los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಲಾಸ್‌ಎಂಜಲೀಸ್‌ ?(los angeles fire): ಅಮೆರಿಕ ಈವರೆಗೂ ಕಂಡುಕೇಳರಿಯದಂತಹ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಲಾಸ್‌ ಏಂಜಲೀಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾ ಭಾಗದಲ್ಲಿ ಕಳೆದ 4 ದಿನಗಳಿಂದ ಹಬ್ಬುತ್ತಲೇ ಇರುವ ಕಾಡ್ಡಿಚ್ಚು, ಈವರೆಗೆ 11 ಜೀವಗಳನ್ನು ಬಲಿತೆಗೆದುಕೊಂಡಿದೆ.

ಲಾಸ್‌ಎಂಜಲೀಸ್ ರಾಜ್ಯವೊಂದರಲ್ಲಿ 12 ಸಾವಿರಕ್ಕೂ ಅಧಿಕ ಕಟ್ಟಡಗಳು ಭಸ್ಮವಾಗಿವೆ. ಹಾನಿ ಪ್ರಮಾಣ 13 ಲಕ್ಷ ಕೋಟಿ ರು. ತಲುಪಿದೆ ಎಂದ ಅಂದಾಜಿಸಲಾಗಿದೆ.

ಸತತ ಬೆಂಕಿಯಲ್ಲಿ ಬೇಯುತ್ತಿರುವ ಲಾಸ್‌ ಏಂಜಲೀಸ್ ರಾಜ್ಯದಲ್ಲಿ ಗುರುವಾರ ಸಂಜೆ 7ರ ವೇಳೆಗೆಲ್ಲಾ ಒಟ್ಟಾರೆ 38 ಸಾವಿರ ಎಕರೆಗಳಿಗೂ ಅಧಿಕ ವಿಸ್ತಾರದ ಪ್ರದೇಶ ಕಾಡಿಚ್ಚಿನ ಆರ್ಭಟಕ್ಕೆ ಸಿಲುಕಿ ಅಕ್ಷರಶಃ ಭಸ್ಮವಾಗಿದೆ.

ಲಾಸ್ ಏಂಜಲೀಸ್ ಭಾಗದಲ್ಲಿಯೇ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ದೃಢಪಟ್ಟಿದೆ. ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಐವರು, ವಿಕ್ಟರ್ ಷಾ ಈಟನ್ ಫೈರ್‌ನಲ್ಲಿ ಆರು ಮಂದಿ ದಹಿಸಿಹೋಗಿದ್ದಾರೆ. ಆದರೆ, ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಮಡಿದವರಲ್ಲಿ ನಾಲ್ವರ ಗುರುತು ಪತ್ತೆಯಾಗಿದ್ದು, ಆನೆಟ್ ರೋಸಿಲ್ಲಿ (86), ರಾಗ್ನಿ ನಿಕರ್ಸನ್(82), ವಿಕ್ಟರ್ ಶಾ(66), ವಿಶೇಷಚೇತನ ವ್ಯಕ್ತಿ ಆಂಥೋಣಿ ಮಿಷೆಲ್ (67) ಮತ್ತು ಅವರ ಪುತ್ರ ಜಸ್ಟಿನ್ ಎಂದು ಗುರುತಿಸಲಾಗಿದೆ.

ಉಳಿದವರ ಮೃತದೇಹಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಿದೆ ಎಂದು ಲಾಸ್ ಎಂಜಲೀಸ್ ಕೌಂಟಿಯ ಮೆಡಿಕಲ್ ಎಕ್ಸಾಮಿನ‌ರ್ ಕಚೇರಿ ಶನಿವಾರ ತಿಳಿಸಿದೆ.

ಕಾಡಿಚ್ಚಿಗೆ ಬಲಿಯಾದವರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕಾಡಿಚ್ಚು ಹಾನಿ ಮಾಡಿ ಮುಂದಕ್ಕೆ ಹೋಗಿರುವ ಪ್ರದೇಶಗಳಲ್ಲಿ ಶ್ವಾನಪಡೆಯ ನೆರವು ಪಡೆದು ಶೋಧ ಮತ್ತು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಹರಡುತ್ತಲೇ ಇರುವ ಬೆಂಕಿ

ಒಂದೆಡೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದರೆ, ಇನ್ನೊಂದೆಡೆ, ಕಾಡ್ತಿಚ್ಚು ವಿಸ್ತಾರಗೊಳ್ಳುತ್ತಲೇ ಸಾಗಿದೆ. ಶುಕ್ರವಾರ ಸಂಜೆಯ ವೇಳೆಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಹೊಸದಾಗಿ ವೆಸ್ಟ್ ಹಿಲ್ಸ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಲಾಸ್ ಏಂಜಲೀಸ್ ನಗರದಿಂದ 40 ಕಿ.ಮೀ. ದೂರದಲ್ಲಿ ಕಾಡಿಚ್ಚು ಹರಡುತ್ತಿದೆ. ಕಳೆದೆರಡು ದಶಕಗಳಿಂದ ಮಳೆಯಿ ಲ್ಲದೆ ಗಿಡಮರಗಳೆಲ್ಲಾ ಒಣಗಿದ್ದರಿಂದ ಬೆಂಕಿ ಹೊತ್ತಿಕೊಂಡು ಗಾಳಿಯಿಂದಾಗಿ ಹರಡುತ್ತಿದೆ ಎನ್ನಲಾಗಿದೆಯಾದರೂ, ಕಾಡಿಚ್ಚು ಸೃಷ್ಟಿಗೆ ಮೂಲ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಲಿವುಡ್‌ಗೆ ಬೆಂಕಿ

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು. ಆದರೆ ಬಿರುಗಾಳಿ ವೇಗವಾಗಿ ಬೀಸತೊಡಗಿದ ಕಾರಣ ಮತ್ತೆ ಬೆಂಕಿ ಹರಡಲಾರಂಭಿಸಿತು.

ವೃದ್ದೆ ರೋಸಿಲ್ಲಿ ಅವರಿಗೆ ಕಾಡ್ಡಿಚ್ಚು ಹರುಡುತ್ತಿರುವ ಬಗ್ಗೆ ಎಚ್ಚರಿಸಿದೆವು. ತಕ್ಷಣವೇ ಮನೆ ಖಾಲಿ ಮಾಡಿ ನಮ್ಮೊಡನೆ ಸುರಕ್ಷಿತ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದೆವು. ಆದರೆ, ಆಕೆ ಸಾಕು ಪ್ರಾಣಿಗಳ ರಕ್ಷಣೆ ಮಾಡಬೇಕು ಎಂದು ಹೇಳಿ ನಮ್ಮೊಡನೆ ಬರಲು ನಿರಾಕರಿಸಿದರು. ಆಕೆ, 1 ನಾಯಿ, 1 ಆಮೆ, ಹಳದಿ ಬಣ್ಣದ ಪುಟ್ಟ ಪಕ್ಷಿಗಳು, 2 ಗಿಳಿಗಳನ್ನು ಸಾಕಿದ್ದರು ಎಂದು ನೆರೆಮನೆಯವರು ‘ಸಿಎನ್‌ಎನ್’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವೃದ್ದೆ ರೋಸಿಲ್ಲಿ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದ್ದರೆ, ಎಕ್ಟರ್ ಶಾ ಕಳೇಬರ ರಸ್ತೆಮೇಲೆ ಬಹುತೇಕ ದಹಿಸಿಹೋದ ಸ್ಥಿತಿಯಲ್ಲಿ ರಕ್ಷಣಾ ಕಾರ್ಯಕರ್ತರ ಕಣ್ಣಿಗೆ ಬಿದ್ದಿದೆ.

ದುರುಳರಿಂದ ಲೂಟಿ

ಕಾಡಿಚ್ಚಿಗೆ ಸಿಲುಕಿದವರು ಜೀವ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಮತ್ತೊಂದಡೆ ಕಳ್ಳರು, ಲೂಟಿಕೋರರ ಹಾವಳಿ ಶುರುವಾಗಿದೆ. ಕಾಡಿಚ್ಚಿನ ಕಾರಣ ಸ್ಥಳಾಂತರಗೊಂಡವರ ಸಾಂಟಾ ಮೋನಿಕಾ ನಗರದಲ್ಲಿನ ಮನೆಗಳಿಗೆ ನುಗ್ಗುತ್ತಿರುವ ಲೂಟಿಕೋರರು ಕೈಗೆ ಸಿಕ್ಕಿದ್ದನ್ನೆಲ್ಲಾ ಬಾಚಿಕೊಂಡು ಹೋಗುತ್ತಿದ್ದಾರೆ.

ಈ ಬಗ್ಗೆ ಮನೆ ಮಾಲೀಕರು ದೂರಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಈವರೆಗೆ ಲೂಟಿಯಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ಸಾಂಟಾ ಮೋನಿಕಾ ನಗರದಲ್ಲಿ ಕರ್ಮ್ಯೂ ಘೋಷಿಸಲಾಗಿದೆ. ಜನರ ಆಸ್ತಿ ರಕ್ಷಣೆಗೆ ನ್ಯಾಷನಲ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!