los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಲಾಸ್‌ಎಂಜಲೀಸ್‌ ?(los angeles fire): ಅಮೆರಿಕ ಈವರೆಗೂ ಕಂಡುಕೇಳರಿಯದಂತಹ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಲಾಸ್‌ ಏಂಜಲೀಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾ ಭಾಗದಲ್ಲಿ ಕಳೆದ 4 ದಿನಗಳಿಂದ ಹಬ್ಬುತ್ತಲೇ ಇರುವ ಕಾಡ್ಡಿಚ್ಚು, ಈವರೆಗೆ 11 ಜೀವಗಳನ್ನು ಬಲಿತೆಗೆದುಕೊಂಡಿದೆ.

ಲಾಸ್‌ಎಂಜಲೀಸ್ ರಾಜ್ಯವೊಂದರಲ್ಲಿ 12 ಸಾವಿರಕ್ಕೂ ಅಧಿಕ ಕಟ್ಟಡಗಳು ಭಸ್ಮವಾಗಿವೆ. ಹಾನಿ ಪ್ರಮಾಣ 13 ಲಕ್ಷ ಕೋಟಿ ರು. ತಲುಪಿದೆ ಎಂದ ಅಂದಾಜಿಸಲಾಗಿದೆ.

ಸತತ ಬೆಂಕಿಯಲ್ಲಿ ಬೇಯುತ್ತಿರುವ ಲಾಸ್‌ ಏಂಜಲೀಸ್ ರಾಜ್ಯದಲ್ಲಿ ಗುರುವಾರ ಸಂಜೆ 7ರ ವೇಳೆಗೆಲ್ಲಾ ಒಟ್ಟಾರೆ 38 ಸಾವಿರ ಎಕರೆಗಳಿಗೂ ಅಧಿಕ ವಿಸ್ತಾರದ ಪ್ರದೇಶ ಕಾಡಿಚ್ಚಿನ ಆರ್ಭಟಕ್ಕೆ ಸಿಲುಕಿ ಅಕ್ಷರಶಃ ಭಸ್ಮವಾಗಿದೆ.

ಲಾಸ್ ಏಂಜಲೀಸ್ ಭಾಗದಲ್ಲಿಯೇ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ದೃಢಪಟ್ಟಿದೆ. ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಐವರು, ವಿಕ್ಟರ್ ಷಾ ಈಟನ್ ಫೈರ್‌ನಲ್ಲಿ ಆರು ಮಂದಿ ದಹಿಸಿಹೋಗಿದ್ದಾರೆ. ಆದರೆ, ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಮಡಿದವರಲ್ಲಿ ನಾಲ್ವರ ಗುರುತು ಪತ್ತೆಯಾಗಿದ್ದು, ಆನೆಟ್ ರೋಸಿಲ್ಲಿ (86), ರಾಗ್ನಿ ನಿಕರ್ಸನ್(82), ವಿಕ್ಟರ್ ಶಾ(66), ವಿಶೇಷಚೇತನ ವ್ಯಕ್ತಿ ಆಂಥೋಣಿ ಮಿಷೆಲ್ (67) ಮತ್ತು ಅವರ ಪುತ್ರ ಜಸ್ಟಿನ್ ಎಂದು ಗುರುತಿಸಲಾಗಿದೆ.

ಉಳಿದವರ ಮೃತದೇಹಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಿದೆ ಎಂದು ಲಾಸ್ ಎಂಜಲೀಸ್ ಕೌಂಟಿಯ ಮೆಡಿಕಲ್ ಎಕ್ಸಾಮಿನ‌ರ್ ಕಚೇರಿ ಶನಿವಾರ ತಿಳಿಸಿದೆ.

ಕಾಡಿಚ್ಚಿಗೆ ಬಲಿಯಾದವರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕಾಡಿಚ್ಚು ಹಾನಿ ಮಾಡಿ ಮುಂದಕ್ಕೆ ಹೋಗಿರುವ ಪ್ರದೇಶಗಳಲ್ಲಿ ಶ್ವಾನಪಡೆಯ ನೆರವು ಪಡೆದು ಶೋಧ ಮತ್ತು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಹರಡುತ್ತಲೇ ಇರುವ ಬೆಂಕಿ

ಒಂದೆಡೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದರೆ, ಇನ್ನೊಂದೆಡೆ, ಕಾಡ್ತಿಚ್ಚು ವಿಸ್ತಾರಗೊಳ್ಳುತ್ತಲೇ ಸಾಗಿದೆ. ಶುಕ್ರವಾರ ಸಂಜೆಯ ವೇಳೆಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಹೊಸದಾಗಿ ವೆಸ್ಟ್ ಹಿಲ್ಸ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಲಾಸ್ ಏಂಜಲೀಸ್ ನಗರದಿಂದ 40 ಕಿ.ಮೀ. ದೂರದಲ್ಲಿ ಕಾಡಿಚ್ಚು ಹರಡುತ್ತಿದೆ. ಕಳೆದೆರಡು ದಶಕಗಳಿಂದ ಮಳೆಯಿ ಲ್ಲದೆ ಗಿಡಮರಗಳೆಲ್ಲಾ ಒಣಗಿದ್ದರಿಂದ ಬೆಂಕಿ ಹೊತ್ತಿಕೊಂಡು ಗಾಳಿಯಿಂದಾಗಿ ಹರಡುತ್ತಿದೆ ಎನ್ನಲಾಗಿದೆಯಾದರೂ, ಕಾಡಿಚ್ಚು ಸೃಷ್ಟಿಗೆ ಮೂಲ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಲಿವುಡ್‌ಗೆ ಬೆಂಕಿ

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು. ಆದರೆ ಬಿರುಗಾಳಿ ವೇಗವಾಗಿ ಬೀಸತೊಡಗಿದ ಕಾರಣ ಮತ್ತೆ ಬೆಂಕಿ ಹರಡಲಾರಂಭಿಸಿತು.

ವೃದ್ದೆ ರೋಸಿಲ್ಲಿ ಅವರಿಗೆ ಕಾಡ್ಡಿಚ್ಚು ಹರುಡುತ್ತಿರುವ ಬಗ್ಗೆ ಎಚ್ಚರಿಸಿದೆವು. ತಕ್ಷಣವೇ ಮನೆ ಖಾಲಿ ಮಾಡಿ ನಮ್ಮೊಡನೆ ಸುರಕ್ಷಿತ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದೆವು. ಆದರೆ, ಆಕೆ ಸಾಕು ಪ್ರಾಣಿಗಳ ರಕ್ಷಣೆ ಮಾಡಬೇಕು ಎಂದು ಹೇಳಿ ನಮ್ಮೊಡನೆ ಬರಲು ನಿರಾಕರಿಸಿದರು. ಆಕೆ, 1 ನಾಯಿ, 1 ಆಮೆ, ಹಳದಿ ಬಣ್ಣದ ಪುಟ್ಟ ಪಕ್ಷಿಗಳು, 2 ಗಿಳಿಗಳನ್ನು ಸಾಕಿದ್ದರು ಎಂದು ನೆರೆಮನೆಯವರು ‘ಸಿಎನ್‌ಎನ್’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವೃದ್ದೆ ರೋಸಿಲ್ಲಿ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದ್ದರೆ, ಎಕ್ಟರ್ ಶಾ ಕಳೇಬರ ರಸ್ತೆಮೇಲೆ ಬಹುತೇಕ ದಹಿಸಿಹೋದ ಸ್ಥಿತಿಯಲ್ಲಿ ರಕ್ಷಣಾ ಕಾರ್ಯಕರ್ತರ ಕಣ್ಣಿಗೆ ಬಿದ್ದಿದೆ.

ದುರುಳರಿಂದ ಲೂಟಿ

ಕಾಡಿಚ್ಚಿಗೆ ಸಿಲುಕಿದವರು ಜೀವ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಮತ್ತೊಂದಡೆ ಕಳ್ಳರು, ಲೂಟಿಕೋರರ ಹಾವಳಿ ಶುರುವಾಗಿದೆ. ಕಾಡಿಚ್ಚಿನ ಕಾರಣ ಸ್ಥಳಾಂತರಗೊಂಡವರ ಸಾಂಟಾ ಮೋನಿಕಾ ನಗರದಲ್ಲಿನ ಮನೆಗಳಿಗೆ ನುಗ್ಗುತ್ತಿರುವ ಲೂಟಿಕೋರರು ಕೈಗೆ ಸಿಕ್ಕಿದ್ದನ್ನೆಲ್ಲಾ ಬಾಚಿಕೊಂಡು ಹೋಗುತ್ತಿದ್ದಾರೆ.

ಈ ಬಗ್ಗೆ ಮನೆ ಮಾಲೀಕರು ದೂರಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಈವರೆಗೆ ಲೂಟಿಯಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ಸಾಂಟಾ ಮೋನಿಕಾ ನಗರದಲ್ಲಿ ಕರ್ಮ್ಯೂ ಘೋಷಿಸಲಾಗಿದೆ. ಜನರ ಆಸ್ತಿ ರಕ್ಷಣೆಗೆ ನ್ಯಾಷನಲ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!