಕ್ಕೂ ಅಧಿಕ ಕಟ್ಟಡಗಳು ಭಸ್ಮವಾಗಿವೆ. ಹಾನಿ ಪ್ರಮಾಣ 13 ಲಕ್ಷ ಕೋಟಿ ರು. ತಲುಪಿದೆ ಎಂದ ಅಂದಾಜಿಸಲಾಗಿದೆ.

ಸತತ ಬೆಂಕಿಯಲ್ಲಿ ಬೇಯುತ್ತಿರುವ ಲಾಸ್‌ ಏಂಜಲೀಸ್ ರಾಜ್ಯದಲ್ಲಿ ಗುರುವಾರ ಸಂಜೆ 7ರ ವೇಳೆಗೆಲ್ಲಾ ಒಟ್ಟಾರೆ 38 ಸಾವಿರ ಎಕರೆಗಳಿಗೂ ಅಧಿಕ ವಿಸ್ತಾರದ ಪ್ರದೇಶ ಕಾಡಿಚ್ಚಿನ ಆರ್ಭಟಕ್ಕೆ ಸಿಲುಕಿ ಅಕ್ಷರಶಃ ಭಸ್ಮವಾಗಿದೆ.

ಲಾಸ್ ಏಂಜಲೀಸ್ ಭಾಗದಲ್ಲಿಯೇ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ದೃಢಪಟ್ಟಿದೆ. ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಐವರು, ವಿಕ್ಟರ್ ಷಾ ಈಟನ್ ಫೈರ್‌ನಲ್ಲಿ ಆರು ಮಂದಿ ದಹಿಸಿಹೋಗಿದ್ದಾರೆ. ಆದರೆ, ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಮಡಿದವರಲ್ಲಿ ನಾಲ್ವರ ಗುರುತು ಪತ್ತೆಯಾಗಿದ್ದು, ಆನೆಟ್ ರೋಸಿಲ್ಲಿ (86), ರಾಗ್ನಿ ನಿಕರ್ಸನ್(82), ವಿಕ್ಟರ್ ಶಾ(66), ವಿಶೇಷಚೇತನ ವ್ಯಕ್ತಿ ಆಂಥೋಣಿ ಮಿಷೆಲ್ (67) ಮತ್ತು ಅವರ ಪುತ್ರ ಜಸ್ಟಿನ್ ಎಂದು ಗುರುತಿಸಲಾಗಿದೆ.

ಉಳಿದವರ ಮೃತದೇಹಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಿದೆ ಎಂದು ಲಾಸ್ ಎಂಜಲೀಸ್ ಕೌಂಟಿಯ ಮೆಡಿಕಲ್ ಎಕ್ಸಾಮಿನ‌ರ್ ಕಚೇರಿ ಶನಿವಾರ ತಿಳಿಸಿದೆ.

ಕಾಡಿಚ್ಚಿಗೆ ಬಲಿಯಾದವರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕಾಡಿಚ್ಚು ಹಾನಿ ಮಾಡಿ ಮುಂದಕ್ಕೆ ಹೋಗಿರುವ ಪ್ರದೇಶಗಳಲ್ಲಿ ಶ್ವಾನಪಡೆಯ ನೆರವು ಪಡೆದು ಶೋಧ ಮತ್ತು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಹರಡುತ್ತಲೇ ಇರುವ ಬೆಂಕಿ

ಒಂದೆಡೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದರೆ, ಇನ್ನೊಂದೆಡೆ, ಕಾಡ್ತಿಚ್ಚು ವಿಸ್ತಾರಗೊಳ್ಳುತ್ತಲೇ ಸಾಗಿದೆ. ಶುಕ್ರವಾರ ಸಂಜೆಯ ವೇಳೆಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಹೊಸದಾಗಿ ವೆಸ್ಟ್ ಹಿಲ್ಸ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಲಾಸ್ ಏಂಜಲೀಸ್ ನಗರದಿಂದ 40 ಕಿ.ಮೀ. ದೂರದಲ್ಲಿ ಕಾಡಿಚ್ಚು ಹರಡುತ್ತಿದೆ. ಕಳೆದೆರಡು ದಶಕಗಳಿಂದ ಮಳೆಯಿ ಲ್ಲದೆ ಗಿಡಮರಗಳೆಲ್ಲಾ ಒಣಗಿದ್ದರಿಂದ ಬೆಂಕಿ ಹೊತ್ತಿಕೊಂಡು ಗಾಳಿಯಿಂದಾಗಿ ಹರಡುತ್ತಿದೆ ಎನ್ನಲಾಗಿದೆಯಾದರೂ, ಕಾಡಿಚ್ಚು ಸೃಷ್ಟಿಗೆ ಮೂಲ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಲಿವುಡ್‌ಗೆ ಬೆಂಕಿ

