los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಲಾಸ್‌ಎಂಜಲೀಸ್‌ ?(los angeles fire): ಅಮೆರಿಕ ಈವರೆಗೂ ಕಂಡುಕೇಳರಿಯದಂತಹ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಲಾಸ್‌ ಏಂಜಲೀಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾ ಭಾಗದಲ್ಲಿ ಕಳೆದ 4 ದಿನಗಳಿಂದ ಹಬ್ಬುತ್ತಲೇ ಇರುವ ಕಾಡ್ಡಿಚ್ಚು, ಈವರೆಗೆ 11 ಜೀವಗಳನ್ನು ಬಲಿತೆಗೆದುಕೊಂಡಿದೆ.

ಲಾಸ್‌ಎಂಜಲೀಸ್ ರಾಜ್ಯವೊಂದರಲ್ಲಿ 12 ಸಾವಿರಕ್ಕೂ ಅಧಿಕ ಕಟ್ಟಡಗಳು ಭಸ್ಮವಾಗಿವೆ. ಹಾನಿ ಪ್ರಮಾಣ 13 ಲಕ್ಷ ಕೋಟಿ ರು. ತಲುಪಿದೆ ಎಂದ ಅಂದಾಜಿಸಲಾಗಿದೆ.

ಸತತ ಬೆಂಕಿಯಲ್ಲಿ ಬೇಯುತ್ತಿರುವ ಲಾಸ್‌ ಏಂಜಲೀಸ್ ರಾಜ್ಯದಲ್ಲಿ ಗುರುವಾರ ಸಂಜೆ 7ರ ವೇಳೆಗೆಲ್ಲಾ ಒಟ್ಟಾರೆ 38 ಸಾವಿರ ಎಕರೆಗಳಿಗೂ ಅಧಿಕ ವಿಸ್ತಾರದ ಪ್ರದೇಶ ಕಾಡಿಚ್ಚಿನ ಆರ್ಭಟಕ್ಕೆ ಸಿಲುಕಿ ಅಕ್ಷರಶಃ ಭಸ್ಮವಾಗಿದೆ.

ಲಾಸ್ ಏಂಜಲೀಸ್ ಭಾಗದಲ್ಲಿಯೇ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ದೃಢಪಟ್ಟಿದೆ. ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಐವರು, ವಿಕ್ಟರ್ ಷಾ ಈಟನ್ ಫೈರ್‌ನಲ್ಲಿ ಆರು ಮಂದಿ ದಹಿಸಿಹೋಗಿದ್ದಾರೆ. ಆದರೆ, ಪ್ಯಾಲಿಸೇಡ್ಸ್ ಫೈರ್‌ನಲ್ಲಿ ಮಡಿದವರಲ್ಲಿ ನಾಲ್ವರ ಗುರುತು ಪತ್ತೆಯಾಗಿದ್ದು, ಆನೆಟ್ ರೋಸಿಲ್ಲಿ (86), ರಾಗ್ನಿ ನಿಕರ್ಸನ್(82), ವಿಕ್ಟರ್ ಶಾ(66), ವಿಶೇಷಚೇತನ ವ್ಯಕ್ತಿ ಆಂಥೋಣಿ ಮಿಷೆಲ್ (67) ಮತ್ತು ಅವರ ಪುತ್ರ ಜಸ್ಟಿನ್ ಎಂದು ಗುರುತಿಸಲಾಗಿದೆ.

ಉಳಿದವರ ಮೃತದೇಹಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಿದೆ ಎಂದು ಲಾಸ್ ಎಂಜಲೀಸ್ ಕೌಂಟಿಯ ಮೆಡಿಕಲ್ ಎಕ್ಸಾಮಿನ‌ರ್ ಕಚೇರಿ ಶನಿವಾರ ತಿಳಿಸಿದೆ.

ಕಾಡಿಚ್ಚಿಗೆ ಬಲಿಯಾದವರ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಕಾಡಿಚ್ಚು ಹಾನಿ ಮಾಡಿ ಮುಂದಕ್ಕೆ ಹೋಗಿರುವ ಪ್ರದೇಶಗಳಲ್ಲಿ ಶ್ವಾನಪಡೆಯ ನೆರವು ಪಡೆದು ಶೋಧ ಮತ್ತು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಹರಡುತ್ತಲೇ ಇರುವ ಬೆಂಕಿ

ಒಂದೆಡೆ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದರೆ, ಇನ್ನೊಂದೆಡೆ, ಕಾಡ್ತಿಚ್ಚು ವಿಸ್ತಾರಗೊಳ್ಳುತ್ತಲೇ ಸಾಗಿದೆ. ಶುಕ್ರವಾರ ಸಂಜೆಯ ವೇಳೆಗೆ ಬೆಂಕಿ ಮತ್ತಷ್ಟು ವ್ಯಾಪಿಸಿದೆ. ಹೊಸದಾಗಿ ವೆಸ್ಟ್ ಹಿಲ್ಸ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಲಾಸ್ ಏಂಜಲೀಸ್ ನಗರದಿಂದ 40 ಕಿ.ಮೀ. ದೂರದಲ್ಲಿ ಕಾಡಿಚ್ಚು ಹರಡುತ್ತಿದೆ. ಕಳೆದೆರಡು ದಶಕಗಳಿಂದ ಮಳೆಯಿ ಲ್ಲದೆ ಗಿಡಮರಗಳೆಲ್ಲಾ ಒಣಗಿದ್ದರಿಂದ ಬೆಂಕಿ ಹೊತ್ತಿಕೊಂಡು ಗಾಳಿಯಿಂದಾಗಿ ಹರಡುತ್ತಿದೆ ಎನ್ನಲಾಗಿದೆಯಾದರೂ, ಕಾಡಿಚ್ಚು ಸೃಷ್ಟಿಗೆ ಮೂಲ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಲಿವುಡ್‌ಗೆ ಬೆಂಕಿ

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು. ಆದರೆ ಬಿರುಗಾಳಿ ವೇಗವಾಗಿ ಬೀಸತೊಡಗಿದ ಕಾರಣ ಮತ್ತೆ ಬೆಂಕಿ ಹರಡಲಾರಂಭಿಸಿತು.

ವೃದ್ದೆ ರೋಸಿಲ್ಲಿ ಅವರಿಗೆ ಕಾಡ್ಡಿಚ್ಚು ಹರುಡುತ್ತಿರುವ ಬಗ್ಗೆ ಎಚ್ಚರಿಸಿದೆವು. ತಕ್ಷಣವೇ ಮನೆ ಖಾಲಿ ಮಾಡಿ ನಮ್ಮೊಡನೆ ಸುರಕ್ಷಿತ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದೆವು. ಆದರೆ, ಆಕೆ ಸಾಕು ಪ್ರಾಣಿಗಳ ರಕ್ಷಣೆ ಮಾಡಬೇಕು ಎಂದು ಹೇಳಿ ನಮ್ಮೊಡನೆ ಬರಲು ನಿರಾಕರಿಸಿದರು. ಆಕೆ, 1 ನಾಯಿ, 1 ಆಮೆ, ಹಳದಿ ಬಣ್ಣದ ಪುಟ್ಟ ಪಕ್ಷಿಗಳು, 2 ಗಿಳಿಗಳನ್ನು ಸಾಕಿದ್ದರು ಎಂದು ನೆರೆಮನೆಯವರು ‘ಸಿಎನ್‌ಎನ್’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ವೃದ್ದೆ ರೋಸಿಲ್ಲಿ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದ್ದರೆ, ಎಕ್ಟರ್ ಶಾ ಕಳೇಬರ ರಸ್ತೆಮೇಲೆ ಬಹುತೇಕ ದಹಿಸಿಹೋದ ಸ್ಥಿತಿಯಲ್ಲಿ ರಕ್ಷಣಾ ಕಾರ್ಯಕರ್ತರ ಕಣ್ಣಿಗೆ ಬಿದ್ದಿದೆ.

ದುರುಳರಿಂದ ಲೂಟಿ

ಕಾಡಿಚ್ಚಿಗೆ ಸಿಲುಕಿದವರು ಜೀವ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಮತ್ತೊಂದಡೆ ಕಳ್ಳರು, ಲೂಟಿಕೋರರ ಹಾವಳಿ ಶುರುವಾಗಿದೆ. ಕಾಡಿಚ್ಚಿನ ಕಾರಣ ಸ್ಥಳಾಂತರಗೊಂಡವರ ಸಾಂಟಾ ಮೋನಿಕಾ ನಗರದಲ್ಲಿನ ಮನೆಗಳಿಗೆ ನುಗ್ಗುತ್ತಿರುವ ಲೂಟಿಕೋರರು ಕೈಗೆ ಸಿಕ್ಕಿದ್ದನ್ನೆಲ್ಲಾ ಬಾಚಿಕೊಂಡು ಹೋಗುತ್ತಿದ್ದಾರೆ.

ಈ ಬಗ್ಗೆ ಮನೆ ಮಾಲೀಕರು ದೂರಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಈವರೆಗೆ ಲೂಟಿಯಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ಸಾಂಟಾ ಮೋನಿಕಾ ನಗರದಲ್ಲಿ ಕರ್ಮ್ಯೂ ಘೋಷಿಸಲಾಗಿದೆ. ಜನರ ಆಸ್ತಿ ರಕ್ಷಣೆಗೆ ನ್ಯಾಷನಲ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ (R Ashoka) ಭೇಟಿ ನೀಡಿ ಸಾಂತ್ವನ ಹೇಳಿದರು.

[ccc_my_favorite_select_button post_id="102357"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!