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು. ಆದರೆ ಬಿರುಗಾಳಿ ವೇಗವಾಗಿ ಬೀಸತೊಡಗಿದ ಕಾರಣ ಮತ್ತೆ ಬೆಂಕಿ ಹರಡಲಾರಂಭಿಸಿತು.

ವೃದ್ದೆ ರೋಸಿಲ್ಲಿ ಅವರಿಗೆ ಕಾಡ್ಡಿಚ್ಚು ಹರುಡುತ್ತಿರುವ ಬಗ್ಗೆ ಎಚ್ಚರಿಸಿದೆವು. ತಕ್ಷಣವೇ ಮನೆ ಖಾಲಿ ಮಾಡಿ ನಮ್ಮೊಡನೆ ಸುರಕ್ಷಿತ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದೆವು. ಆದರೆ, ಆಕೆ ಸಾಕು ಪ್ರಾಣಿಗಳ ರಕ್ಷಣೆ ಮಾಡಬೇಕು ಎಂದು ಹೇಳಿ ನಮ್ಮೊಡನೆ ಬರಲು ನಿರಾಕರಿಸಿದರು. ಆಕೆ, 1 ನಾಯಿ, 1 ಆಮೆ, ಹಳದಿ ಬಣ್ಣದ ಪುಟ್ಟ ಪಕ್ಷಿಗಳು, 2 ಗಿಳಿಗಳನ್ನು ಸಾಕಿದ್ದರು ಎಂದು ನೆರೆಮನೆಯವರು ‘ಸಿಎನ್‌ಎನ್’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವೃದ್ದೆ ರೋಸಿಲ್ಲಿ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದ್ದರೆ, ಎಕ್ಟರ್ ಶಾ ಕಳೇಬರ ರಸ್ತೆಮೇಲೆ ಬಹುತೇಕ ದಹಿಸಿಹೋದ ಸ್ಥಿತಿಯಲ್ಲಿ ರಕ್ಷಣಾ ಕಾರ್ಯಕರ್ತರ ಕಣ್ಣಿಗೆ ಬಿದ್ದಿದೆ.

ದುರುಳರಿಂದ ಲೂಟಿ

ಕಾಡಿಚ್ಚಿಗೆ ಸಿಲುಕಿದವರು ಜೀವ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಮತ್ತೊಂದಡೆ ಕಳ್ಳರು, ಲೂಟಿಕೋರರ ಹಾವಳಿ ಶುರುವಾಗಿದೆ. ಕಾಡಿಚ್ಚಿನ ಕಾರಣ ಸ್ಥಳಾಂತರಗೊಂಡವರ ಸಾಂಟಾ ಮೋನಿಕಾ ನಗರದಲ್ಲಿನ ಮನೆಗಳಿಗೆ ನುಗ್ಗುತ್ತಿರುವ ಲೂಟಿಕೋರರು ಕೈಗೆ ಸಿಕ್ಕಿದ್ದನ್ನೆಲ್ಲಾ ಬಾಚಿಕೊಂಡು ಹೋಗುತ್ತಿದ್ದಾರೆ.

ಈ ಬಗ್ಗೆ ಮನೆ ಮಾಲೀಕರು ದೂರಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಈವರೆಗೆ ಲೂಟಿಯಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ಸಾಂಟಾ ಮೋನಿಕಾ ನಗರದಲ್ಲಿ ಕರ್ಮ್ಯೂ ಘೋಷಿಸಲಾಗಿದೆ. ಜನರ ಆಸ್ತಿ ರಕ್ಷಣೆಗೆ ನ್ಯಾಷನಲ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]